ಉದ್ಧವ್ ಠಾಕ್ರೆ 
ದೇಶ

ಅಮಿತ್ ಶಾ ಮೊದಲೇ ಇದನ್ನು ಮಾಡಿದಿದ್ದರೆ, ಅಘಾಡಿ ಸರ್ಕಾರವೇ ಇರುತ್ತಿರಲಿಲ್ಲ; ಮೆಟ್ರೋ ಶೆಡ್ ಸ್ಥಳ ಬದಲಾವಣೆ ಬೇಡ: ಉದ್ಧವ್ ಠಾಕ್ರೆ

ತಮ್ಮ ಸರ್ಕಾರ ಕೈಗೊಂಡಿದ್ದ ಮೆಟ್ರೋ ಶೆಡ್ ಸ್ಥಳ ತೀರ್ಮಾನ ಬದಲಾವಣೆ ಬೇಡ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೂತನ ಶಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮುಂಬೈ: ತಮ್ಮ ಸರ್ಕಾರ ಕೈಗೊಂಡಿದ್ದ ಮೆಟ್ರೋ ಶೆಡ್ ಸ್ಥಳ ತೀರ್ಮಾನ ಬದಲಾವಣೆ ಬೇಡ ಎಂದು ಮಹಾರಾಷ್ಟ್ರ ಮಾಜಿ ಸಿಎಂ ಉದ್ಧವ್ ಠಾಕ್ರೆ ನೂತನ ಶಿಂದೆ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಮುಂಬೈನ ವಿವಾದಿತ ಮೆಟ್ರೋ ಕಾರ್ ಶೆಡ್ ಯೋಜನೆಯಲ್ಲಿ ಉದ್ಧವ್ ಠಾಕ್ರೆ ಸರ್ಕಾರದ ತೀರ್ಮಾನವನ್ನು ಬದಲಾಯಿಸಲು ಸಿಎಂ ಶಿಂಧೆ ಮುಂದಾಗಿದ್ದು,  2019 ರಲ್ಲಿ ದೇವೇಂದ್ರ ಫಡ್ನವಿಸ್ ಸರ್ಕಾರದ ಅಡಿಯಲ್ಲಿ ಯೋಜಿಸಿದಂತೆ ಆರೆ ಕಾಲೋನಿಯಲ್ಲಿ ಮೆಟ್ರೋ ಕಾರ್ ಶೆಡ್ ನಿರ್ಮಿಸಲಾಗುವುದು ಎಂದು ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಶಿಂಧೆ ಅವರು ಅಡ್ವೊಕೇಟ್ ಜನರಲ್ ಅಶುತೋಷ್ ಕುಂಭಕೋಣಿ ಅವರಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿತ್ತು. ಇದೀಗ ಇದೇ ವಿಚಾರವಾಗಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ನೂತನ ಸರ್ಕಾರಕ್ಕೆ ಮಾಜಿ ಸಿಎಂ ಉದ್ದವ್ ಠಾಕ್ರೆ ಮನವಿ ಮಾಡಿದ್ದಾರೆ.

ಫೇಸ್ ಬುಕ್ ಲೈವ್ ನಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ ಅವರು, 'ನಿನ್ನೆ ನಡೆದ ಘಟನೆಯ ಬಗ್ಗೆ, ನಾನು ಅಮಿತ್ ಶಾ ಅವರಿಗೆ 2.5 ವರ್ಷಗಳ ಕಾಲ (ಶಿವಸೇನೆ-ಬಿಜೆಪಿ ಮೈತ್ರಿಯ ಸಮಯದಲ್ಲಿ) ಶಿವಸೇನೆ ಸಿಎಂ ಆಗಿರಬೇಕು ಎಂದು ಹೇಳಿದ್ದೆ, ಅವರು ಇದನ್ನು ಮೊದಲೇ ಮಾಡಿದ್ದರೆ, ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ ಅಸ್ತಿತ್ವಕ್ಕೇ ಬರುತ್ತಿರಲಿಲ್ಲ ಎಂದು ಹೇಳಿದ್ದಾರೆ.

ಅಂತೆಯೇ, ಕಳೆದ ಕೆಲವು ದಿನಗಳಿಂದ ನನಗೆ ಜನರಿಂದ ಅಪಾರ ಪ್ರೀತಿಯ ಸಂದೇಶಗಳು ಬಂದಿವೆ ಮತ್ತು ದಿಢೀರ್ ಸಿಎಂ ಸ್ಥಾನವನ್ನು ಅಲಂಕರಿಸಿದ ವ್ಯಕ್ತಿಗೆ ಅವರು ರಾಜೀನಾಮೆ ನೀಡಿದಾಗ ತುಂಬಾ ಪ್ರೀತಿ ಮತ್ತು ಗೌರವವನ್ನು ನೀಡಿರುವುದು ನನಗೆ ಸಂತೋಷ ತಂದಿದೆ. ನನ್ನ ಮೇಲಿನ ಕೋಪವನ್ನು ಮುಂಬೈ ಜನರ ಮೇಲೆ ತೋರಿಸಬೇಡಿ. ಮುಂಬೈನ ಪರಿಸರದೊಂದಿಗೆ ಆಟವಾಡಬೇಡಿ... ಮೆಟ್ರೋ ಶೆಡ್‌ನ ಪ್ರಸ್ತಾಪವನ್ನು ಬದಲಾಯಿಸಬೇಡಿ ಎಂದು ಶಿಂಧೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಬೆನ್ನಿಗೆ ಚೂರಿ ಹಾಕಿದ ಬಿಜೆಪಿ, ಶಿಂಧೆ ಶಿವಸೇನೆ ಸಿಎಂ ಅಲ್ಲ.. ಬಿಜೆಪಿ ಸಿಎಂ
ಇದೇ ವೇಳೆ ಬಿಜೆಪಿ ಅಧಿಕಾರಕ್ಕಾಗಿ ನನ್ನ ಬೆನ್ನಿಗೆ ಚೂರಿ ಹಾಕಿದೆ ಎಂದು ಹೇಳಿದ ಉದ್ಧವ್ ಠಾಕ್ರೆ, ಏಕನಾಥ್ ಶಿಂದೆ ಶಿವಸೇನೆ ಸಿಎಂ ಅಲ್ಲ.. ಬಿಜೆಪಿ ಸಿಎಂ ಎಂದು ಹೇಳಿದ್ದಾರೆ. 

