ದ್ರೌಪದಿ ಮುರ್ಮು 
ದೇಶ

'ಬಡ ಮತ್ತು ಬುಡಕಟ್ಟು ಜನರ ಪ್ರತೀಕ': ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಬೆಂಬಲಿಸಿದ ಅಕಾಲಿದಳ

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪತಿ ಮುರ್ಮು ಅವರಿಗೆ ಶಿರೋಮಣಿ ಅಕಾಲಿದಳ ಬೆಂಬಲ ಘೋಷಿಸಿದೆ. ಅಲ್ಪಸಂಖ್ಯಾತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ಘನತೆಯ...

ನವದೆಹಲಿ: ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಅವರಿಗೆ ಶಿರೋಮಣಿ ಅಕಾಲಿದಳ ಬೆಂಬಲ ಘೋಷಿಸಿದೆ. ಅಲ್ಪಸಂಖ್ಯಾತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ಘನತೆಯ ಪ್ರತೀಕವಾಗಿರುವುದರಿಂದ ಮುಂಬರುವ ಚುನಾವಣೆಯಲ್ಲಿ ಬೆಂಬಲ ನೀಡುವಂತೆ ದ್ರೌಪದಿ ಮುರ್ಮು ಅವರ ಮನವಿಯನ್ನು ಶಿರೋಮಣಿ ಅಕಾಲಿದಳ ಇಂದು ಸ್ವೀಕರಿಸಿದೆ.

ಈ ಸಂಬಂಧ ಇಂದು ಮಧ್ಯಾಹ್ನ ಚಂಡೀಗಢದಲ್ಲಿ ನಡೆದ ಪಕ್ಷದ ಕೋರ್ ಕಮಿಟಿಯ ಸಭೆಯಲ್ಲಿ ನಿರ್ಣಯ ಅಂಗೀಕರಿಸಿದ್ದು, ದ್ರೌಪತಿ ಮುರ್ಮು ಅವರು ದೇಶದ ಬಡ ಮತ್ತು ಬುಡಕಟ್ಟು ಭಾಗಗಳ ಪ್ರತೀಕವಾಗಿ ಹೊರಹೊಮ್ಮಿದ್ದಾರೆ ಎಂದು ಹೇಳಿದೆ.

ನಂತರ ಶಿರೋಮಣಿ ಅಕಾಲಿದಳ ಅಧ್ಯಕ್ಷ ಸುಖಬೀರ್ ಸಿಂಗ್ ಬಾದಲ್ ಅವರು ದ್ರೌಪತಿ  ಮುರ್ಮು ಅವರನ್ನು ಭೇಟಿಯಾಗಿ ಅವರನ್ನು ಬೆಂಬಲಿಸುವ ಪಕ್ಷದ ನಿರ್ಧಾರವನ್ನು ತಿಳಿಸಿದರು. ಈ ವೇಳೆ ಪಕ್ಷದ ಹಿರಿಯ ನಾಯಕರಾದ ಬಲ್ವಿಂದರ್ ಸಿಂಗ್ ಭುಂದರ್, ಚರಂಜಿತ್ ಸಿಂಗ್ ಅತ್ವಾಲ್, ಪ್ರೇಮ್ ಸಿಂಗ್ ಚಂದುಮಜ್ರಾ ಮತ್ತು ಹರ್ಚರಣ್ ಬೈನ್ಸ್ ಜೊತೆಗಿದ್ದರು.

ಅಲ್ಪಸಂಖ್ಯಾತರ ಮನಸ್ಸಿನಿಂದ ಅಭದ್ರತೆಯ ಭಾವನೆಯನ್ನು ತೆಗೆದುಹಾಕುವುದು ಮತ್ತು ಪಂಜಾಬ್‌ಗೆ ವಿಶೇಷವಾಗಿ ಸಿಖ್ಖರಿಗೆ ನ್ಯಾಯದಂತಹ ಪ್ರಮುಖ ವಿಷಯಗಳ ಕುರಿತು ಭಾರತೀಯ ಜನತಾ ಪಕ್ಷದೊಂದಿಗೆ (ಬಿಜೆಪಿ) ನಮ್ಮ ವಿಚಾರಗಳ ವ್ಯತ್ಯಾಸಗಳಿದ್ದರೂ ಅತ್ಯಂತ ದೀನದಲಿತರು ಮತ್ತು ಅಲ್ಪಸಂಖ್ಯಾತ ವರ್ಗಗಳಿಗೆ ಸೇರಿದವರಾದ ದ್ರೌಪತಿ ಮುರ್ಮು ಅವರನ್ನು ಬೆಂಬಲಿಸುವುದಾಗಿ ಪಕ್ಷದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಬಾದಲ್ ತಿಳಿಸಿದ್ದಾರೆ.

ಗೋಲ್ಡನ್ ಟೆಂಪಲ್ ಮೇಲೆ ದಾಳಿ ಮಾಡುವ ಮೂಲಕ ಸಿಖ್ ಸಮುದಾಯಕ್ಕೆ ದ್ರೋಹ ಮತ್ತು ಸಾವಿರಾರು ಸಿಖ್ಖರನ್ನು ಕೊಂದ ಅತ್ಯಂತ ಹಳೆಯ ಪಕ್ಷ  ಕಾಂಗ್ರೆಸ್ನಿಂದ ಕಣಕ್ಕಿಳಿದ ಅಭ್ಯರ್ಥಿಯನ್ನು ಅವರ ಪಕ್ಷವು ಅನುಸರಿಸಲು ಅಥವಾ ಬೆಂಬಲಿಸಲು ಎಂದಿಗೂ ಸಾಧ್ಯವಿಲ್ಲ ಎಂದು ಬಾದಲ್ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT