ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊರೋನಾ ಪರೀಕ್ಷೆ 
ದೇಶ

ದೆಹಲಿ ವಿಮಾನ ನಿಲ್ದಾಣದಲ್ಲಿ ವಿದೇಶಗಳಿಂದ ಬರುವ ಪ್ರಯಾಣಿಕರಿಗೆ ರ್ಯಾಂಡಮ್ ಕೊರೋನಾ ಟೆಸ್ಟ್: ಕೆಲವರಲ್ಲಿ ಪಾಸಿಟಿವ್ ವರದಿ

ನಿನ್ನೆ ಭಾನುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸಿದ ಪ್ರಯಾಣಿಕರ ಯಾದೃಚ್ಛಿಕ ಕೋವಿಡ್ ಪರೀಕ್ಷೆಯು(Random covid test) ಎರಡನೇ ದಿನವಾದ ಇಂದು ಸೋಮವಾರವೂ ಮುಂದುವರಿದಿದೆ. ಕೆಲವು ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ನವದೆಹಲಿ: ನಿನ್ನೆ ಭಾನುವಾರ ದೆಹಲಿ ವಿಮಾನ ನಿಲ್ದಾಣಕ್ಕೆ ವಿದೇಶಗಳಿಂದ ಆಗಮಿಸಿದ ಪ್ರಯಾಣಿಕರ ಯಾದೃಚ್ಛಿಕ ಕೋವಿಡ್ ಪರೀಕ್ಷೆಯು(Random covid test) ಎರಡನೇ ದಿನವಾದ ಇಂದು ಸೋಮವಾರವೂ ಮುಂದುವರಿದಿದೆ. ಕೆಲವು ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ.

ದೆಹಲಿ ವಿಮಾನ ನಿಲ್ದಾಣದಲ್ಲಿ, ಮೊನ್ನೆ ಶನಿವಾರ ಬೆಳಗ್ಗೆ 10 ರಿಂದ ನಿನ್ನೆ ಭಾನುವಾರ ಸಂಜೆ 7 ರವರೆಗೆ 455 ಪ್ರಯಾಣಿಕರನ್ನು ಯಾದೃಚ್ಛಿಕ ಕೊರೋನಾವೈರಸ್ ಪರೀಕ್ಷೆಗೆ ಒಳಪಡಿಸಲಾಗಿದೆ. ಅವುಗಳಲ್ಲಿ ಅರ್ಧಕ್ಕಿಂತ ಕಡಿಮೆ ಪಾಸಿಟಿವ್ ಪ್ರಕರಣಗಳಾಗಿವೆ ಎಂದು ಜೆನೆಸ್ಟ್ರಿಂಗ್ ಡಯಾಗ್ನೋಸ್ಟಿಕ್ ಸೆಂಟರ್‌ನ ಅಧಿಕಾರಿ ತಿಳಿಸಿದ್ದಾರೆ.

ನಿರ್ದಿಷ್ಟ ವಿವರಗಳನ್ನು ತಕ್ಷಣವೇ ಕಂಡುಹಿಡಿಯಲಾಗಲಿಲ್ಲ. ಜೆನೆಸ್ಟ್ರಿಂಗ್ಸ್ ದೆಹಲಿ ವಿಮಾನ ನಿಲ್ದಾಣದಲ್ಲಿ ಕೊರೋನವೈರಸ್ ಪರೀಕ್ಷೆಗಳನ್ನು ನಡೆಸುತ್ತಿದೆ.

ಚೀನಾ ಸೇರಿದಂತೆ ವಿವಿಧ ದೇಶಗಳಲ್ಲಿ ಕೊರೋನವೈರಸ್ ಪ್ರಕರಣಗಳ ಉಲ್ಬಣದ ಮಧ್ಯೆ ಶನಿವಾರದಿಂದ ಪ್ರತಿ ಅಂತಾರಾಷ್ಟ್ರೀಯ ವಿಮಾನದಲ್ಲಿ ಬರುವ ಶೇಕಡಾ ಎರಡರಷ್ಟು ಪ್ರಯಾಣಿಕರಿಗೆ ಯಾದೃಚ್ಛಿಕ ಕೊರೋನಾವೈರಸ್ ಪರೀಕ್ಷೆಯನ್ನು ಸರ್ಕಾರವು ಕಡ್ಡಾಯಗೊಳಿಸಿದೆ.

ಸರಾಸರಿ 25,000 ಪ್ರಯಾಣಿಕರು ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (IGIA) ಆಗಮಿಸುತ್ತಾರೆ ಮತ್ತು ಅವರಲ್ಲಿ 500 ಯಾದೃಚ್ಛಿಕ ಪ್ರಯಾಣಿಕರನ್ನು ಪರೀಕ್ಷಿಸಲಾಗುತ್ತಿದೆ ಎಂದು ಅದು ಹೇಳಿದೆ. ಕಂಪನಿಯು ವಿಮಾನ ನಿಲ್ದಾಣದಲ್ಲಿ ಮಾದರಿ ಸಂಗ್ರಹಣೆ ಮತ್ತು ಪರೀಕ್ಷೆಗಾಗಿ ಸಿಬ್ಬಂದಿಯನ್ನು ಹೆಚ್ಚಿಸಿದೆ. 

ಕೋವಿಡ್ ನಿರ್ವಹಣೆಗೆ ಸಂಪೂರ್ಣವಾಗಿ ಸಿದ್ಧರಾಗುವುದರ ಜೊತೆಗೆ ಲಭ್ಯತೆ ಮತ್ತು ಸಮಯೋಚಿತ ವರದಿಯನ್ನು ಖಚಿತಪಡಿಸಿಕೊಳ್ಳಲು ನಾವು ಸೌಲಭ್ಯದಲ್ಲಿ ಲ್ಯಾಬ್ ತಂತ್ರಜ್ಞರ ಮಾನವಶಕ್ತಿಯನ್ನು ಹೆಚ್ಚಿಸಿದ್ದೇವೆ' ಎಂದು ಜೆನೆಸ್ಟ್ರಿಂಗ್ಸ್ ಸಂಸ್ಥಾಪಕ ಗೌರಿ ಅಗರ್ವಾಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಬೇಡಿಕೆಗೆ ಅನುಗುಣವಾಗಿ ಮಾನವಶಕ್ತಿಯನ್ನು ಮತ್ತಷ್ಟು ಹೆಚ್ಚಿಸಲಾಗುವುದು ಎಂದು ಜೆನೆಸ್ಟ್ರಿಂಗ್ಸ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೇತನ್ ಕೊಹ್ಲಿ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT