ಪ್ರತಿಭಟನೆ ನಡೆಸುತ್ತಿರುವ ಕಾಶ್ಮೀರಿ ಪಂಡಿತರು. 
ದೇಶ

ಪುನರ್ವಸತಿ ಕಲ್ಪಿಸದಿರುವುದು ಸರ್ಕಾರದ ಕಾರ್ಯವೈಖರಿಯ ದೊಡ್ಡ ವೈಫಲ್ಯ: ಜಮ್ಮುವಿನಲ್ಲಿ ಪ್ರತಿಭಟನೆಗಿಳಿದ ಕಾಶ್ಮೀರಿ ಪಂಡಿತರು

ಪುನರ್ವಸತಿ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರು ಸೋಮವಾರ ಪ್ರತಿಭಟನೆಗಿಳಿದಿದ್ದಾರೆ.

ಜಮ್ಮು: ಪುನರ್ವಸತಿ ವಿಚಾರ ಸಂಬಂಧ ಸರ್ಕಾರದ ವಿರುದ್ಧ ಜಮ್ಮುವಿನಲ್ಲಿ ಕಾಶ್ಮೀರಿ ಪಂಡಿತರು ಸೋಮವಾರ ಪ್ರತಿಭಟನೆಗಿಳಿದಿದ್ದಾರೆ.

1989ರಲ್ಲಿ ಕಾಶ್ಮೀರದ ಕಣಿವೆಯಲ್ಲಿ ಪ್ರತ್ಯೇಕತಾವಾದಿಗಳು ಬಂದೂಕು ಹಿಡಿದು ಸರ್ಕಾರದ ವಿರುದ್ಧ ಕಾರ್ಯಾಚರಣೆ ನಡೆಸಿದಾಗ ಕಾಶ್ಮೀರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಕಾಶ್ಮೀರಿ ಪಂಡಿತರು ವಲಸೆ ಬಂದಿದ್ದರು. ಸರ್ಕಾರವು ಈ ಪಂಡಿತರಿಗೆ ಉಧಂಪುರ ಮತ್ತು ಜಮ್ಮುವಿನಲ್ಲಿ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಿತ್ತು. ಅದಲ್ಲದೇ ಇತರ ಅನೇಕ ಪಂಡಿತರು ದೇಶದ ವಿವಿಧ ನಗರಗಳಿಗೆ ವಲಸೆ ಹೋಗಿದ್ದರು.

ಒಂದೆಡೆ ಪಂಡಿತರ ಪುನರ್ವಸತಿಗಾಗಿ ಸಾವಿರಾರು ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸರಕಾರ ಹೇಳುತ್ತಿದ್ದರೆ, ಇನ್ನೊಂದೆಡೆ ಸರ್ಕಾರ ಪಂಡಿತರಿಗೆ ಪುನರ್ವಸತಿ ಕಲ್ಪಿಸಲು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪಂಡಿತರು ಆರೋಪಿಸಿದ್ದಾರೆ.

ಪ್ರತಿಭಟನೆ ವೇಳೆ ಕಾಶ್ಮೀರಿ ಪಂಡಿತರು, ಪುನರ್ವಸತಿ ಕಲ್ಪಿಸದಿರುವುದು ಸರ್ಕಾರದ ಕಾರ್ಯವೈಖರಿಯ ದೊಡ್ಡ ವೈಫಲ್ಯವಾಗಿದೆ. ನಮ್ಮದೇ ದೇಶದಲ್ಲಿ ನಾವು ಶಿಕ್ಷೆಗೊಳಗಾಗಿದ್ದೇವೆ. ದೊಡ್ಡ ಹತ್ಯಾಕಾಂಡಕ್ಕೆ ಸರ್ಕಾರ ಕಾಯುತ್ತಿದೆಯೇ? ಕಾಶ್ಮೀರದಲ್ಲಿ ಅಲ್ಪಸಂಖ್ಯಾತರು ಅಸುರಕ್ಷಿತರಾಗಿದ್ದಾರೆಂಬ ಘೋಷಣಾ ವಾಕ್ಯಗಳನ್ನು ಪ್ರದರ್ಶಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT