ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜು 
ದೇಶ

ಉತ್ತರ ಭಾರತದಲ್ಲಿ ದಟ್ಟ ಮಂಜು: 3 ದಿನಗಳ ಕಾಲ 279 ರೈಲು, 100 ಕ್ಕೂ ಅಧಿಕ ವಿಮಾನಗಳ ಸಂಚಾರ ವ್ಯತ್ಯಯ

ಉತ್ತರ ಭಾರತದಲ್ಲಿ ದಟ್ಟ ಮಂಜು ಕವಿದಿದ್ದು, ವಾತಾವರಣದ ವೈಪರಿತ್ಯದಿಂದ ದೆಹಲಿ ಒಂದರಲ್ಲೇ 100 ಕ್ಕೂ ಅಧಿಕ ವಿಮಾನಗಳ ವ್ಯತ್ಯಯ ಉಂಟಾಗಿದೆ. 

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟ ಮಂಜು ಕವಿದಿದ್ದು, ವಾತಾವರಣದ ವೈಪರಿತ್ಯದಿಂದ ದೆಹಲಿ ಒಂದರಲ್ಲೇ 100 ಕ್ಕೂ ಅಧಿಕ ವಿಮಾನಗಳ ವ್ಯತ್ಯಯ ಉಂಟಾಗಿದೆ. 

ದೆಹಲಿಯಲ್ಲಿ ತೀವ್ರ ಚಳಿ ಇದ್ದು, ವಾತಾವರಣದ ವೈಪರಿತ್ಯದ ಪರಿಣಾಮ ದೆಹಲಿಯಿಂದ ಕಾರ್ಯನಿರ್ವಹಣೆ ಮಾಡಬೇಕಿದ್ದ 100 ಕ್ಕೂ ಹೆಚ್ಚು ವಿಮಾನಗಳ ಸಂಚಾರ ಕನಿಷ್ಟ ಇನ್ನೂ 3 ದಿನಗಳ ಕಾಲ ವ್ಯತ್ಯಯವಾಗಲಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್ಐ ಗೆ ಮಾಹಿತಿ ನೀಡಿದ್ದಾರೆ. 

ವರ್ಷಾಂತ್ಯದ ರಜೆ ದಿನಗಳ ಹಿನ್ನೆಲೆಯಲ್ಲಿ ನವದೆಹಲಿ ವಿಮಾನ ನಿಲ್ದಾಣದಲ್ಲಿ ಜನ ದಟ್ಟಣೆ ಉಂಟಾಗಿದ್ದು ಅದನ್ನು ನಿರ್ವಹಿಸಲಾಗುತ್ತಿದೆ. ಆದರೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ದಟ್ಟ ಮಂಜು ಆವರಿಸಿರುವುದರಿಂದ ವಿಮಾನ ವ್ಯತ್ಯಯ ಉಂಟಾಗಿ ಪ್ರಯಾಣಿಕರಿಗೆ ಅನನುಕೂಲವಾಗಿದೆ.

ಸಿಎಟಿ-III ಪೂರಕ ಪೈಲಟ್ ಗಳನ್ನು ಕೆಲವು ವಿಮಾನ ಸಂಸ್ಥೆಗಳು ನಿಯೋಜನೆ ಮಾಡದೇ ಇರುವುದೂ ಸಹ ವಿಮಾನಗಳ ವ್ಯತ್ಯಯಕ್ಕೆ ಕಾರಣವಾಗಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಲಿಮಿಟೆಡ್ ಪ್ರಯಾಣಿಕರಿಗೆ ತಮ್ಮ ವಿಮಾನಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚನೆ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT