ದೆಹಲಿಯಲ್ಲಿ ಆವರಿಸಿರುವ ದಟ್ಟ ಮಂಜು 
ದೇಶ

ಉತ್ತರ ಭಾರತದಲ್ಲಿ ದಟ್ಟ ಮಂಜು: 3 ದಿನಗಳ ಕಾಲ 279 ರೈಲು, 100 ಕ್ಕೂ ಅಧಿಕ ವಿಮಾನಗಳ ಸಂಚಾರ ವ್ಯತ್ಯಯ

ಉತ್ತರ ಭಾರತದಲ್ಲಿ ದಟ್ಟ ಮಂಜು ಕವಿದಿದ್ದು, ವಾತಾವರಣದ ವೈಪರಿತ್ಯದಿಂದ ದೆಹಲಿ ಒಂದರಲ್ಲೇ 100 ಕ್ಕೂ ಅಧಿಕ ವಿಮಾನಗಳ ವ್ಯತ್ಯಯ ಉಂಟಾಗಿದೆ. 

ನವದೆಹಲಿ: ಉತ್ತರ ಭಾರತದಲ್ಲಿ ದಟ್ಟ ಮಂಜು ಕವಿದಿದ್ದು, ವಾತಾವರಣದ ವೈಪರಿತ್ಯದಿಂದ ದೆಹಲಿ ಒಂದರಲ್ಲೇ 100 ಕ್ಕೂ ಅಧಿಕ ವಿಮಾನಗಳ ವ್ಯತ್ಯಯ ಉಂಟಾಗಿದೆ. 

ದೆಹಲಿಯಲ್ಲಿ ತೀವ್ರ ಚಳಿ ಇದ್ದು, ವಾತಾವರಣದ ವೈಪರಿತ್ಯದ ಪರಿಣಾಮ ದೆಹಲಿಯಿಂದ ಕಾರ್ಯನಿರ್ವಹಣೆ ಮಾಡಬೇಕಿದ್ದ 100 ಕ್ಕೂ ಹೆಚ್ಚು ವಿಮಾನಗಳ ಸಂಚಾರ ಕನಿಷ್ಟ ಇನ್ನೂ 3 ದಿನಗಳ ಕಾಲ ವ್ಯತ್ಯಯವಾಗಲಿದೆ ಎಂದು ದೆಹಲಿ ವಿಮಾನ ನಿಲ್ದಾಣದ ಅಧಿಕಾರಿಯೊಬ್ಬರು ಎಎನ್ಐ ಗೆ ಮಾಹಿತಿ ನೀಡಿದ್ದಾರೆ. 

ವರ್ಷಾಂತ್ಯದ ರಜೆ ದಿನಗಳ ಹಿನ್ನೆಲೆಯಲ್ಲಿ ನವದೆಹಲಿ ವಿಮಾನ ನಿಲ್ದಾಣದಲ್ಲಿ ಜನ ದಟ್ಟಣೆ ಉಂಟಾಗಿದ್ದು ಅದನ್ನು ನಿರ್ವಹಿಸಲಾಗುತ್ತಿದೆ. ಆದರೆ ಉತ್ತರ ಭಾರತದ ಹಲವು ಪ್ರದೇಶಗಳಲ್ಲಿ ದಟ್ಟ ಮಂಜು ಆವರಿಸಿರುವುದರಿಂದ ವಿಮಾನ ವ್ಯತ್ಯಯ ಉಂಟಾಗಿ ಪ್ರಯಾಣಿಕರಿಗೆ ಅನನುಕೂಲವಾಗಿದೆ.

ಸಿಎಟಿ-III ಪೂರಕ ಪೈಲಟ್ ಗಳನ್ನು ಕೆಲವು ವಿಮಾನ ಸಂಸ್ಥೆಗಳು ನಿಯೋಜನೆ ಮಾಡದೇ ಇರುವುದೂ ಸಹ ವಿಮಾನಗಳ ವ್ಯತ್ಯಯಕ್ಕೆ ಕಾರಣವಾಗಿದೆ. ದೆಹಲಿ ಅಂತಾರಾಷ್ಟ್ರೀಯ ವಿಮಾನನಿಲ್ದಾಣ ಲಿಮಿಟೆಡ್ ಪ್ರಯಾಣಿಕರಿಗೆ ತಮ್ಮ ವಿಮಾನಗಳ ಸ್ಥಿತಿಗತಿಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT