ಮುಳುಗಿ ಸಾವು 
ದೇಶ

ಕೇರಳ: ದುರಂತವಾದ ಅಣುಕು ಪ್ರದರ್ಶನ, ವಿಪತ್ತು ನಿರ್ವಹಣಾ ದಳ ಸ್ವಯಂ ಸೇವಕ ಸಾವು

ಸಂಭಾವ್ಯ ಅಪಾಯ ಎದುರಿಸುವ ನಿಟ್ಟಿನಲ್ಲಿ ಕೇರಳದಲ್ಲಿ ಆಯೋಜಿಸಲಾಗಿದ್ದ ಅಣುಕು ಪ್ರದರ್ಶನ ದುರಂತವಾಗಿ ಮಾರ್ಪಟ್ಟಿದ್ದು, ಈ ಮಾಕ್ ಡ್ರಿಲ್ ನಲ್ಲಿ ಪಾಲ್ಗೊಂಡಿದ್ದ ವಿಪತ್ತು ನಿರ್ವಹಣಾ ದಳದ ಸ್ವಯಂ ಸೇವಕರೊಬ್ಬರು ಸಾವನ್ನಪ್ಪಿದ್ದಾರೆ.

ಕೊಚ್ಚಿನ್: ಸಂಭಾವ್ಯ ಅಪಾಯ ಎದುರಿಸುವ ನಿಟ್ಟಿನಲ್ಲಿ ಕೇರಳದಲ್ಲಿ ಆಯೋಜಿಸಲಾಗಿದ್ದ ಅಣುಕು ಪ್ರದರ್ಶನ ದುರಂತವಾಗಿ ಮಾರ್ಪಟ್ಟಿದ್ದು, ಈ ಮಾಕ್ ಡ್ರಿಲ್ ನಲ್ಲಿ ಪಾಲ್ಗೊಂಡಿದ್ದ ವಿಪತ್ತು ನಿರ್ವಹಣಾ ದಳದ ಸ್ವಯಂ ಸೇವಕರೊಬ್ಬರು ಸಾವನ್ನಪ್ಪಿದ್ದಾರೆ.

ಹೌದು.. ಕೇರಳದಲ್ಲಿ ಪ್ರವಾಹವನ್ನು ಎದುರಿಸಲು ವಿಪತ್ತು ನಿರ್ವಹಣಾ ಏಜೆನ್ಸಿಗಳು ಹಮ್ಮಿಕೊಂಡಿದ್ದ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನ ದುರಂತದಲ್ಲಿ ಅಂತ್ಯವಾಗಿದ್ದು, ಈ ಅಣುಕು ಪ್ರದರ್ಶನದಲ್ಲಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. 

ಮಧ್ಯ ಕೇರಳದ ಪಥನಂತಿಟ್ಟ ಜಿಲ್ಲೆಯ ಕೀಳ್ವೈಪುರದ ಮಣಿಮಾಲಾ ನದಿಯಲ್ಲಿ ಆಯೋಜಿಸಲಾಗಿದ್ದ ಪ್ರವಾಹ ರಕ್ಷಣಾ ಕಾರ್ಯಾಚರಣೆಯ ಅಣುಕು ಪ್ರದರ್ಶನದಲ್ಲಿ ಸ್ವಯಂಸೇವಕರೊಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.  34 ವರ್ಷದ ಬಿನು ಸೋಮನ್ ಅವರು ಮಣಿಮಾಲಾ ನದಿಯಲ್ಲಿ ಮುಳುಗಿ ಸಾವಮ್ಮಪ್ಪಿದ ವ್ಯರ್ಕಿಯಾಗಿದ್ದಾರೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಅವರನ್ನು ರಕ್ಷಿಸಿ ತಿರುವಲ್ಲಾದ ಖಾಸಗಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಪ್ರವಾಹ ಮತ್ತು ಭೂಕುಸಿತವನ್ನು ಎದುರಿಸಲು ವಿಪತ್ತು ನಿರ್ವಹಣಾ ತಂಡದ ಸನ್ನದ್ಧತೆಯನ್ನು ನಿರ್ಣಯಿಸುವ ಭಾಗವಾಗಿ ಗುರುವಾರ ಪಥನಂತಿಟ್ಟ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಅಣಕು ಪ್ರದರ್ಶನಗಳನ್ನು ಆಯೋಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT