ಬಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ಶಿಕ್ಷಕ 
ದೇಶ

ಬಿಹಾರ: 5 ವರ್ಷದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ, ಪ್ರಜ್ಞೆ ತಪ್ಪಿದ ಮಗು

ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ...

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಅದು ವೈರಲ್ ಆಗುತ್ತಿದೆ.

ಐದು ವರ್ಷದ ಮಗುವನ್ನು ಹೊಡೆಯಲು ಶಿಕ್ಷಕನು ಮೊದಲು ಕಬ್ಬಿನ ಕೋಲು ಬಳಸಿದ್ದು, ಮಗು ನೋವಿನಿಂದ ಅಳುತ್ತಿರುವುದನ್ನ ವಿಡಿಯೋ ತೋರಿಸುತ್ತದೆ. ಹೊಡೆತದ ಪರಿಣಾಮವು ಎಷ್ಟು ಪ್ರಬಲವಾಗಿದೆ ಎಂದರೆ ಕೋಲು ಎರಡು ಭಾಗಗಳಾಗುತ್ತದೆ.

ಕಬ್ಬಿನ ಕೋಲು ಮುರಿದ ನಂತರ, ಶಿಕ್ಷಕನು ವಿದ್ಯಾರ್ಥಿಗೆ ಕೈಯಿಂದ ಹೊಡೆಯಲು ಪ್ರಾರಂಭಿಸುತ್ತಾನೆ ಹಾಗೂ ಬಾಲಕನ ಕೂದಲನ್ನು ಸಹ ಎಳೆಯುತ್ತಾನೆ. ಹುಡುಗ ಏತನ್ಮಧ್ಯೆ, ಅಳುತ್ತಲೇ ಇರುತ್ತಾನೆ ಮತ್ತು  ಹೊಡೆತ ನಿಲ್ಲಿಸುವಂತೆ ಶಿಕ್ಷಕರಿಗೆ ಮನವಿ ಮಾಡುತ್ತಾನೆ. ಬಳಿಕ ಬಾಲಕ ನೆಲದ ಮೇಲೆ ಬೀಳುತ್ತಾನೆ, ಆದರೆ ಶಿಕ್ಷಕನು ತನ್ನ ಚಿತ್ರಹಿಂಸೆಯನ್ನು ಮುಂದುವರೆಸುತ್ತಾನೆ. ಈ ವೇಳೆ ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಲು ತುಂಬಾ ಹೆದರುತ್ತಾರೆ. ಜಯಾ ಕೋಚಿಂಗ್ ಕ್ಲಾಸ್ ಟ್ಯೂಷನ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.

ಅಮಾನುಷವಾಗಿ ಥಳಿಸಿದ್ದರಿಂದ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮಗುವಿನ ಘೋರ ಸ್ಥಿತಿಯ ಬಗ್ಗೆ ತಿಳಿದಾಗ ಸ್ಥಳೀಯರು ಶಿಕ್ಷಕನನ್ನು ಛೋಟು ಎಂದು ಗುರುತಿಸಿದ್ದು, ಅವನನ್ನು ಹಿಡಿದು ಥಳಿಸಿದರು.

ಛೋಟು ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಾರಣ ಈ ರೀತಿ ಮಾಡಿದ್ದಾರೆ ಎಂದು ಕೋಚಿಂಗ್ ಸೆಂಟರ್ ಮಾಲೀಕ ಅಮರಕಾಂತ್ ಕುಮಾರ್ ಹೇಳಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT