ಮಮತಾ ಬ್ಯಾನರ್ಜಿ 
ದೇಶ

"ನಿಮ್ಮ ತಾಯಿ ಎಂದರೆ ನಮ್ಮ ತಾಯಿ": ಪ್ರಧಾನಿ ಮೋದಿ ತಾಯಿ ನಿಧನಕ್ಕೆ ಮಮತಾ ಬ್ಯಾನರ್ಜಿ ಸಂತಾಪ

ನಿಮ್ಮ ತಾಯಿ ಎಂದರೆ ಅವರು ನಮಗೂ ತಾಯಿಯೇ ಎಂದು ಹೇಳಿರುವ ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಮೋದಿಯವರ ತಾಯಿ ನಿಧನಕ್ಕೆ ಶುಕ್ರವಾರ ಸಂತಾಪ ಸೂಚಿಸಿದ್ದಾರೆ.

ಕೋಲ್ಕತ್ತಾ (ಪಶ್ಚಿಮ ಬಂಗಾಳ): ನಿಮ್ಮ ತಾಯಿ ಎಂದರೆ ಅವರು ನಮಗೂ ತಾಯಿಯೇ ಎಂದು ಹೇಳಿರುವ ಪಶ್ಚಿಮ ಬಂಗಾಳ ರಾಜ್ಯದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು, ಮೋದಿಯವರ ತಾಯಿ ನಿಧನಕ್ಕೆ ಶುಕ್ರವಾರ ಸಂತಾಪ ಸೂಚಿಸಿದ್ದಾರೆ.

 ಪಶ್ಚಿಮ ಬಂಗಾಳದ ವಿವಿಧ ರೈಲ್ವೆ ಯೋಜನೆಗಳ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, "ಗೌರವಾನ್ವಿತ ಪ್ರಧಾನಿ, ಇಂದು ನಿಮಗೆ ವೈಯಕ್ತಿಕವಾಗಿ ದುಃಖದ ದಿನವಾಗಿದೆ ಮತ್ತು ಇದು ನಿಮ್ಮ ವೈಯಕ್ತಿಕ ಜೀವನದ ದೊಡ್ಡ ನಷ್ಟವಾಗಿದೆ. ನಾನು ದೇವರನ್ನು ಪ್ರಾರ್ಥಿಸುತ್ತೇನೆ, ನಿಮ್ಮ ಕ್ರಿಯೆ ಮತ್ತು ಚಟುವಟಿಕೆಗಳಿಂದ ನಿಮ್ಮ ತಾಯಿಯನ್ನು ಪ್ರೀತಿಸುವಂತೆ ದೇವರು ನಿಮಗೆ ಶಕ್ತಿಯನ್ನು ನೀಡುತ್ತಾನೆ ಮತ್ತು ಆಶೀರ್ವದಿಸುತ್ತಾನೆ. ನಾನು ನಿಮಗೆ ನನ್ನ ಕೃತಜ್ಞತೆಯನ್ನು ತಿಳಿಸುತ್ತೇನೆ. ಏಕೆಂದರೆ, ನೀವು ಪಶ್ಚಿಮ ಬಂಗಾಳಕ್ಕೆ ಬರಬೇಕಾಗಿತ್ತು. ಆದರೆ, ನಿಮ್ಮ ತಾಯಿಯ ನಿಧನದಿಂದಾಗಿ ನೀವು ಬರಲು ಸಾಧ್ಯವಾಗಲಿಲ್ಲ, ಆದರೂ ವರ್ಚುವಲ್ ಮೂಲಕ ನಮ್ಮೊಂದಿಗಿದ್ದೀರಿ ಎಂದು ಹೇಳಿದ್ದಾರೆ.

ಇದೇ ವೇಳೆ ತಮ್ಮ ತಾಯಿಯ ಅಂತ್ಯಕ್ರಿಯೆಯಿಂದ ಕರ್ತವ್ಯಕ್ಕೆ ಮರಳಿರುವುದರಿಂದ ಕಾರ್ಯಕ್ರಮವನ್ನು ಮೊಟಕುಗೊಳಿಸಿ ವಿಶ್ರಾಂತಿ ತೆಗೆದುಕೊಳ್ಳುವಂತೆ ಪ್ರಧಾನಿ ಮೋದಿಗೆ ಮನವಿ ಮಾಡಿಕೊಂಡರು.

"ನಿಮ್ಮ ಕುಟುಂಬ ಸದಸ್ಯರಿಗೆ ಮತ್ತು ಇತರರಿಗೆ ಸಂತಾಪ ಸೂಚಿಸುತ್ತೇನೆ. ಈ ಪರಿಸ್ಥಿತಿಯಲ್ಲಿ ಯಾವ ರೀತಿ ಮಾತನಾಡಬೇಕೆಂಬುದು ನನಗೆ ತಿಳಿಯುತ್ತಿಲ್ಲ. ನಿಮ್ಮ ತಾಯಿ ಎಂದರೆ ನಮ್ಮ ತಾಯಿ ಕೂಡ. ನನಗೆ ನನ್ನ ತಾಯಿಯೂ ನೆನಪಾಗುತ್ತಾರೆ. ನಿಮ್ಮ ಕೆಲಸವನ್ನು ಮುಂದುವರಿಸಲು ದೇವರು ನಿಮಗೆ ಶಕ್ತಿಯನ್ನು ನೀಡಲಿ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT