ಎನ್ಐಎ ಅಧಿಕಾರಿಗಳ ಸಾಂದರ್ಭಿಕ ಚಿತ್ರ 
ದೇಶ

ಪಿಎಫ್‌ಐ ಸಂಚು ಪ್ರಕರಣ: ಕೇರಳದ 56 ಸ್ಥಳಗಳಲ್ಲಿ ಎನ್ಐಎ ಏಕಾಏಕಿ ದಾಳಿ

ರಾಷ್ಟ್ರೀಯ ತನಿಖಾ ದಳ(NIA) ಕೇರಳದ 56 ಕಡೆಗಳಲ್ಲಿ ಏಕಾಏಕಿ ದಾಳಿ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ.

ನವದೆಹಲಿ: ರಾಷ್ಟ್ರೀಯ ತನಿಖಾ ದಳ(NIA) ಕೇರಳದ 56 ಕಡೆಗಳಲ್ಲಿ ಏಕಾಏಕಿ ದಾಳಿ ನಡೆಸಿದೆ. ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(PFI) ಪಿತೂರಿ ಕೇಸಿಗೆ ಸಂಬಂಧಪಟ್ಟಂತೆ ಈ ದಾಳಿ ನಡೆದಿದೆ. ದಾಳಿಗೆ ರಾಜ್ಯ ಪೊಲೀಸರ ನೆರವು ಪಡೆದಿದ್ದಾರೆ. 

ಪಿಎಫ್ಐ ಕೇಡರ್ ಗಳ ಜೊತೆ ಸಂಪರ್ಕ ಹೊಂದಿರುವ ಶಂಕೆಯನ್ನು ಹೊಂದಿರುವ ಹಲವು ಕಚೇರಿಗಳು, ಮನೆಗಳ ಮೇಲೆ ಶೋಧ ಕಾರ್ಯ ನಡೆಯುತ್ತಿದೆ. ಪಿಎಫ್ಐ ಸಂಘಟನೆಯನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಕಳೆದ ಸೆಪ್ಟೆಂಬರ್ ನಲ್ಲಿ ನಿಷೇಧಿಸಿದೆ. ಪಿಎಫ್ಐ ಸಂಘಟನೆ ಮತ್ತು ಅದರ ಸಹವರ್ತಿ ಸಂಸ್ಥೆ, ಸಂಘಟನೆಗಳನ್ನು ಅಕ್ರಮ ಚಟುವಟಿಕೆಗಳ(ತಡೆ) ಕಾಯ್ದೆ 1967ರಡಿಯಲ್ಲಿ 5 ವರ್ಷಗಳ ಕಾಲ ನಿಷೇಧಿಸಲಾಗಿದೆ.

ಎನ್‌ಐಎ ವಿಶೇಷ ತಂಡವು ರಾಜ್ಯಾದ್ಯಂತ ಹಲವು ಪಿಎಫ್‌ಐ ಮುಖಂಡರ ನಿವಾಸಗಳ ಮೇಲೆ ದಾಳಿ ನಡೆಸಿದೆ. ಎರ್ನಾಕುಲಂ, ತಿರುವನಂತಪುರಂ, ಕೊಲ್ಲಂ, ಪತ್ತನಂತಿಟ್ಟ, ಪಾಲಕ್ಕಾಡ್, ಅಲಪ್ಪುಳ ಮತ್ತು ಮಲಪ್ಪುರಂ ಜಿಲ್ಲೆಗಳಲ್ಲಿ ವ್ಯಾಪಿಸಿರುವ 56 ಸ್ಥಳಗಳಲ್ಲಿ ಕಳೆದ ರಾತ್ರಿಯಿಂದ ದಾಳಿ ಆರಂಭವಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ನಿಷೇಧದ ಹೊರತಾಗಿಯೂ ಕೆಲವು ನಾಯಕರು ಪಿಎಫ್‌ಐನ ಕಾರ್ಯಚಟುವಟಿಕೆಯನ್ನು ಇನ್ನೂ ಸಕ್ರಿಯವಾಗಿ ಸಂಘಟಿಸುತ್ತಿದ್ದಾರೆ ಎಂಬ ಮಾಹಿತಿಯ ಮೇರೆಗೆ ದಾಳಿಗಳನ್ನು ನಡೆಸಲಾಯಿತು. ಈ ಹಿಂದೆ PFIನ ಸಕ್ರಿಯ ಕಾರ್ಯಕರ್ತ ನಾಯಕರ ಆವರಣದ ಮೇಲೆ ದಾಳಿಗಳು ನಿರ್ದಿಷ್ಟವಾಗಿ ಕೇಂದ್ರೀಕೃತವಾಗಿವೆ. ನಿಷೇಧದ ನಂತರ ಹಲವಾರು ಪಿಎಫ್‌ಐ ನಾಯಕರ ಚಟುವಟಿಕೆಗಳನ್ನು ಎನ್‌ಐಎ ಪತ್ತೆಹಚ್ಚುತ್ತಿದೆ ಮತ್ತು ಅವರಲ್ಲಿ ಅನೇಕರು ಎರ್ನಾಕುಲಂ, ಅಲಪ್ಪುಳ, ಮಲಪ್ಪುರ ಮತ್ತು ತಿರುವನಂತಪುರಂನ ವಿವಿಧ ಸ್ಥಳಗಳಲ್ಲಿ ರಹಸ್ಯ ಸಭೆಗಳನ್ನು ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದಾಳಿಯ ಭಾಗವಾಗಿ, ಎನ್‌ಐಎ ತಂಡವು ಹಣ ವರ್ಗಾವಣೆಯನ್ನು ಪತ್ತೆಹಚ್ಚಲು ಕೆಲವು ಶಂಕಿತರ ಬ್ಯಾಂಕ್ ಖಾತೆಯ ವಿವರಗಳನ್ನು ಸಹ ಸಂಗ್ರಹಿಸುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷಗಳ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು, Video!

ಧರ್ಮಸ್ಥಳದ ವಿರುದ್ಧ ಬಿಜೆಪಿಯಿಂದಲೇ ಷಡ್ಯಂತ್ರ: ಡಿಕೆ ಶಿವಕುಮಾರ್

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

SCROLL FOR NEXT