ಗುಲಾಂ ನಬಿ ಆಜಾದ್ 
ದೇಶ

ಕಾಶ್ಮೀರಿ ಪಂಡಿತರ ಸುರಕ್ಷತೆ ಮುಖ್ಯವಾಗಿದ್ದು, ಅವರನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು: ಗುಲಾಂ ನಬಿ ಆಜಾದ್

ಕಾಶ್ಮೀರಿ ಪಂಡಿತರ ಸುರಕ್ಷತೆ ಮುಖ್ಯವಾಗಿದ್ದು, ಕೂಡಲೇ ಅವರನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು ಎಂದು ಡೆಮಾಕ್ರಟಿಕ್ ಆಜಾದ್ (ಡಿಎಪಿ) ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.

ಶ್ರೀನಗರ: ಕಾಶ್ಮೀರಿ ಪಂಡಿತರ ಸುರಕ್ಷತೆ ಮುಖ್ಯವಾಗಿದ್ದು, ಕೂಡಲೇ ಅವರನ್ನು ಜಮ್ಮುವಿಗೆ ಸ್ಥಳಾಂತರಿಸಬೇಕು ಎಂದು ಡೆಮಾಕ್ರಟಿಕ್ ಆಜಾದ್ (ಡಿಎಪಿ) ಪಕ್ಷದ ಮುಖ್ಯಸ್ಥ ಗುಲಾಂ ನಬಿ ಆಜಾದ್ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರಿ ಪಂಡಿತರ ಸುರಕ್ಷತೆ ಮುಖ್ಯವಾಗಿದ್ದು, ಕಾಶ್ಮೀರದಲ್ಲಿ ಪರಿಸ್ಥಿತಿ ಸುಧಾರಿಸುವವರೆಗೆ ಅವರನ್ನು ತಾತ್ಕಾಲಿಕವಾಗಿ ಜಮ್ಮುವಿಗೆ ಸ್ಥಳಾಂತರಿಸಬೇಕು ಎಂದು ಹೇಳಿದ್ದಾರೆ.

ಕೆಲ ಘಟನೆಗಳು ನಡೆದಿರುವುದು ದುರಾದೃಷ್ಟಕರ ವಿಚಾರ. ಜೀವವು ಮುಖ್ಯವಾಗಿದ್ದು ಕಾಶ್ಮೀರಿ ಪಂಡಿತ್ ಉದ್ಯೋಗಿಗಳನ್ನು ಜಮ್ಮುವಿನ ಸುರಕ್ಷಿತ ಸ್ಥಳಗಳಿಗೆ ವರ್ಗಾಯಿಸಬೇಕು. ಪರಿಸ್ಥಿತಿ ಸುಧಾರಿಸಿದ ಬಳಿಕ ಮರಳಿ ಕಾಶ್ಮೀರಕ್ಕೆ ಕರೆ ತರಬೇಕು" ಎಂದು ತಿಳಿಸಿದರು.

ಉದ್ಯೋಗಕ್ಕಿಂತ ಜೀವಗಳು ಬಹಳ ಮುಖ್ಯ. ಜಮ್ಮು ಮತ್ತು ಕಾಶ್ಮೀರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಇಂತಹ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

"ಸರ್ಕಾರದ ವಿಧಾನ ಏನೆಂಬುದು ನನಗೆ ತಿಳಿದಿಲ್ಲ, ಆದರೆ, ನಮ್ಮ ಪಕ್ಷವು ಅಧಿಕಾರಕ್ಕೆ ಬಂದರೆ, ನಾವು ಇದನ್ನು ಮಾಡುತ್ತೇವೆ (ತಾತ್ಕಾಲಿಕವಾಗಿ ಕಾಶ್ಮೀರಿ ಪಂಡಿತರನ್ನು ಜಮ್ಮುವಿಗೆ ಸ್ಥಳಾಂತರಿಸುವುದು) ಎಂದು ಹೇಳಿದರು.

ಜಮ್ಮು-ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆ ವಿಳಂಬವಾಗುತ್ತಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, “ನಾವು ಕಳೆದ ಆರು ವರ್ಷಗಳಿಂದ ಕಾಯುತ್ತಿದ್ದೇವೆ. ಸಂಸತ್ತಿನಲ್ಲೂ ಹಲವು ಬಾರಿ ಈ ವಿಷಯವನ್ನು ಪ್ರಸ್ತಾಪಿಸಿದ್ದೇನೆ. ಅವರು ನಮಗೆ ಪಂಚಾಯತ್ ಚುನಾವಣೆ ಅಥವಾ ಡಿಡಿಸಿ ಚುನಾವಣೆಗಳನ್ನು ನಡೆಸುವುದಾಗಿ ಹೇಳುತ್ತಿದ್ದಾರೆ, ಆದರೆ ನಿಜವಾದ ಚುನಾವಣೆಯಾಗಿರುವ ವಿಧಾನಸಭೆಯ ಚುನಾವಣೆ ನಡೆಸುತ್ತಿಲ್ಲ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT