ಸಂಗ್ರಹ ಚಿತ್ರ 
ದೇಶ

ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ: ಕೇಂದ್ರ ಸರ್ಕಾರ

ಚೀನಾ‌ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಇದರ ನಡುವೆಯೇ ದೇಶದಲ್ಲಿ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನವದೆಹಲಿ: ಚೀನಾ‌ ಸೇರಿದಂತೆ ವಿವಿಧ ದೇಶಗಳಲ್ಲಿ ಉಲ್ಬಣಿಸಿರುವ ಕೊರೊನಾ ಸೋಂಕು ಇದೀಗ ಭಾರತದಲ್ಲೂ ಹೊಸ ಆಲೆಯ ಭೀತಿ ಸೃಷ್ಟಿ ಮಾಡಿದ್ದು, ಇದರ ನಡುವೆಯೇ ದೇಶದಲ್ಲಿ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ನೆರೆಯ ಚೀನಾ ಸೇರಿದಂತೆ ಕೆಲವು ದೇಶಗಳಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣವಾಗಿದ್ದರೂ, ಮಾಸ್ಕ್ ಆದೇಶವನ್ನು ಮರಳಿ ತರಲು ಕೇಂದ್ರ ಸರ್ಕಾರವು ಯಾವುದೇ ಯೋಜನೆಯನ್ನು ಹೊಂದಿಲ್ಲ ಎಂದು ಹೇಳಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮೂಲಗಳು ಮಾಹಿತಿ ನೀಡಿದ್ದು, ಸದ್ಯದ ಪರಿಸ್ಥಿತಿಗೆ ಅನುಗುಣವಾಗಿ ಹೇಳುವುದಾದರೆ ಮಾಸ್ಕ್ ಕಡ್ಡಾಯ ನೀತಿ ತರುವ ಕುರಿತು ಸದ್ಯಕ್ಕೆ ಯಾವುದೇ ಯೋಜನೆ ಇಲ್ಲ ಎಂದು ಹೇಳಿದೆ.

ಅದಾಗ್ಯೂ ಕೇಂದ್ರ ಸರ್ಕಾರವು ಈಗ ಕೋವಿಡ್ ಕುರಿತಂತೆ ಜನರಲ್ಲಿ ಜಾಗೃತಿಗೆ ಹೆಚ್ಚಿನ ಗಮನ ಹರಿಸಲಿದೆ ಎಂದು ಹೇಳಿಕೊಂಡಿದೆ. ಇನ್ನು ಕೋವಿಡ್ ನಾಲ್ಕನೇ ಅಲೆ ಕುರಿತಂತೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದ್ದು,  ಮುಂದಿನ 40 ದಿನಗಳು ದೇಶಕ್ಕೆ ಅತ್ಯಂತ ನಿರ್ಣಾಯಕವಾಗಿರಲಿದೆ ಎಂದು ಹೇಳಿದೆ. 

ಕೋವಿಡ್ ತಜ್ಞರ ಸಲಹಾ ಸಮಿತಿಯಲ್ಲಿ ನಡೆದ ಸಭೆಯ ಬಳಿಕ ಈ ಮಾಹಿತಿ ಹೊರಬಿದ್ದಿದ್ದು, ಮುಂದಿನ ತಿಂಗಳು ದೇಶದಲ್ಲಿ ಸೋಂಕು ಉತ್ತುಂಗಕ್ಕೇರಲಿದ್ದು ಎಚ್ಚರಿಕೆ ವಹಿಸುವಂತೆ ಕೇಂದ್ರ ಸರ್ಕಾರ ಮುನ್ನೆಚ್ವರಿಕೆ ನೀಡಿದೆ.

‘ಜನವರಿಯಲ್ಲಿ ದೇಶದಲ್ಲಿ ಕೋವಿಡ್ ಪ್ರಕರಣಗಳ ಉಲ್ಬಣ ಹೆಚ್ಚಾಗಲಿದ್ದು ಮುಂದಿನ 40 ದಿನಗಳು ನಿರ್ಣಾಯಕ. ದೇಶದಲ್ಲಿ ಸೋಂಕು ಉತ್ತುಂಗಕ್ಕೇರಿದರೂ ಜೊತೆಗೆ ಅಲೆ ಎದ್ದರೂ ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವರ ಸಂಖ್ಯೆ ತೀರಾ ಕಡಿಮೆ ಇರುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಈ “ಹಿಂದೆ, ಕೋವಿಡ್ -19 ರ ಹೊಸ ಅಲೆಯು ಪೂರ್ವ ಏಷ್ಯಾಕ್ಕೆ ಅಪ್ಪಳಿಸಿದ 30-35 ದಿನಗಳ ನಂತರ ಭಾರತ ಪ್ರವೇಶಿಸಿದ ಉದಾಹರಣ ಇದೆ. ಅದನ್ನು ಆದರಿಸಿ ತಜ್ಞರು ಈ ಎಚ್ಚರಿಕೆ ನೀಡಿದ್ದಾರೆ. ನಿರ್ಲಕ್ಷ್ಯ ವಹಿಸದೆ ಕೋವಿಡ್ ಮುನ್ನೆಚ್ಚರಿಕೆ ನಿರ್ವಹಿಸಿದರೆ ಪರಿಣಾಮಕಾರಿಯಾಗಿ ಪರಿಸ್ಥಿತಿ ಎದುರಿಸಬಹುದು. ಕೋವಿಡ್ ಉಪ ತಳಿ ಹೆಚ್ಚಳದಿಂದ‌ ಸೋಂಕು ಹೆಚ್ಚಳ ನಿರೀಕ್ಷೆ ಇದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಕಳೆದ 24 ಗಂಟೆಗಳಲ್ಲಿ ಬುಧವಾರ ಒಟ್ಟು 188 ಹೊಸ ಕೋವಿಡ್ ಪ್ರಕರಣಗಳು, ಹಿಂದಿನ ದಿನ 157 ಪ್ರಕರಣಗಳು ವರದಿಯಾಗಿವೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

ಮನೆ ಮುಂದೆ ನಿಲ್ಲಿಸೋ ವಾಹನಗಳಿಗೆ ಪಾರ್ಕಿಂಗ್ ಶುಲ್ಕಕ್ಕೆ ರಾಮಲಿಂಗಾರೆಡ್ಡಿ ತೀವ್ರ ಆಕ್ಷೇಪ; CM ಡಿಕೆಶಿಗೆ ಪತ್ರ

'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ,ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ; ಹೊಸ ಪೀಳಿಗೆಗೆ ದಾರಿ ಮಾಡಿಕೊಡುವ ಇಂಗಿತ!