ಮಹಾರಾಷ್ಟ್ರ ಚುನಾವಣೆಯಲ್ಲಿ ಗೆದ್ದ ನಂತರ 2019 ರಲ್ಲಿ ಬಿಜೆಪಿಯೊಂದಿಗಿನ ತನ್ನ ಪಕ್ಷದ 25 ವರ್ಷಗಳ ಮೈತ್ರಿಯನ್ನು ಕೊನೆಗೊಳಿಸಿದ ಕಾರಣವನ್ನು ಠಾಕ್ರೆ ಉಲ್ಲೇಖಿಸಿದ ಠಾಕ್ರೆ, '2.5 ವರ್ಷಗಳ ಕಾಲ (ಶಿವಸೇನೆ-ಬಿಜೆಪಿ ಮೈತ್ರಿಯ ಸಂದರ್ಭದಲ್ಲಿ) ಶಿವಸೇನೆ ಮುಖ್ಯಮಂತ್ರಿಯಾಗಿರಬೇಕೆಂದು ನಾನು ಅಮಿತ್ ಶಾಗೆ ಮೊದಲೇ ಹೇಳಿದ್ದೆ, ಅವರು ಇದನ್ನು ಮೊದಲೇ ಮಾಡಿದ್ದರೆ, ಮಹಾ ವಿಕಾಸ್ ಅಘಾಡಿ ಆಗುತ್ತಿರಲಿಲ್ಲ. ಅಮಿತ್ ಶಾ ಅವರು 5 ವರ್ಷದ ಸರ್ಕಾರದ ಅವಧಿಯಲ್ಲಿ ರೊಟೇಷನಲ್ ಆಧಾರದ ಮೇಲೆ ಬಿಜೆಪಿ ಮತ್ತು ಶಿವಸೇನೆಯ ಮುಖ್ಯಮಂತ್ರಿಗಳನ್ನ ಮಾಡಲು ಒಪ್ಪಲೇ ಇಲ್ಲ. ಬಿಜೆಪಿಯೊಂದಿಗೆ ಬೇರ್ಪಟ್ಟ ನಂತರ, ಸರ್ಕಾರವನ್ನು ರಚಿಸಲು ಮತ್ತು ಬಿಜೆಪಿಯನ್ನು ಅಧಿಕಾರ ಹಿಡಿಯದಂತೆ ಮಾಡಲು ಸೈದ್ಧಾಂತಿಕವಾಗಿ ವಿರುದ್ಧ ಪಕ್ಷಗಳಾದ ಎನ್‌ಸಿಪಿ ಮತ್ತು ಕಾಂಗ್ರೆಸ್‌ನೊಂದಿಗೆ ಸಹಕರಿಸಲು ಒಪ್ಪಿಕೊಳ್ಳಬೇಕಾಯಿತು ಎಂದು ಉದ್ಧವ್ ಠಾಕ್ರೆ ಹೇಳಿದರು.

ಇದೇ ವೇಳೆ ಮುಂಬೈಗೆ ದ್ರೋಹ ಮಾಡಿದಂತೆ ಬಿಜೆಪಿಗೆ ದ್ರೋಹ ಮಾಡಬೇಡಿ ಎಂದು ನೂತನ ಸಿಎಂ ಏಕನಾಥ್ ಶಿಂಧೆಗೆ ಕುಟುಕಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

ತಮಿಳು ನಾಡು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ TVK ಪಕ್ಷ ಸೇರಿದ ಸೆಂಗೊಟ್ಟೈಯನ್

ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನಿಸಿದರೆ ಡಿಕೆಶಿಯನ್ನು CM ಆಗಿ ಒಪ್ಪಿಕೊಳ್ಳುವೆ : ಕುರ್ಚಿ ಕದನಕ್ಕೆ ಪರಮೇಶ್ವರ್ ಟ್ವಿಸ್ಟ್

CM ಪಟ್ಟಕ್ಕಾಗಿ ಕಿತ್ತಾಟ: ಡಿಕೆಶಿಗೆ 'ಹೈಕಮಾಂಡ್' ಒಲವು ತೋರಿದ್ರೆ, ಸಿದ್ದರಾಮಯ್ಯರ ಮುಂದಿನ ಪ್ಲಾನ್ ಏನು?

SCROLL FOR NEXT