ಸೈಪ್ರಸ್ ನಲ್ಲಿ ಭಾರತೀಯ ಉದ್ಯಮಿಗಳ ಸಮುದಾಯವನ್ನುದ್ದೇಶಿಸಿ ಮಾತನಾಡಿದ ವಿದೇಶಾಂಗ ಸಚಿವ ಜೈಶಂಕರ್ 
ದೇಶ

ಜಗತ್ತಿನ ದೃಷ್ಟಿಯಲ್ಲಿ ಭಾರತ ಈಗ ಜಾಗತಿಕ ಸಮಸ್ಯೆ ಪರಿಹಾರಕ್ಕೆ ಕೊಡುಗೆ ನೀಡುವ ರಾಷ್ಟ್ರ: ವಿದೇಶಾಂಗ ಸಚಿವ ಜೈಶಂಕರ್

ಜಗತ್ತಿನ ದೃಷ್ಟಿಯಲ್ಲಿ ಭಾರತ ಈಗ ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಕೊಡುಗೆ ನೀಡುವ ರಾಷ್ಟ್ರವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

ಸೈಪ್ರಸ್: ಜಗತ್ತಿನ ದೃಷ್ಟಿಯಲ್ಲಿ ಭಾರತ ಈಗ ಜಾಗತಿಕ ಸಮಸ್ಯೆಗಳ ಪರಿಹಾರಕ್ಕೆ ಕೊಡುಗೆ ನೀಡುವ ರಾಷ್ಟ್ರವಾಗಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ. 

ಸೈಪ್ರಸ್ ನಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿರುವ ಜೈಶಂಕರ್, ಜಾಗತಿಕ ಸಮುದಾಯಕ್ಕೆ ಈಗ ಭಾರತದಿಂದ ಸಾಕಷ್ಟು ನಿರೀಕ್ಷೆಗಳಿವೆ ಎಂದು ಹೇಳಿದ್ದಾರೆ. 

ಜಗತ್ತು ಭಾರತವನ್ನು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಕೊಡುಗೆ ನೀಡುವ ರಾಷ್ಟ್ರ ಹಾಗೂ ಬಲಿಷ್ಠ ಆರ್ಥಿಕತೆ ಹೊಂದಿರುವ ದೇಶವನ್ನಾಗಿ ನೋಡುತ್ತಿದೆ. ಭಾರತವನ್ನು ಜಗತ್ತು ಗಟ್ಟಿಯಾಗಿ ನಿಲ್ಲುವ ರಾಷ್ಟ್ರ ಎಂದು ಗುರುತಿಸುತ್ತಿದ್ದು, ಒಂದೇ ಬಾರಿಗೆ ಹಲವರನ್ನು ಒಂದೇ ವೇದಿಕೆಗೆ ಕರೆತರುವ ಸಾಮರ್ಥ್ಯ ಹೊಂದಿರುವ ದೇಶವೆಂಬ ದೃಷ್ಟಿ ಹೊಂದಿದೆ ಎಂದು ಜೈಶಂಕರ್ ಹೇಳಿದ್ದಾರೆ.
 
ಭಾರತ ಜಿ-20 ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದು, ದೇಶದ ವೈವಿಧ್ಯತೆಯನ್ನು ಜಾಗತಿಕ ಸಮುದಾಯ ಮತ್ತಷ್ಟು ಅರ್ಥಮಾಡಿಕೊಂಡು ಮೆಚ್ಚುಗೆ ವ್ಯಕ್ತಪಡಿಸುವ ನಿಟ್ಟಿನಲ್ಲಿ ಅಧ್ಯಕ್ಷತೆಯನ್ನು ಭಾರತ ನಿಭಾಯಿಸಲಿದೆ ಎಂದು ಜೈಶಂಕರ್ ವಿಶ್ವಸ ವ್ಯಕ್ತಪಡಿಸಿದ್ದಾರೆ. 

ವಿದೇಶಗಳಲ್ಲಿ ನೆಲೆಸಿರುವ ಭಾರತೀಯರು ದೇಶಕ್ಕೆ 3-4 ವರ್ಷಗಳ ನಂತರ ಭೇಟಿ ನೀಡಿದಾಗ ಬದಲಾಗಿರುವ ಭಾರತವನ್ನು ನೋಡಲಿದ್ದಾರೆ ಎಂದು ಜೈಶಂಕರ್ ಹೇಳಿದ್ದಾರೆ.

ಇದೇ ವೇಳೆ ಭಾರತ ಕೋವಿಡ್-19 ನಿಭಾಯಿಸಿದ ರೀತಿಯನ್ನೂ ಭಾರತೀಯ ಸಮುದಾಯಕ್ಕೆ ತಿಳಿಸಿರುವ ಜೈಶಂಕರ್, ಭಾರತ ಕೋವಿಡ್-19 ನ್ನು ಕೇವಲ ನಿಭಾಯಿಸಿಲ್ಲ, ಬದಲಾಗಿ ಅತ್ಯುತ್ತಮ ಆರೋಗ್ಯ ವ್ಯವಸ್ಥೆ. ಅತ್ಯುತ್ತಮ ತಲುಪಿಸುವ ವ್ಯವಸ್ಥೆ, ಅತ್ಯುತ್ತಮ ಸಾಮಾಜಿಕ-ಡಿಜಿಟಲ್ ಡೆಲಿವರಿ ವ್ಯವಸ್ಥೆ ಮೂಲಕ ಕೋವಿಡ್-19 ಸಾಂಕ್ರಾಮಿಕದಿಂದ ಹೊರಬಂದಿದೆ ಎಂದು ಜೈಶಂಕರ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT