ಪ್ರಕರಣದ ಆರೋಪಿಗಳು 
ದೇಶ

ಟಿಆರ್ ಎಸ್ ಶಾಸಕರ ಖರೀದಿ ಪ್ರಕರಣ: ಸಿಬಿಐ ತನಿಖೆಗೆ ತೆಲಂಗಾಣ ಹೈಕೋರ್ಟ್ ಆದೇಶ

ಟಿಆರ್ ಎಸ್(ಈಗ ಬಿಆರ್ ಎಸ್) ಶಾಸಕರ ಖರೀದಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಹೈದರಾಬಾದ್: ಟಿಆರ್ ಎಸ್(ಈಗ ಬಿಆರ್ ಎಸ್) ಶಾಸಕರ ಖರೀದಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿ ತೆಲಂಗಾಣ ಹೈಕೋರ್ಟ್ ಸೋಮವಾರ ಆದೇಶಿಸಿದೆ.

ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿ ಬಿಜೆಪಿ ಮತ್ತು ಪ್ರಕರಣದ ಆರೋಪಿಗಳು ಸಲ್ಲಿಸಿದ ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್, ಹೈಕೋರ್ಟ್ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಲು ನಿರ್ದೇಶನ ನೀಡಿದೆ. 

ಪ್ರಕರಣದ ತನಿಖೆಗೆ ತೆಲಂಗಾಣ ಸರ್ಕಾರ ರಚಿಸಿರುವ ಎಸ್‌ಐಟಿ ತನಿಖೆಯಲ್ಲಿ ನಮಗೆ ನಂಬಿಕೆ ಇಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಅರ್ಜಿದಾರರು ಮನವಿ ಮಾಡಿದ್ದರು. ಅರ್ಜಿದಾರರ ಮನವಿಯನ್ನು ಪರಿಗಣಿಸಿದ ಹೈಕೋರ್ಟ್ ಪ್ರಕರಣವನ್ನು ಕೇಂದ್ರೀಯ ತನಿಖಾ ಸಂಸ್ಥೆಗೆ ವರ್ಗಾಯಿಸಲು ಆದೇಶಿಸಿದೆ.

ತೆಲಂಗಾಣ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಇದುವರೆಗೆ ಮೂವರು ಪ್ರಮುಖ ಆರೋಪಿಗಳಾದ ರಾಮಚಂದ್ರ ಭಾರತಿ, ಸಿಂಹಯಾಜಿ ಮತ್ತು ನಂದುಕುಮಾರ್ ಅವರನ್ನು ಬಂಧಿಸಿ ವಿಚಾರಣೆಗೊಳಪಡಿಸಿದೆ. ನಂತರ ಈ ಆರೋಪಿಗಳು ನ್ಯಾಯಾಲಯದಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್; ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

'ಸತ್ಯವನ್ನು ಎದುರಿಸುವ ಧೈರ್ಯವಿಲ್ಲ': ಭಾರತದ ಕಮ್ಯುನಿಸ್ಟರು ಸಂಪೂರ್ಣ ಹೇಡಿಗಳು; ನಿರ್ಮಲಾ ಸೀತಾರಾಮನ್ ವಾಗ್ದಾಳಿ

ರಾಸಾಯನಿಕ ತ್ಯಾಜ್ಯ ಬಿಡುಗಡೆ ಆರೋಪ: ಬೀದರ್‌ನ 3 ಕೈಗಾರಿಕೆಗಳ ಬಂದ್ ಗೆ ಸಚಿವ ಈಶ್ವರ್ ಖಂಡ್ರೆ ನಿರ್ದೇಶನ

ರಾಮ ಮಂದಿರ ಟ್ರಸ್ಟ್‌ CEO ಹುದ್ದೆಗೆ ಬರೋಬ್ಬರಿ 5,200 ಅರ್ಜಿ; ಸಂದರ್ಶನಕ್ಕೆ ಕೇವಲ 20 ಅಭ್ಯರ್ಥಿಗಳು ಆಯ್ಕೆ!