ಮುಂಬೈನ ರಾಜಭವನದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿವಸೇನೆ ನಾಯಕ ಏಕನಾಥ್ ಶಿಂಧೆ 
ದೇಶ

ಸಿಎಂ ಏಕನಾಥ್ ಶಿಂಧೆ ಸೇರಿ ಬಂಡಾಯ ಶಾಸಕರ ಅನರ್ಹಗೊಳಿಸುವಂತೆ ಕೋರಿ ಅರ್ಜಿ: ಜುಲೈ 11ಕ್ಕೆ ಸುಪ್ರೀಂ ಕೋರ್ಟ್ ವಿಚಾರಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಬಣದ 15 ಶಿವಸೇನೆ ಬಂಡಾಯ ಶಾಸಕರ ವಿರುದ್ಧ ಅನರ್ಹತೆ ಅರ್ಜಿ ವಿಚಾರಣೆ ಬಾಕಿ ಉಳಿದಿದ್ದು, ಅದನ್ನು ಜುಲೈ 11ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಅವರ ಬಣದ 15 ಶಿವಸೇನೆ ಬಂಡಾಯ ಶಾಸಕರ ವಿರುದ್ಧ ಅನರ್ಹತೆ ಅರ್ಜಿ ವಿಚಾರಣೆ ಬಾಕಿ ಉಳಿದಿದ್ದು, ಅದನ್ನು ಜುಲೈ 11ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ.

ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಬಣದ ಶಾಸಕರನ್ನು ವಿಧಾನಸಭೆಯಿಂದ ಅಮಾನತುಗೊಳಿಸುವಂತೆ ಕೋರಿ ಶಿವಸೇನೆ ಮುಖ್ಯಸ್ಥ ಸುನಿಲ್ ಪ್ರಭು ಅವರು ಸಲ್ಲಿಸಿರುವ ಅರ್ಜಿಯನ್ನು ಜುಲೈ 11ರಂದು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಕೊಂಡಿದೆ. 

ಮುಖ್ಯಮಂತ್ರಿ ಸೇರಿದಂತೆ 16 ಶಾಸಕರ ವಿರುದ್ಧ ಅನರ್ಹತೆ ಪ್ರಕ್ರಿಯೆಗಳು ಬಾಕಿ ಇರುವ ಕಾರಣ ಅರ್ಜಿಯನ್ನು ತುರ್ತು ವಿಚಾರಣೆಯ ಅಗತ್ಯವಿದೆ ಎಂದು ಹಿರಿಯ ವಕೀಲ ಕಪಿಲ್ ಸಿಬಲ್ ಅವರು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ಅವರನ್ನು ಒಳಗೊಂಡ ರಜಾಕಾಲದ ಪೀಠವನ್ನು ಒತ್ತಾಯಿಸಿದರು. ಜುಲೈ 11 ರಂದು ಹೊಸ ಅರ್ಜಿಯನ್ನು ಆಲಿಸಲು ಪೀಠವು ಒಪ್ಪಿಕೊಂಡಿತು.

ಕಳೆದ ಜೂನ್ 29 ರಂದು, ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆಯನ್ನು ನಡೆಸುವಂತೆ 31 ತಿಂಗಳ ಮಹಾ ವಿಕಾಸ್ ಅಘಾಡಿ (MVA) ಸರ್ಕಾರಕ್ಕೆ ಮಹಾರಾಷ್ಟ್ರ ರಾಜ್ಯಪಾಲರು ನಿರ್ದೇಶನ ನೀಡಿದ್ದರು. ಅದಕ್ಕೆ ತಡೆನೀಡಬೇಕೆಂದು ಶಿವಸೇನೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಸುಪ್ರೀಂ ಕೋರ್ಟ್ ರಾಜ್ಯಪಾಲರ ನಿರ್ದೇಶನಕ್ಕೆ ತಡೆನೀಡಲು ನಿರಾಕರಿಸಿತ್ತು.

ಇದಾದ ಬಳಿಕ ಜೂನ್ 29ರಂದು ಸಂಜೆ ಉದ್ಧವ್ ಠಾಕ್ರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಿರಿಯ ನಾಯಕರೊಂದಿಗಿನ ಚರ್ಚೆ ಬಳಿಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ: ದೆಹಲಿಗೆ ತೆರಳುವ ಮುನ್ನ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ

ತಮಿಳುನಾಡು-ಆಂಧ್ರ ತೀರಕ್ಕೆ ದಿತ್ವಾ ಚಂಡಮಾರುತ: ಬೆಂಗಳೂರು ಸೇರಿ ಕರ್ನಾಟಕದಲ್ಲಿ 4 ದಿನ ಭಾರೀ ಮಳೆ ಸಾಧ್ಯತೆ; IMD ಎಚ್ಚರಿಕೆ

ಗಲ್ಲು ಶಿಕ್ಷೆ ಬೆನ್ನಲ್ಲೇ ಬಾಂಗ್ಲಾದೇಶ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ 21 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್

ರಾಜಕೀಯ ಅಂದ್ರೆ ಅದು.... ಸಿಎಂ ಕುರ್ಚಿ ಗುದ್ದಾಟದ ಬಗ್ಗೆ ಶಾಕಿಂಗ್ ಹೇಳಿಕೆ ಕೊಟ್ಟ ಮಾಜಿ ಸಂಸದೆ ರಮ್ಯಾ

ಡಿಕೆಶಿ ಪರ ಒಕ್ಕಲಿಗ ಸ್ವಾಮೀಜಿ ಬ್ಯಾಟಿಂಗ್, ಸಿದ್ದರಾಮಯ್ಯ ಪರ ಅಖಾಡಕ್ಕಿಳಿದ 'ಕಾಗಿನೆಲೆ' ಸ್ವಾಮೀಜಿ!

SCROLL FOR NEXT