ಅಣಕು ಕಾರ್ಯಾಚರಣೆ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ 
ದೇಶ

ಕೋವಿಡ್ ರೂಪಾಂತರಿ ಎದುರಿಸಲು ಸಿದ್ಧತೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ

ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. 

ನವದೆಹಲಿ: ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. 

ಮಾಕ್ ಡ್ರಿಲ್ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿದ್ದು, ಇಂತಹ ಪರಿಸ್ಥಿತಿಯಲ್ಲಿ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳ ಕಾರ್ಯಾಚರಣೆಯ ಸಿದ್ಧತೆ ಪರಿಶೀಲಿಸುವುದು ಮುಖ್ಯ ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರ ನಿರ್ವಹಿಸುತ್ತಿರುವ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮನ್ಸುಖ್ ಮಾಂಡವೀಯ ಅಣಕು ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಆಸ್ಪತ್ರೆಗಳಲ್ಲಿ ಇಂತಹ ಅಣಕು ಕಾರ್ಯಾಚರಣೆಯನ್ನು ನಡೆಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಕ್ಕೆ ಸೂಚನೆ ನೀಡಿತ್ತು. 

ಆಕ್ಸಿಜನ್ ಬೆಂಬಲಿತ ಬೆಡ್ ಗಳು, ಐಸಿಯು ಬೆಡ್ ಹಾಗೂ ವೆಂಟಿಲೇಟರ್ ಬೆಂಬಲಿತ ಬೆಡ್ ಗಳ ಲಭ್ಯತೆ ಹಾಗೂ ಕಾರ್ಯನಿರ್ವಹಣೆಯ ಸಾಮರ್ಥ್ಯವನ್ನು ಈ ಅಣಕು ಕಾರ್ಯಾಚರಣೆ ವೇಳೆ ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೇವಲ ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ಈ ಅಣಕು ಕಾರ್ಯಾಚರಣೆ ನಡೆಸಲಾಗಿದೆ. ಜನತೆ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿರುವುದು ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ. 

ಇನ್ನು ಜನತೆ ಕೋವಿಡ್ ಸಂಬಂಧಿತ ದೃಢಪಡದ ಮಾಹಿತಿಯನ್ನು ಹಂಚಿಕೊಳ್ಳುವುದರಿಂದ ದೂರವಿರಬೇಕು ಹಾಗೂ ಕೋವಿಡ್ ತಡೆಗೆ ಅತಿ ಹೆಚ್ಚು ಜಾಗರೂಕತೆಯಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನ್ಸುಖ್ ಮಾಂಡವೀಯ ಕರೆ ನೀಡಿದ್ದಾರೆ. ಭಾರತದಲ್ಲಿ 24 ಗಂಟೆಗಳಲ್ಲಿ 157 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT