ರಾಹುಲ್ ನಾರ್ವೇಕರ್ 
ದೇಶ

ಮಹಾರಾಷ್ಟ್ರ ವಿಧಾನಸಭೆ: ಶಿವಸೇನೆ ರೆಬೆಲ್ ಬಣದ ಮೇಲುಗೈ: ಬಿಜೆಪಿ ಅಭ್ಯರ್ಥಿ ನಾರ್ವೇಕರ್ ಸ್ಪೀಕರ್ ಆಗಿ ಆಯ್ಕೆ!

ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಮುಂಬೈ: ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್ ಆಯ್ಕೆ ಚುನಾವಣೆಯಲ್ಲೂ ಶಿವಸೇನೆಯ ರೆಬೆಲ್ ಶಾಸಕರ ಬಣ ಮೇಲುಗೈ ಸಾಧಿಸಿದ್ದು, ಶಿವಸೇನೆ ರೆಬೆಲ್ ಬಣ ಹಾಗೂ ಬಿಜೆಪಿಯ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯ ಸ್ಪೀಕರ್ ಆಗಿ ಬಿಜೆಪಿಯ ರಾಹುಲ್ ನಾರ್ವೇಕರ್ ಭಾನುವಾರ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದ್ದು, 164 ಮತಗಳನ್ನು ಪಡೆದ ನಾರ್ವೇಕರ್ ಅವರು 107 ಮತಗಳನ್ನು ಪಡೆದ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನಾ ಅಭ್ಯರ್ಥಿ ರಾಜನ್ ಸಾಲ್ವಿ ಅವರನ್ನು ಸೋಲಿಸಿದರು.

288 ಸದಸ್ಯ ಬಲದ ಮಹಾರಾಷ್ಟ್ರ ವಿಧಾನಸಭೆ ನಾಳೆಯಿಂದ ಆರಂಭವಾಗಲಿದ್ದು, ಸಿಎಂ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆಗೆ ವೇದಿಕೆ ಸಿದ್ಧವಾದಂತಾಗಿದೆ. ಸದನದ ಎರಡು ದಿನಗಳ ವಿಶೇಷ ಅಧಿವೇಶನ ಭಾನುವಾರ ಬೆಳಗ್ಗೆ 11 ಗಂಟೆಗೆ ಆರಂಭವಾಯಿತು. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಸೋಮವಾರ ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆ ಎದುರಿಸಲಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