ಚಂದ್ರಬಾಬು ನಾಯ್ಡು ಪ್ರಚಾರ ಸಭೆ ಚಿತ್ರ 
ದೇಶ

ನೆಲ್ಲೂರು: ಮಾಜಿ ಸಿಎಂ ಚಂದ್ರಬಾಬು ನಾಯ್ಡು ಪ್ರಚಾರ ಸಭೆಯಲ್ಲಿ ಕಾಲ್ತುಳಿತ, ಏಳು ಮಂದಿ ದುರ್ಮರಣ

ಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆಂಧ್ರ ಪ್ರದೇಶದ  ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ  ಆ ದುರ್ಘಟನೆ ನಡೆದಿದೆ.

ನೆಲ್ಲೂರು: ಟಿಡಿಪಿ ಅಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಂ.ಚಂದ್ರಬಾಬು ನಾಯ್ಡು ಅವರ ಸಾರ್ವಜನಿಕ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿ ಏಳು ಮಂದಿ ದುರ್ಮರಣ ಹೊಂದಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಆಂಧ್ರ ಪ್ರದೇಶದ  ನೆಲ್ಲೂರು ಜಿಲ್ಲೆಯ ಕಂದುಕೊರ್ ನಲ್ಲಿ ಸಾರ್ವಜನಿಕ ಸಭೆಗೆ ಚಂದ್ರಬಾಬು ನಾಯ್ಡು ಆಗಮಿಸಿದಾಗ  ಆ ದುರ್ಘಟನೆ ನಡೆದಿದೆ.

ಬೃಹತ್ ಸಮಾವೇಶದಲ್ಲಿ ನೆರೆದಿದ್ದ ಸಾವಿರಾರು ಟಿಡಿಪಿ ಕಾರ್ಯಕರ್ತರು ಮತ್ತು ಬೆಂಬಲಿಗರ ನಡುವೆ ತಳ್ಳಾಟ ಮತ್ತು ನೂಕಾಟ ನಡೆದಿದ್ದು, ಕೆಲವರು ಹತ್ತಿರದ ಒಳಚರಂಡಿ ಕಾಲುವೆಗೆ ಜಿಗಿದು ಕಾಲ್ತುಳಿತದಿಂದ ತಪ್ಪಿಸಿಕೊಂಡರೆ, ಮತ್ತೆ ಕೆಲವರು ಜನರ ಗುಂಪಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತದನಂತರ ತನ್ನ ಪ್ರಚಾರ ಕಾರ್ಯಕ್ರಮವನ್ನು ರದ್ದುಗೊಳಿಸಿದ ಚಂದ್ರಬಾಬ್ಡು, ಸಂತ್ರಸ್ತರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. 2024ರ ವಿಧಾನಸಭಾ ಚುನಾವಣೆ ಅಂಗವಾಗಿ ಚಂದ್ರಬಾಬು ನಾಯ್ಡು ಸಾರ್ವಜನಿಕ ಸಭೆ ಹಾಗೂ ರೋಡ್ ಶೋ ನಡೆಸುತ್ತಿದ್ದಾಗ ಈ ದುರಂತ ಸಂಭವಿಸಿದ್ದು, ಸಾವು ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. 
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಗುಡ್​ ನ್ಯೂಸ್​: ಹಳದಿ ಮಾರ್ಗದ ಸಂಚಾರ ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಶುರು..!

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

SCROLL FOR NEXT