ಬಂಡಾಯ ಶಿವಸೇನಾ ಶಾಸಕರು 
ದೇಶ

ಅಸೆಂಬ್ಲಿ ವಿಶೇಷ ಅಧಿವೇಶನ ಹಿನ್ನೆಲೆ: ಸಿಎಂ ಶಿಂಧೆಯೊಂದಿಗೆ ಮುಂಬೈ ತಲುಪಿದ ಶಿವಸೇನಾ ಬಂಡಾಯ ಶಾಸಕರು

ಅಸ್ಸಾಂನಿಂದ ವಾಪಸ್ಸಾದ ಬಳಿಕ ಗೋವಾದಲ್ಲಿ ತಂಗಿದ್ದ ಶಿವಸೇನಾ ಬಂಡಾಯ ಶಾಸಕರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಮುಂಬೈ ತಲುಪಿದರು. ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಶನಿವಾರ ಪಕ್ಷ ವಿರೋಧಿ ಚಟುವಟಿಕೆಗಾಗಿ ಏಕನಾಥ್ ಶಿಂಧೆ ಅವರನ್ನು ಪಕ್ಷದಿಂದ ಅಮಾನತುಗೊಳಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಪಣಜಿ: ಅಸ್ಸಾಂನಿಂದ ವಾಪಸ್ಸಾದ ಬಳಿಕ ಗೋವಾದಲ್ಲಿ ತಂಗಿದ್ದ ಶಿವಸೇನಾ ಬಂಡಾಯ ಶಾಸಕರು ಇಂದು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರೊಂದಿಗೆ ಮುಂಬೈ ತಲುಪಿದರು. ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಶನಿವಾರ ಪಕ್ಷ ವಿರೋಧಿ ಚಟುವಟಿಕೆಗಾಗಿ ಏಕನಾಥ್ ಶಿಂಧೆ ಅವರನ್ನು ಪಕ್ಷದಿಂದ ಅಮಾನತುಗೊಳಿಸದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.

ಶಿವಸೇನೆ ಪಕ್ಷದ ಅಧ್ಯಕ್ಷನಾಗಿ ನನಗೆ ನೀಡಲಾದ ಅಧಿಕಾರವನ್ನು ಚಲಾಯಿಸಿ, ನಿಮ್ಮನ್ನು ಪಕ್ಷ ಸಂಘಟನೆಯಲ್ಲಿನ ಮುಖ್ಯಸ್ಥನ ಸ್ಥಾನದಿಂದ ತೆಗೆದುಹಾಕುತ್ತೇನೆ ಎಂದು ಉದ್ಧವ್ ಠಾಕ್ರೆ,  ಬಂಡಾಯ ಶಿವಸೇನಾ ಶಾಸಕರ ಬಣದ ನೇತೃತ್ವ ವಹಿಸಿದ್ದ ಮಹಾರಾಷ್ಟ್ರ ಸಿಎಂಗೆ ಪತ್ರ ಬರೆದಿದ್ದಾರೆ.

ಈ ಮಧ್ಯೆ ಸೋಮವಾರ ಏಕನಾಥ್ ಶಿಂಧೆ ವಿಶ್ವಾಸಮತ ಯಾಚಿಸಲಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ವಿಧಾನಸಭಾಧ್ಯಕ್ಷರ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು,  ಶಾಸಕ ರಾಹುಲ್ ನರ್ವೆಕರ್ ಅವರನ್ನು ಬಿಜೆಪಿ ಆಯ್ಕೆ ಮಾಡಿದ್ದು, ಶಿವಸೇನೆ ಶಾಸಕ ರಂಜನ್ ಸಾಲ್ವಿ ಅವರನ್ನು ಕಣಕ್ಕಿಳಿಸಿದೆ. 

ಗುರುವಾರ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಏಕನಾಥ್ ಶಿಂಧೆ, ಸೋಮವಾರ ಅಸೆಂಬ್ಲಿಯಲ್ಲಿ ಬಹುಮತವನ್ನು ಸಾಬೀತುಪಡಿಸಲಿದ್ದಾರೆ. ಭಾನುವಾರ ಮತ್ತು ಸೋಮವಾರ ಮಹಾರಾಷ್ಟ್ರ ಅಸೆಂಬ್ಲಿಯ ವಿಶೇಷ ಅಧಿವೇಶನ ನಡೆಯಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT