ಮೊಹಮ್ಮದ್ ಜುಬೈರ್ 
ದೇಶ

ಆಲ್ಟ್ ನ್ಯೂಸ್ ಮಾತೃ ಸಂಸ್ಥೆ ಪ್ರಾವ್ಡಾ ಮೀಡಿಯಾ ವಿದೇಶಿ ದೇಣಿಗೆ ಪಡೆದಿದೆ: ದೆಹಲಿ ಪೊಲೀಸರು

ಆಲ್ಟ್ ನ್ಯೂಸ್‌ನ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಾವ್ಡಾ ಮೀಡಿಯಾವು ಮೊಬೈಲ್ ಫೋನ್ ಸಂಖ್ಯೆ ಅಥವಾ ಐಪಿ ವಿಳಾಸ ವಿದೇಶಗಳ ವಿವಿಧ ವಹಿವಾಟುಗಳ ಮೂಲಕ 2 ಲಕ್ಷಕ್ಕೂ ಹೆಚ್ಚು ಹಣವನ್ನು ಸ್ವೀಕರಿಸಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ನವದೆಹಲಿ: ಆಲ್ಟ್ ನ್ಯೂಸ್‌ನ ಅಡಿಯಲ್ಲಿ ಕಾರ್ಯನಿರ್ವಹಿಸುವ ಪ್ರಾವ್ಡಾ ಮೀಡಿಯಾವು ಮೊಬೈಲ್ ಫೋನ್ ಸಂಖ್ಯೆ ಅಥವಾ ಐಪಿ ವಿಳಾಸ ವಿದೇಶಗಳ ವಿವಿಧ ವಹಿವಾಟುಗಳ ಮೂಲಕ 2 ಲಕ್ಷಕ್ಕೂ ಹೆಚ್ಚು ಹಣವನ್ನು ಸ್ವೀಕರಿಸಿದೆ ಎಂದು ದೆಹಲಿ ಪೊಲೀಸರು ಹೇಳಿದ್ದಾರೆ.

ಗೇಟ್‌ವೇ ರೇಜರ್ ಪೇ ಮೂಲಕ ಹಣ ಪಡೆದಿದ್ದಾರೆ. ಮೊಬೈಲ್ ಫೋನ್ ಸಂಖ್ಯೆಯು ಭಾರತದ ಹೊರಗಿನದ್ದಾಗಿದೆ. ಇನ್ನು IP ವಿಳಾಸವು ಬ್ಯಾಂಕಾಕ್, ಆಸ್ಟ್ರೇಲಿಯಾ, ಮನಾಮ, ಉತ್ತರ ಸೇರಿದಂತೆ ವಿದೇಶಗಳು ಮತ್ತು ನಗರಗಳ ವಿವಿಧ ವಹಿವಾಟುಗಳಿವೆ ಎಂದು ತಿಳಿದುಬಂದಿದೆ. ಹಾಲೆಂಡ್, ಸಿಂಗಾಪುರ, ವಿಕ್ಟೋರಿಯಾ, ನ್ಯೂಯಾರ್ಕ್, ಇಂಗ್ಲೆಂಡ್, ರಿಯಾದ್ ಪ್ರದೇಶ, ಶಾರ್ಜಾ, ಸ್ಟಾಕ್‌ಹೋಮ್, ಅಬುಧಾಬಿ, ವಾಷಿಂಗ್ಟನ್, ಕಾನ್ಸಾಸ್, ನ್ಯೂಜೆರ್ಸಿ, ಒಂಟಾರಿಯೊ, ಕ್ಯಾಲಿಫೋರ್ನಿಯಾ, ಟೆಕ್ಸಾಸ್, ಲೋವರ್ ಸ್ಯಾಕ್ಸೋನಿ, ಬರ್ನ್, ದುಬೈ, ಸ್ಕಾಟ್‌ಲ್ಯಾಂಡ್ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. .

ಈ ವಹಿವಾಟಿನ ಮೂಲಕ ಪ್ರಾವ್ಡಾ ಮೀಡಿಯಾಗೆ ಒಟ್ಟು 2,31,933 ರೂ. ಪಡೆದಿದ್ದಾರೆ. ಹಿಂದೂ ದೇವತೆಯ ವಿರುದ್ಧ 2018ರಲ್ಲಿ ಪೋಸ್ಟ್ ಮಾಡಿದ 'ಆಕ್ಷೇಪಾರ್ಹ ಟ್ವೀಟ್'ಗೆ ಸಂಬಂಧಿಸಿದ ಪ್ರಕರಣದಲ್ಲಿ ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಅವರನ್ನು ದೆಹಲಿ ಪೊಲೀಸರು ಜೂನ್ 27ರಂದು ಬಂಧಿಸಿದ್ದರು. ಇಂದಿಗೆ ನಾಲ್ಕು ದಿನಗಳ ಪೊಲೀಸ್ ಕಸ್ಟಡಿ ಮುಕ್ತಾಯಗೊಳ್ಳುತ್ತಿರುವುದರಿಂದ ಜುಬೇರ್ ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದಲ್ಲಿ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಕೋರಿದ್ದಾರೆ.

ಸಾಮಾಜಿಕ ಮಾಧ್ಯಮ ವಿಶ್ಲೇಷಣೆಯ ಸಮಯದಲ್ಲಿ, ಜುಬೈರ್ ನನ್ನು ಬೆಂಬಲಿಸಿದ ಮತ್ತು ಅವರ ಬಂಧನದ ನಂತರ ಅವರ ಬೆಂಬಲಕ್ಕೆ ಟ್ವೀಟ್ ಮಾಡಿದ ಟ್ವಿಟರ್ ಹ್ಯಾಂಡಲ್‌ಗಳು ಹೆಚ್ಚಾಗಿ ಮಧ್ಯಪ್ರಾಚ್ಯ ದೇಶಗಳಾದ ಯುಎಇ, ಬಹ್ರೇನ್ ಮತ್ತು ಕುವೈತ್ ಮತ್ತು ಪಾಕಿಸ್ತಾನದಂತಹ ದೇಶಗಳಿಂದ ಬಂದಿರುವುದು ಗಮನಕ್ಕೆ ಬಂದಿದೆ ಎಂದು ಹೇಳಿಕೆ ತಿಳಿಸಿದೆ.

ಪೊಲೀಸರು ಜುಬೈರ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 120ಬಿ(ಕ್ರಿಮಿನಲ್ ಪಿತೂರಿ) ಮತ್ತು 201(ಸಾಕ್ಷ್ಯ ನಾಶ) ಮತ್ತು ವಿದೇಶಿ ದೇಣಿಗೆ(ನಿಯಂತ್ರಣ) ಕಾಯಿದೆಯ ಸೆಕ್ಷನ್ 35 ಅಡಿಯಲ್ಲಿ ಹೊಸದಾಗಿ ಪ್ರಕರಣ ದಾಖಲಿಸಿದ್ದಾರೆ.

ಇದಕ್ಕೂ ಮೊದಲು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ(ಧರ್ಮ, ಜನಾಂಗ, ಜನ್ಮ ಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 295 ಎ(ಧಾರ್ಮಿಕ ಭಾವನೆಗಳನ್ನು ಕೆರಳಿಸುವ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿತ್ತು).

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT