ಸಾಂದರ್ಭಿಕ ಚಿತ್ರ 
ದೇಶ

ರಾಷ್ಟ್ರೀಯ ಭದ್ರತೆಗೆ ಅಪಾಯ: ಲಕ್ಷ ದ್ವೀಪ ಆಡಳಿತದಿಂದ 17 ದ್ವೀಪಗಳಿಗೆ ಪ್ರವೇಶ ನಿರ್ಬಂಧ

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 36 ದ್ವೀಪಗಳ ಪೈಕಿ 17 ದ್ವೀಪಗಳಿಗೆ ಪ್ರವೇಶವನ್ನು ಲಕ್ಷದ್ವೀಪ ಆಡಳಿತ  ನಿಷೇಧಿಸಿದೆ. ಇವು ಜನವಸತಿಯಿಲ್ಲದ ದ್ವೀಪಗಳಾಗಿದ್ದು,  ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ನಿಂದ ಪ್ರವೇಶಕ್ಕೆ ಅನುಮತಿ ಅಗತ್ಯವಿದೆ.

ಕವರತ್ತಿ: ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ಸುರಕ್ಷತೆಯ ದೃಷ್ಟಿಯಿಂದ ಒಟ್ಟು 36 ದ್ವೀಪಗಳ ಪೈಕಿ 17 ದ್ವೀಪಗಳಿಗೆ ಪ್ರವೇಶವನ್ನು ಲಕ್ಷದ್ವೀಪ ಆಡಳಿತ  ನಿಷೇಧಿಸಿದೆ. ಇವು ಜನವಸತಿಯಿಲ್ಲದ ದ್ವೀಪಗಳಾಗಿದ್ದು,  ಉಪವಿಭಾಗೀಯ ಮ್ಯಾಜಿಸ್ಟ್ರೇಟ್‌ನಿಂದ ಪ್ರವೇಶಕ್ಕೆ ಅನುಮತಿ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿಯಲ್ಲಿ ಲಕ್ಷದ್ವೀಪ್‌ ಜಿಲ್ಲಾ ಮ್ಯಾಜಿಸ್ಟ್ರೇಟ್ ಈ ಘೋಷಣೆ ಹೊರಡಿಸಿದ್ದಾರೆ.

ತೆಂಗಿನಕಾಯಿ ಕೊಯ್ಲು ಮಾಡುವ ಕಾರ್ಮಿಕರ ಮನೆಗಳಂತೆ ತಾತ್ಕಾಲಿಕ ರಚನೆಗಳನ್ನು ಹೊಂದಿರುವ ಜನವಸತಿಯಿಲ್ಲದ ದ್ವೀಪಗಳಲ್ಲಿ ಭಯೋತ್ಪಾದಕ ಅಥವಾ ಕಳ್ಳಸಾಗಣೆ ಚಟುವಟಿಕೆಗಳನ್ನು ತಡೆಯಲು ಬುಧವಾರ ಈ ಘೋಷಣೆಯ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಅವರಲ್ಲಿ  ಕಾನೂನುಬಾಹಿರ, ಸಮಾಜವಿರೋಧಿ ಮತ್ತು ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡವರು ಸೇರಬಹುದು ಆದ್ದರಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆಡಳಿತ ಹೇಳಿದೆ.

ಕೆಲವು ಜನವಸತಿಯಿಲ್ಲದ ದ್ವೀಪಗಳಲ್ಲಿ ತೆಂಗಿನಕಾಯಿ ಕೊಯ್ಲು ಕಾರ್ಮಿಕರ ವಸತಿ ಉದ್ದೇಶಕ್ಕಾಗಿ ತಾತ್ಕಾಲಿಕ ಕಟ್ಟಡಗಳು ಇರುವುದರಿಂದ ಈ ಕಾರ್ಮಿಕರೊಂದಿಗೆ ಅಕ್ರಮ, ಸಮಾಜ ವಿರೋಧಿ ಮತ್ತು ಕಳ್ಳಸಾಗಾಣಿಕೆಯಂತಹ ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ ವ್ಯಕ್ತಿಗಳು ಇದ್ದಾರೆ ಎಂಬುದನ್ನು ತಳ್ಳಿಹಾಕಲಾಗುವುದಿಲ್ಲ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಭಯೋತ್ಪಾದಕ ಗುಂಪುಗಳು ಅಥವಾ ಸಂಘಟನೆಗಳು ದೇಶದ ಪ್ರಮುಖ ಸಂಸ್ಥೆಗಳು ಮತ್ತು ಜನನಿಬಿಡ ಸ್ಥಳಗಳ ಮೇಲೆ ದಾಳಿ ಮಾಡುವ ಸಾಧ್ಯತೆಯನ್ನು ಪರಿಗಣಿಸಿ, ಮುನ್ನೆಚ್ಚರಿಕೆ ಕ್ರಮಗಳು ಅಗತ್ಯ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಇನ್ನೂ ನನಸಾಗಿಲ್ಲ ದಶಕಗಳ ಕನಸು: ಹಾಸನ ವಿಮಾನ ನಿಲ್ದಾಣಕ್ಕೆ ಸಿಗದ ರೆಕ್ಕೆ, ಯೋಜನೆಗೆ ಅಡ್ಡಿಯಾಗಿದೆ ಸಂಪನ್ಮೂಲ-ರಾಜಕೀಯ ಇಚ್ಛಾಶಕ್ತಿ ಕೊರತೆ..!

SCROLL FOR NEXT