ಆರೋಪಿಗಳ ಮೇಲೆ ಹಲ್ಲೆ 
ದೇಶ

ಕನ್ಹಯ್ಯ ಲಾಲ್ ಹತ್ಯೆ: ಕೋರ್ಟ್ ಆವರಣದಲ್ಲಿ ಆರೋಪಿಗಳ ಮೇಲೆ ಹಲ್ಲೆ; ಜುಲೈ 12 ರವರೆಗೆ 4 ಆರೋಪಿಗಳು ಎನ್ಐಎ ಕಸ್ಟಡಿಗೆ!

ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಕಳುಹಿಸಲಾಗಿದೆ.

ಉದಯಪುರ (ರಾಜಸ್ತಾನ): ಕನ್ಹಯ್ಯ ಲಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಾದ ಮೊಹಮ್ಮದ್ ರಿಯಾಜ್ ಮತ್ತು ಗೌಸ್ ಮೊಹಮ್ಮದ್ ಸೇರಿದಂತೆ ನಾಲ್ವರು ಆರೋಪಿಗಳನ್ನು ಜುಲೈ 12ರವರೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಕಸ್ಟಡಿಗೆ ಕಳುಹಿಸಲಾಗಿದೆ.

ಇಂದು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಸಂದರ್ಭದಲ್ಲಿ ಅಲ್ಲಿ ನೆರೆದಿದ್ದ ಲಾಯರ್ ಗಳು ಹತ್ಯೆ ಆರೋಪಿಗಳ ಮೇಲೆ ಹಲ್ಲೆ ನಡೆಸಿದ್ದು ಅಲ್ಲದೆ ಬಾಟಲಿಗಳನ್ನು ಅವರ ಮೇಲೆ ಎಸೆದಿದ್ದಾರೆ.

ಜೂನ್ 28ರಂದು ಹಾಡುಹಗಲೇ ಆರೋಪಿಗಳು ಹಿಂದೂ ವ್ಯಕ್ತಿ ಕನ್ಹಯ್ಯಾ ಲಾಲ್ ಅವರ ಶಿರಚ್ಛೇದ ಮಾಡಿದ್ದರು. ಉದಯಪುರ ಹತ್ಯೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಬಿಜೆಪಿ ನಾಯಕ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ ಮಾಡಿದ್ದಕ್ಕೆ ಟೈಲರ್ ಅವರನ್ನು ಹತ್ಯೆ ಮಾಡಲಾಗಿತ್ತು.

ಇಬ್ಬರು ಪ್ರಮುಖ ಆರೋಪಿಗಳು ಬೈಕ್ ನಲ್ಲಿ ಪರಾರಿಯಾಗುತ್ತಿದ್ದಾಗ ರಾಜಸ್ತಾನ ಪೊಲೀಸರು ಬೆನ್ನಟ್ಟಿ ಬಂಧಿಸಿದ್ದರು. ಏತನ್ಮಧ್ಯೆ, ಗುಪ್ತಚರ ಮೂಲಗಳು, ಪ್ರಮುಖ ಆರೋಪಿಯನ್ನು ಪಾಕಿಸ್ತಾನ ಮೂಲದ ಹ್ಯಾಂಡ್ಲರ್‌ಗಳು ಸಲ್ಮಾನ್ ಹೈದರ್ ಮತ್ತು ಅಬು ಇಬ್ರಾಹಿಂ ಎಂದು ಗುರುತಿಸಿದ್ದಾರೆ. ನೂಪುರ್ ಶರ್ಮಾ ಅವರು ಪ್ರವಾದಿಯವರ ಬಗ್ಗೆ ಮಾಡಿದ ಹೇಳಿಕೆಗಳ ವಿವಾದದ ಹಿನ್ನೆಲೆಯಲ್ಲಿ ಹೈದರ್ ಮತ್ತು ಇಬ್ರಾಹಿಂ ಇಬ್ಬರು ಆರೋಪಿಗಳನ್ನು ದೊಡ್ಡ ದಾಳಿ ನಡೆಸಲು ಮುಂದಾಗಿದ್ದರು ಎಂದು ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಮೊಹಮ್ಮದ್ ರಿಯಾಜ್ ಮತ್ತು ಘೌಸ್ ಮೊಹಮ್ಮದ್ ಭಯೋತ್ಪಾದಕ ದಾಳಿಗಳನ್ನು ನಡೆಸಲು ಆರ್‌ಡಿಎಕ್ಸ್‌ನಂತಹ ಸ್ಫೋಟಕಗಳನ್ನು ವ್ಯವಸ್ಥೆ ಮಾಡಲು ಪ್ರಯತ್ನಿಸುತ್ತಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರೂ 'ಏನಾದರೂ ದೊಡ್ಡದನ್ನು ಮಾಡುವ' ಬಗ್ಗೆ ಮಾತನಾಡಿದ್ದರು ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT