ಅಣಕು ಕಾರ್ಯಾಚರಣೆ ಪರಿಶೀಲಿಸಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ 
ದೇಶ

ಕೋವಿಡ್ ರೂಪಾಂತರಿ ಎದುರಿಸಲು ಸಿದ್ಧತೆ: ದೇಶಾದ್ಯಂತ ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ

ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. 

ನವದೆಹಲಿ: ಕೋವಿಡ್ ಹೊಸ ರೂಪಾಂತರಿ ಬಿ.ಎಫ್.7 ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ದೇಶಾದ್ಯಂತ ಆರೋಗ್ಯ ವ್ಯವಸ್ಥೆಯ ಸಿದ್ಧತೆಯನ್ನು ಪರಿಶೀಲಿಸಲು ಆಸ್ಪತ್ರೆಗಳಲ್ಲಿ ಅಣಕು ಕಾರ್ಯಾಚರಣೆ ನಡೆಸಲಾಯಿತು. 

ಮಾಕ್ ಡ್ರಿಲ್ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ಮಾತನಾಡಿದ್ದು, ಇಂತಹ ಪರಿಸ್ಥಿತಿಯಲ್ಲಿ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳ ಕಾರ್ಯಾಚರಣೆಯ ಸಿದ್ಧತೆ ಪರಿಶೀಲಿಸುವುದು ಮುಖ್ಯ ಎಂದು ಹೇಳಿದ್ದಾರೆ. 

ಕೇಂದ್ರ ಸರ್ಕಾರ ನಿರ್ವಹಿಸುತ್ತಿರುವ ಸಫ್ದರ್ ಜಂಗ್ ಆಸ್ಪತ್ರೆಯಲ್ಲಿ ಮನ್ಸುಖ್ ಮಾಂಡವೀಯ ಅಣಕು ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪ್ರಮುಖ ಆಸ್ಪತ್ರೆಗಳಲ್ಲಿ ಇಂತಹ ಅಣಕು ಕಾರ್ಯಾಚರಣೆಯನ್ನು ನಡೆಸಲು ಕೇಂದ್ರ ಸರ್ಕಾರ ರಾಜ್ಯಗಳಿಗೆ, ಕೇಂದ್ರಾಡಳಿತ ಪ್ರದೇಶಕ್ಕೆ ಸೂಚನೆ ನೀಡಿತ್ತು. 

ಆಕ್ಸಿಜನ್ ಬೆಂಬಲಿತ ಬೆಡ್ ಗಳು, ಐಸಿಯು ಬೆಡ್ ಹಾಗೂ ವೆಂಟಿಲೇಟರ್ ಬೆಂಬಲಿತ ಬೆಡ್ ಗಳ ಲಭ್ಯತೆ ಹಾಗೂ ಕಾರ್ಯನಿರ್ವಹಣೆಯ ಸಾಮರ್ಥ್ಯವನ್ನು ಈ ಅಣಕು ಕಾರ್ಯಾಚರಣೆ ವೇಳೆ ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 

ಕೇವಲ ಸರ್ಕಾರಿ ಆಸ್ಪತ್ರೆಗಳಷ್ಟೇ ಅಲ್ಲದೇ ಖಾಸಗಿ ಆಸ್ಪತ್ರೆಗಳಲ್ಲಿಯೂ ಈ ಅಣಕು ಕಾರ್ಯಾಚರಣೆ ನಡೆಸಲಾಗಿದೆ. ಜನತೆ ಕೋವಿಡ್ ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಬೇಕಿರುವುದು ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯ ತಿಳಿಸಿದ್ದಾರೆ. 

ಇನ್ನು ಜನತೆ ಕೋವಿಡ್ ಸಂಬಂಧಿತ ದೃಢಪಡದ ಮಾಹಿತಿಯನ್ನು ಹಂಚಿಕೊಳ್ಳುವುದರಿಂದ ದೂರವಿರಬೇಕು ಹಾಗೂ ಕೋವಿಡ್ ತಡೆಗೆ ಅತಿ ಹೆಚ್ಚು ಜಾಗರೂಕತೆಯಿಂದ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮನ್ಸುಖ್ ಮಾಂಡವೀಯ ಕರೆ ನೀಡಿದ್ದಾರೆ. ಭಾರತದಲ್ಲಿ 24 ಗಂಟೆಗಳಲ್ಲಿ 157 ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT