ಭಕ್ತರ ಚಿತ್ರ 
ದೇಶ

ಅಮರನಾಥ ಯಾತ್ರೆ: ಇಲ್ಲಿಯವರೆಗೂ 40,000 ಭಕ್ತರು ಗುಹ ದೇವಾಲಯಕ್ಕೆ ಭೇಟಿ, ಐವರು ಸಾವು

 ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಸುಮಾರು 5 ಭಕ್ತರು ಸಾವನ್ನಪ್ಪಿದ್ದು, ಸುಮಾರು 40, 000 ಭಕ್ತರು ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಗುಹ ದೇವಾಲಯಕ್ಕೆ ಭೇಟಿ ನೀಡಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಕಾಶ್ಮೀರ:  ಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಸುಮಾರು 5 ಭಕ್ತರು ಸಾವನ್ನಪ್ಪಿದ್ದು, ಸುಮಾರು 40, 000 ಭಕ್ತರು ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಗುಹ ದೇವಾಲಯಕ್ಕೆ ಭೇಟಿ ನೀಡಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ವಿರೇಂದ್ರರ್ ಗುಪ್ತಾ ಎಂಬ ಭಕ್ತರೊಬ್ಬರು ಚಂದನ್ ವಾರಿ- ಶೇಷನಾಗ ಮಾರ್ಗದಿಂದ ನಾಪತ್ತೆಯಾಗಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.  ಐವರು ಮೃತರ ಪೈಕಿ ಮೂವರು ಹೃದಯಾಘಾತದಿಂದ ಸಾವನ್ನಪ್ಪದ್ದಾರೆ. ದೆಹಲಿಯ ಜೈ ಪ್ರಕಾಶ್ ಎಂಬುವರು ಚಂದನ್ ವಾರಿಯಲ್ಲಿ, ಬರೈಲಿಯ ದೇವೇಂದರ್ ತಯಲ್ ಕೆಳ ಗುಹೆಯಲ್ಲಿ ಮತ್ತು ಬಿಹಾರದ ಲಿಪೊ ಶರ್ಮಾ ಕ್ವಾಜಿಗುಂದ ಶಿಬಿರದಲ್ಲಿ ಸಾವನ್ನಪ್ಪಿದ್ದಾರೆ. 

ಮಹಾರಾಷ್ಟ್ರದಿಂದ ಬಂದಿದ್ದ ಜಗನಾಥ್ ಕೆಲ ಆರೋಗ್ಯ ಸಮಸ್ಯೆಯಿಂದ ಸಾವಿಗೀಡಾಗಿದ್ದಾರೆ. ರಾಜಸ್ಥಾನದ ಅಶು ಸಿಂಗ್ ಎಂಬುವರು ಕುದುರೆಯಿಂದ ಬಿದ್ದು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಭಾನುವಾರ ಬೆಳಗ್ಗೆ 10 ಗಂಟೆಯವರೆಗೂ 40. 233 ಭಕ್ತರು ಗುಹೆ ದೇವಾಲಯಕ್ಕೆ ಭೇಟಿ ನೀಡಿದ್ದು, ಶಿವಲಿಂಗ ದರ್ಶನ ಪಡೆದಿದ್ದಾರೆ. ಜೂನ್ 30 ರಿಂದ ಆರಂಭವಾಗಿರುವ ಅಮರನಾಥ ಯಾತ್ರೆ ಆಗಸ್ಟ್ 11 ರಂದು ಅಂತ್ಯಗೊಳ್ಳಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ತಮಿಳುನಾಡು ಸಿಎಂ ವಿಜಯ್- ಪ್ರಧಾನಿ ಭೇಟಿ: 2 ದೊಡ್ಡ ಬೇಡಿಕೆ; ಇಲ್ಲಿದೆ ವಿವರ

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಅಸ್ಸಾಂ ವಿಧಾನಸಭೆಯಲ್ಲಿ ಹೈಡ್ರಾಮ: ವಿಪಕ್ಷಗಳ ಪ್ರತಿಭಟನೆ ನಡುವೆಯೇ UCC ಮಸೂದೆ ಅಂಗೀಕಾರ! ಬಹು ಪತ್ನಿತ್ವಕ್ಕೆ ಜೈಲು ಶಿಕ್ಷೆ

ಸಿಎಂ ಬದಲಾವಣೆಯಾದ್ರೆ ಜನರಿಗೆ ಕಾರಣ ತಿಳಿಸಬೇಕು, ಇಲ್ಲ ಪರಿಣಾಮ ಎದುರಿಸಬೇಕಾಗುತ್ತದೆ: ಕಾಂಗ್ರೆಸ್ ಗೆ 'ಅಹಿಂದ' ಎಚ್ಚರಿಕೆ

SCROLL FOR NEXT