ಬಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ಶಿಕ್ಷಕ 
ದೇಶ

ಬಿಹಾರ: 5 ವರ್ಷದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ, ಪ್ರಜ್ಞೆ ತಪ್ಪಿದ ಮಗು

ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ...

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಅದು ವೈರಲ್ ಆಗುತ್ತಿದೆ.

ಐದು ವರ್ಷದ ಮಗುವನ್ನು ಹೊಡೆಯಲು ಶಿಕ್ಷಕನು ಮೊದಲು ಕಬ್ಬಿನ ಕೋಲು ಬಳಸಿದ್ದು, ಮಗು ನೋವಿನಿಂದ ಅಳುತ್ತಿರುವುದನ್ನ ವಿಡಿಯೋ ತೋರಿಸುತ್ತದೆ. ಹೊಡೆತದ ಪರಿಣಾಮವು ಎಷ್ಟು ಪ್ರಬಲವಾಗಿದೆ ಎಂದರೆ ಕೋಲು ಎರಡು ಭಾಗಗಳಾಗುತ್ತದೆ.

ಕಬ್ಬಿನ ಕೋಲು ಮುರಿದ ನಂತರ, ಶಿಕ್ಷಕನು ವಿದ್ಯಾರ್ಥಿಗೆ ಕೈಯಿಂದ ಹೊಡೆಯಲು ಪ್ರಾರಂಭಿಸುತ್ತಾನೆ ಹಾಗೂ ಬಾಲಕನ ಕೂದಲನ್ನು ಸಹ ಎಳೆಯುತ್ತಾನೆ. ಹುಡುಗ ಏತನ್ಮಧ್ಯೆ, ಅಳುತ್ತಲೇ ಇರುತ್ತಾನೆ ಮತ್ತು  ಹೊಡೆತ ನಿಲ್ಲಿಸುವಂತೆ ಶಿಕ್ಷಕರಿಗೆ ಮನವಿ ಮಾಡುತ್ತಾನೆ. ಬಳಿಕ ಬಾಲಕ ನೆಲದ ಮೇಲೆ ಬೀಳುತ್ತಾನೆ, ಆದರೆ ಶಿಕ್ಷಕನು ತನ್ನ ಚಿತ್ರಹಿಂಸೆಯನ್ನು ಮುಂದುವರೆಸುತ್ತಾನೆ. ಈ ವೇಳೆ ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಲು ತುಂಬಾ ಹೆದರುತ್ತಾರೆ. ಜಯಾ ಕೋಚಿಂಗ್ ಕ್ಲಾಸ್ ಟ್ಯೂಷನ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.

ಅಮಾನುಷವಾಗಿ ಥಳಿಸಿದ್ದರಿಂದ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮಗುವಿನ ಘೋರ ಸ್ಥಿತಿಯ ಬಗ್ಗೆ ತಿಳಿದಾಗ ಸ್ಥಳೀಯರು ಶಿಕ್ಷಕನನ್ನು ಛೋಟು ಎಂದು ಗುರುತಿಸಿದ್ದು, ಅವನನ್ನು ಹಿಡಿದು ಥಳಿಸಿದರು.

ಛೋಟು ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಾರಣ ಈ ರೀತಿ ಮಾಡಿದ್ದಾರೆ ಎಂದು ಕೋಚಿಂಗ್ ಸೆಂಟರ್ ಮಾಲೀಕ ಅಮರಕಾಂತ್ ಕುಮಾರ್ ಹೇಳಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT