ಪ್ರಧಾನಿ ನರೇಂದ್ರ ಮೋದಿ 
ದೇಶ

ಅಗ್ನಿಪಥ್ ಯೋಜನೆಗೆ ವಿರೋಧ: ಪ್ರಧಾನಿ ಮೋದಿಗೆ 420 ರೂ. ಚೆಕ್ ಕಳುಹಿಸಿದ ಎಎಪಿ!

ಅಗ್ನಿಪಥ್ ಯೋಜನೆ ವಿರೋಧಿಸಿ ಆಮ್ ಆದ್ಮಿ ಪಕ್ಷ ಭಾನುವಾರ ಲಖನೌನಲ್ಲಿ ಪ್ರತಿಭಟನೆ ನಡೆಸಿತು. ನೂತನ ಮಿಲಿಟರಿ ನೇಮಕಾತಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಯುವಕರನ್ನು ವಂಚಿಸಿದೆ ಎಂದು ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿಗೆ  420 ರೂ. ಚೆಕ್ ಕಳುಹಿಸಿರುವುದಾಗಿ ಎಎಪಿ ಹೇಳಿದೆ.

ಲಖನೌ: ಅಗ್ನಿಪಥ್ ಯೋಜನೆ ವಿರೋಧಿಸಿ ಆಮ್ ಆದ್ಮಿ ಪಕ್ಷ ಭಾನುವಾರ ಲಖನೌನಲ್ಲಿ ಪ್ರತಿಭಟನೆ ನಡೆಸಿತು. ನೂತನ ಮಿಲಿಟರಿ ನೇಮಕಾತಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಯುವಕರನ್ನು ವಂಚಿಸಿದೆ ಎಂದು ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿಗೆ  420 ರೂ. ಚೆಕ್ ಕಳುಹಿಸಿರುವುದಾಗಿ ಎಎಪಿ ಹೇಳಿದೆ.

ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿ ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿದ ಆಮ್ ಆದ್ಮಿ ಪಕ್ಷದ ವಿದ್ಯಾರ್ಥಿ ಘಟಕ ಸಿವೈಎಸ್ ಎಸ್ ಸಾರ್ವಜನಿಕರಿಂದ ಹಣ ಕೋರಿತು. 

ಈ ಕುರಿತು ಟ್ವೀಟ್ ಮಾಡಿರುವ ಉತ್ತರ ಪ್ರದೇಶ ಎಎಪಿ ಉಸ್ತುವಾರಿ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್, ಭಾರತೀಯ ಸೇನೆಗಾಗಿ ಹಣ ಇಲ್ಲ ಎಂದು ಮೋದಿ ಹೇಳುತ್ತಾರೆ. ಯೋಧರಿಗೆ ಕೇವಲ ನಾಲ್ಕು ವರ್ಷಗಳ ವರಗೆ ಮಾತ್ರ ಉದ್ಯೋಗ ನೀಡಲಾಗುತ್ತದೆ. ಉತ್ತರ ಪ್ರದೇಶ ಎಎಪಿ ವಿದ್ಯಾರ್ಥಿ ಘಟಕ ರಾಜ್ಯಾದ್ಯಂತ ಬೇಡಿ, 420 ಮೋದಿ ಸರ್ಕಾರಕ್ಕೆ 420 ರೂ. ಚೆಕ್ ನ್ನು ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT