ಮಣಿಪುರದಲ್ಲಿ ಭಾರೀ ಭೂಕುಸಿತ 
ದೇಶ

ಮಣಿಪುರದಲ್ಲಿ ಭಾರೀ ಭೂಕುಸಿತ; ನದಿಯಿಂದ 17 ಶವ ಹೊರತೆಗೆಯಲಾಗಿದೆ - ಎನ್ ಡಿಆರ್ ಎಫ್

ಮಣಿಪುರದ ನೋನಿ ಜಿಲ್ಲೆಯ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇದುವರೆಗೆ 17 ಶವಗಳನ್ನು ಹೊರ ತೆಗೆಯಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ...

ಗುವಾಹಟಿ: ಮಣಿಪುರದ ನೋನಿ ಜಿಲ್ಲೆಯ ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಸ್ಥಳದಲ್ಲಿ ಭಾರೀ ಭೂಕುಸಿತ ಸಂಭವಿಸಿದ್ದು, ಇದುವರೆಗೆ 17 ಶವಗಳನ್ನು ಹೊರ ತೆಗೆಯಲಾಗಿದೆ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಎನ್‌ಡಿಆರ್‌ಎಫ್ ಶುಕ್ರವಾರ ತಿಳಿಸಿದೆ. 

ತುಪುಲ್ ಯಾರ್ಡ್ ರೈಲ್ವೆ ನಿರ್ಮಾಣ ಸ್ಥಳದ ಸಮೀಪವಿರುವ 107 ಟೆರಿಟೋರಿಯಲ್ ಆರ್ಮಿ (ಟಿಎ) ಶಿಬಿರದಲ್ಲಿ ಬುಧವಾರ ರಾತ್ರಿ ಭಾರೀ ಭೂಕುಸಿತ ಸಂಭವಿಸಿತ್ತು. ಭೂಕುಸಿತದ ಮಣ್ಣು ನದಿಗೆ ಅಡ್ಡಲಾಗಿ ಬಿದ್ದಿದ್ದು ಅಣೆಕಟ್ಟು ನಿರ್ಮಾಣದ ಸ್ಥಿತಿ ಉಂಟಾಗಿದೆ. ನದಿಯಿಂದ ಮೃತದೇಹಗಳನ್ನು ಹೊರತೆಗೆಯಲು ಅಗೆಯುವ ಯಂತ್ರಗಳನ್ನು ಬಳಸಲಾಗುತ್ತಿದೆ. ಹಲವಾರು ಯೋಧರು ಸೇರಿದಂತೆ ಕನಿಷ್ಠ 55 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಸ್ಥಳದಲ್ಲಿ ಕೇಂದ್ರ ಮತ್ತು ರಾಜ್ಯ ವಿಪತ್ತು ಪಡೆಗಳ ಜೊತೆಗೆ ಭಾರತೀಯ ಸೇನೆ, ಅಸ್ಸಾಂ ರೈಫಲ್ಸ್ ಮತ್ತು ಪ್ರಾದೇಶಿಕ ಸೇನೆಯಿಂದ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಜಿರಿಬಾಮ್ ಜಿಲ್ಲೆಯಿಂದ ರಾಜ್ಯದ ರಾಜಧಾನಿ ಇಂಫಾಲ್‌ಗೆ ನಿರ್ಮಿಸಲಾಗುತ್ತಿರುವ ರೈಲು ಮಾರ್ಗಕ್ಕೆ ಪ್ರಾದೇಶಿಕ ಸೇನೆಯು ಭದ್ರತೆಯನ್ನು ಒದಗಿಸುತ್ತಿದೆ.

ಅವಶೇಷಗಳಲ್ಲಿ ಹುದುಗಿರುವವರನ್ನ ಪತ್ತೆಹಚ್ಚಲು ವಾಲ್ ರಾಡಾರ್, ಶ್ವಾನಪಡೆಯನ್ನೂ ಕಾರ್ಯಾಚರಣೆಯಲ್ಲಿ ಬಳಸಲಾಗ್ತಿದೆ. ಇಲ್ಲಿಯವರೆಗೆ ಟೆರಿಟೋರಿಯಲ್ ಆರ್ಮಿಯ 13 ಸಿಬ್ಬಂದಿ ಮತ್ತು ಐವರು ನಾಗರಿಕರನ್ನು ರಕ್ಷಿಸಲಾಗಿದೆ. ನಾಪತ್ತೆಯಾದ ಸಿಬ್ಬಂದಿಗಾಗಿ ಹುಡುಕಾಟ ಮುಂದುವರಿದಿದೆ ಎಂದು ಎನ್ ಡಿಆರ್ ಎಫ್ ವಕ್ತಾರರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50,000 ರೂ. ಆರ್ಥಿಕ ನೆರವು ಘೋಷಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT