ಪ್ರತಿಭಟನೆ ನಡೆಸುತ್ತಿರುವ ಕಾಶ್ಮೀರಿ ಪಂಡಿತರು. 
ದೇಶ

ಪುನರ್ವಸತಿ ಕಲ್ಪಿಸದಿರುವುದು ಸರ್ಕಾರದ ಕಾರ್ಯವೈಖರಿಯ ದೊಡ್ಡ ವೈಫಲ್ಯ: ಜಮ್ಮುವಿನಲ್ಲಿ ಪ್ರತಿಭಟನೆಗಿಳಿದ ಕಾಶ್ಮೀರಿ ಪಂಡಿತರು

ಪುನರ್ವಸತಿ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರು ಸೋಮವಾರ ಪ್ರತಿಭಟನೆಗಿಳಿದಿದ್ದಾರೆ.

ಜಮ್ಮು: ಪುನರ್ವಸತಿ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರು ಸೋಮವಾರ ಪ್ರತಿಭಟನೆಗಿಳಿದಿದ್ದಾರೆ.

1989ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಬಂದೂಕು ಹಿಡಿದು ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದಾಗ ಕಾಶ್ಮೀರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಿ ಪಂಡಿತರು ವಲಸೆ ಬಂದಿದ್ದರು. ಸರ್ಕಾರವು ಈ ಪಂಡಿತರಿಗೆ ಉಧಂಪುರ ಮತ್ತು ಜಮ್ಮುವಿನಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿತ್ತು. ಅದಲ್ಲದೇ ಇತರ ಅನೇಕ ಪಂಡಿತರು ದೇಶದ ವಿವಿಧ ನಗರಗಳಿಗೆ ವಲಸೆ ಹೋಗಿದ್ದರು.

ಒಂದೆಡೆ ಪಂಡಿತರ ಪುನರ್ವಸತಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳುತ್ತಿದ್ದರೆ, ಇನ್ನೊಂದೆಡೆ ಸರ್ಕಾರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಡಿತರು ಆರೋಪಿಸಿದ್ದಾರೆ.

ಪ್ರತಿಭಟನೆ ವೇಳೆ ಕಾಶ್ಮೀರಿ ಪಂಡಿತರು, ಪುನರ್ವಸತಿ ಕಲ್ಪಿಸದಿರುವುದು ಸರ್ಕಾರದ ಕಾರ್ಯವೈಖರಿಯ ದೊಡ್ಡ ವೈಫಲ್ಯವಾಗಿದೆ. ನಮ್ಮದೇ ದೇಶದಲ್ಲಿ ನಾವು ಶಿಕ್ಷೆಗೊಳಗಾಗಿದ್ದೇವೆ. ದೊಡ್ಡ ಹತ್ಯಾಕಾಂಡಕ್ಕೆ ಸರ್ಕಾರ ಕಾಯುತ್ತಿದೆಯೇ? ಕಾಶ್ಮೀರದಲ್ಲಿ ಅಲ್ಪಸಂಖ್ಯಾತರು ಅಸುರಕ್ಷಿತರಾಗಿದ್ದಾರೆಂಬ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಐವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navy ಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ! Video

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

Indre Nemdiyag Irbek: ಯೂ ಟ್ಯೂಬ್ ನಲ್ಲಿ ಧೂಳೆಬ್ಬಿಸುತ್ತಿರುವಂತೆ ವಿವಾದಕ್ಕೆ ಗುರಿಯಾದ Devil ಸಾಂಗ್! ಟ್ಯೂನ್ ಕದ್ದ ಆರೋಪ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

SCROLL FOR NEXT