ಅನುಪಮ್ ಖೇರ್ - ರಿಷಬ್ ಪಂತ್ - ಅನಿಲ್ ಕಪೂರ್ 
ದೇಶ

ಅಪಘಾತದಲ್ಲಿ ಗಾಯಗೊಂಡಿರುವ ರಿಷಬ್ ಪಂತ್‌ರನ್ನು ಭೇಟಿಯಾದ ನಟರಾದ ಅನಿಲ್ ಕಪೂರ್, ಅನುಪಮ್ ಖೇರ್

ಕಾರು ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಅನುಪಮ್ ಖೇರ್ ಶನಿವಾರ ಭೇಟಿಯಾದರು.

ಡೆಹ್ರಾಡೂನ್: ಕಾರು ಅಪಘಾತದಲ್ಲಿ ಗಾಯಗೊಂಡು ಇಲ್ಲಿನ ಮ್ಯಾಕ್ಸ್ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿರುವ ಕ್ರಿಕೆಟಿಗ ರಿಷಬ್ ಪಂತ್ ಅವರನ್ನು ಬಾಲಿವುಡ್ ನಟರಾದ ಅನಿಲ್ ಕಪೂರ್ ಮತ್ತು ಅನುಪಮ್ ಖೇರ್ ಶನಿವಾರ ಭೇಟಿಯಾದರು.

ಶುಕ್ರವಾರ ಮುಂಜಾನೆ ದೆಹಲಿ-ಡೆಹ್ರಾಡೂನ್ ಹೆದ್ದಾರಿಯಲ್ಲಿ ತನ್ನ ಐಷಾರಾಮಿ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೆಂಕಿ ಹೊತ್ತಿಕೊಂಡಿತ್ತು. ಈ ವೇಳೆ ಭಾರತದ ಸ್ಟಾರ್ ಕ್ರಿಕೆಟಿಗ ಪವಾಡ ಸದೃಶ ರೀತಿಯಲ್ಲಿ ಪಾರಾಗಿದ್ದಾರೆ.

'ಅವರು (ಪಂತ್) ಚೆನ್ನಾಗಿಯೇ ಇದ್ದಾರೆ. ಅಭಿಮಾನಿಗಳಾಗಿ ನಾವು ಅವರನ್ನು ಭೇಟಿಯಾದೆವು. ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸೋಣ ಮತ್ತು ಅವರು ಮತ್ತೆ ಆಡುವುದನ್ನು ನಾವು ನೋಡುತ್ತೇವೆ' ಎಂದು ಆಸ್ಪತ್ರೆಯಿಂದ ಹೊರಬಂದ ನಂತರ ಕಪೂರ್ ಸುದ್ದಿಗಾರರಿಗೆ ತಿಳಿಸಿದರು. ಕಪೂರ್ ಜೊತೆಗಿದ್ದ ಖೇರ್ ಅವರು ಕ್ರಿಕೆಟಿಗನನ್ನು ತುಂಬಾ ನಗಿಸಿದರು ಎಂದು ಹೇಳಿದರು.

'ಎಲ್ಲವು ಚೆನ್ನಾಗಿದೆ. ನಾವು ಪಂತ್, ಅವರ ತಾಯಿ ಮತ್ತು ಸಂಬಂಧಿಕರನ್ನು ಭೇಟಿ ಮಾಡಿದ್ದೇವೆ. ಅವರೆಲ್ಲರೂ ಚೆನ್ನಾಗಿದ್ದಾರೆ. ನಾವು ಆತ ತುಂಬಾ ನಗುವಂತೆ ಮಾಡಿದೆವು' ಎಂದು ಅವರು ಹೇಳಿದರು.

ತನ್ನ ತಾಯಿಯನ್ನು ಅಚ್ಚರಿಗೊಳಿಸಲೆಂದು ತನ್ನ ತವರೂರಾದ ರೂರ್ಕಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ, 25 ವರ್ಷದ ಪಂತ್ ಅವರ ತಲೆ, ಬೆನ್ನು ಮತ್ತು ಪಾದಗಳಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಹೊಂದಿಕೊಳ್ಳಲು ಸಾಧ್ಯವಿಲ್ಲ ಎಂದು ಯಾರು ಹೇಳಿದ್ದು?': ಅಮೆರಿಕ ವ್ಯಾಪಾರ ಒಪ್ಪಂದದ ಅನಿಶ್ಚಿತತೆ ನಡುವೆಯೇ ಹೊಸ ಮಾರುಕಟ್ಟೆಗಳತ್ತ ಭಾರತ ಕಣ್ಣು!

ಯುವನಿಧಿಗೆ ನಿರುದ್ಯೋಗಿ ವಿದ್ಯಾರ್ಥಿಗಳ ನೋಂದಣಿ ನೋಡ್ತಿದ್ದರೆ ಆತಂಕಕಾರಿ, ಶಿಕ್ಷಣದಲ್ಲಿ ಬದಲಾವಣೆ ಅಗತ್ಯ: ವಿಟಿಯು ಉಪಕುಲಪತಿ

SCROLL FOR NEXT