ಭಾರತ್ ಬಯೋಟೆಕ್ ನಾಸಲ್ ಕೋವಿಡ್ ಲಸಿಕೆ 
ದೇಶ

ಮೂಗಿನ ಮೂಲಕ ನೀಡುವ ಕೋವಿಡ್ ಲಸಿಕೆಗೆ ದರ ನಿಗದಿ: ಒಂದು ಡೋಸ್​ಗೆ 800 ರೂಪಾಯಿ!

ವಿಶ್ವದ ಮೊದಲ ಇಂಟ್ರಾನಾಸಲ್‌ ಕೋವಿಡ್ ಲಸಿಕೆ‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತ್ ಬಯೋಟೆಕ್ ಸಂಸ್ಥೆಯ iNCOVACC ಅಥವಾ BBV154 ಕೋವಿಡ್ ಲಸಿಕೆಗೆ ದರ ನಿಗದಿ ಮಾಡಲಾಗಿದ್ದು, ಪ್ರತೀ ಡೋಸ್​ಗೆ 800 ರೂಪಾಯಿ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ನವದೆಹಲಿ: ವಿಶ್ವದ ಮೊದಲ ಇಂಟ್ರಾನಾಸಲ್‌ ಕೋವಿಡ್ ಲಸಿಕೆ‌ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಭಾರತ್ ಬಯೋಟೆಕ್ ಸಂಸ್ಥೆಯ iNCOVACC ಅಥವಾ BBV154 ಕೋವಿಡ್ ಲಸಿಕೆಗೆ ದರ ನಿಗದಿ ಮಾಡಲಾಗಿದ್ದು, ಪ್ರತೀ ಡೋಸ್​ಗೆ 800 ರೂಪಾಯಿ ನಿಗದಿ ಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಭಾರತ್‌ ಬಯೋಟೆಕ್‌ ಈ ಲಸಿಕೆಯನ್ನು ವಾಷಿಂಗ್ಟನ್‌ ಯೂನಿವರ್ಸಿಟಿ ಸೇಂಟ್‌ ಲೂಯಿಸ್‌ ಸಹಭಾಗಿತ್ವದಲ್ಲಿ ಅಭಿವೃದ್ಧಿಪಡಿಸಿಗದ್ದು, ವಿಶ್ವದ ಮೊದಲ ಇಂಟ್ರಾನಾಸಲ್‌ ಕೋವಿಡ್ ಲಸಿಕೆ‌ ಎಂಬ ಹೆಗ್ಗಳಿಕೆಗೆ iNCOVACC ಅಥವಾ BBV154 ಲಸಿಕೆಯು ಪಾತ್ರವಾಗಿದೆ. ಮೂಗಿನ ಮೂಲಕ ಎರಡು ಹನಿಯನ್ನು ತೆಗೆದುಕೊಳ್ಳಬೇಕಾಗುತ್ತದೆ ಮತ್ತು ಇದು ಇಂಜೆಕ್ಟ್​ ಮಾಡುವ ಲಸಿಕೆಗಿಂತಲೂ ಸುರಕ್ಷಿತ ಎನ್ನಲಾಗಿದೆ.

ಈ ಇಂಟ್ರಾನಾಸಲ್​ ಲಸಿಕೆಯ ಒಂದು ಡೋಸ್​​ಗೆ ಖಾಸಗಿ ಆಸ್ಪತ್ರೆಗಳಲ್ಲಿ 800 ರೂಪಾಯಿ (+ ಶೇ.5ರಷ್ಟು ಜಿಎಸ್​ಟಿ ಸೇರಿ ಒಂದು ಡೋಸ್​ಗೆ 840 ರೂ.) ಇರಲಿದೆ. ಈ ಲಸಿಕೆ ಸದ್ಯ ಡಿಸೆಂಬರ್​ 23ರಿಂದ ಖಾಸಗಿ ಆಸ್ಪತ್ರೆಗಳಲ್ಲಿ ಮಾತ್ರ ಲಭ್ಯವಾಗುತ್ತಿದೆ. ಮುಂಬರುವ ದಿನಗಳಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲೂ ಲಭ್ಯವಾಗಲಿದ್ದು, ಇಲ್ಲಿ ಬೆಲೆ ಒಂದು ಡೋಸ್​​ಗೆ 325 ರೂಪಾಯಿ ಇರಲಿದೆ ಎಂದು ಹೇಳಲಾಗಿದೆ.

ಇಲ್ಲಿ ಖಾಸಗಿ ಆಸ್ಪತ್ರೆಗಳು ಲಸಿಕೀಕರಣದ ನಿರ್ವಹಣಾ ವೆಚ್ಚವನ್ನಾಗಿ 150 ರೂಪಾಯಿ ಶುಲ್ಕವನ್ನು ಜನಸಾಮಾನ್ಯರಿಗೆ ವಿಧಿಸಬಹುದಾಗಿದೆ. ಹೀಗೆ ಎಲ್ಲ ಸೇರಿಸಿದರೆ ಈ ಇಂಟ್ರಾನಾಸಲ್​ ಕೊವಿಡ್​ 19 ಲಸಿಕೆಯ ಒಂದು ಡೋಸ್​​ ಪಡೆಯಲು ಸುಮಾರು 1000 ರೂಪಾಯಿ ಖರ್ಚಾಗಬಹುದು ಎಂದು ಅಂದಾಜಿಸಲಾಗಿದೆ.

ವಿಶ್ವದ ಮೊದಲ ಇಂಟ್ರಾನಾಸಲ್‌ ಕೋವಿಡ್ ಲಸಿಕೆ‌ ಎನ್ನಿಸಿರುವ iNCOVACC ನ್ನು ವಾಷಿಂಗ್ಟನ್‌ ಯೂನಿವರ್ಸಿಟಿ ಸೇಂಟ್‌ ಲೂಯಿಸ್‌ ಸಹಭಾಗಿತ್ವದಲ್ಲಿ ಭಾರತ್​ ಬಯೋಟೆಕ್​ ಕಂಪನಿಯು ತಯಾರಿಸಿದೆ. ಈಗಾಗಲೇ ಕೊವ್ಯಾಕ್ಸಿನ್​ ಮತ್ತು ಕೊವಿಶೀಲ್ಡ್​ ಲಸಿಕೆಗಳ ಎರಡೂ ಡೋಸ್​ ಪಡೆದ 18 ವರ್ಷ ಮೇಲ್ಪಟ್ಟವರು, ಈ ಮೂಗಿನ ಮೂಲಕ ತೆಗೆದುಕೊಳ್ಳುವ ಲಸಿಕೆಯನ್ನು ಬೂಸ್ಟರ್​ ಡೋಸ್​ ಆಗಿ ಪಡೆಯಬಹುದಾಗಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT