ಬಾಲಕನ ಮೇಲೆ ಹಲ್ಲೆ ನಡೆಸುತ್ತಿರುವ ಶಿಕ್ಷಕ 
ದೇಶ

ಬಿಹಾರ: 5 ವರ್ಷದ ಬಾಲಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಶಿಕ್ಷಕ, ಪ್ರಜ್ಞೆ ತಪ್ಪಿದ ಮಗು

ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ...

ಪಾಟ್ನಾ: ಆಘಾತಕಾರಿ ಘಟನೆಯೊಂದರಲ್ಲಿ ಬಿಹಾರದ ಕೋಚಿಂಗ್ ಸೆಂಟರ್‌ನಲ್ಲಿ ಶಿಕ್ಷಕರೊಬ್ಬರು ವಿದ್ಯಾರ್ಥಿಗೆ ಮನಬಂದಂತೆ ಥಳಿಸಿದ ನಂತರ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜ್ಯದ ರಾಜಧಾನಿ ಪಾಟ್ನಾದ ಧನರುವಾ ಬ್ಲಾಕ್‌ನಲ್ಲಿ ನಡೆದ ಈ ಘಟನೆಯ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಲಾಗಿದ್ದು, ಅದು ವೈರಲ್ ಆಗುತ್ತಿದೆ.

ಐದು ವರ್ಷದ ಮಗುವನ್ನು ಹೊಡೆಯಲು ಶಿಕ್ಷಕನು ಮೊದಲು ಕಬ್ಬಿನ ಕೋಲು ಬಳಸಿದ್ದು, ಮಗು ನೋವಿನಿಂದ ಅಳುತ್ತಿರುವುದನ್ನ ವಿಡಿಯೋ ತೋರಿಸುತ್ತದೆ. ಹೊಡೆತದ ಪರಿಣಾಮವು ಎಷ್ಟು ಪ್ರಬಲವಾಗಿದೆ ಎಂದರೆ ಕೋಲು ಎರಡು ಭಾಗಗಳಾಗುತ್ತದೆ.

ಕಬ್ಬಿನ ಕೋಲು ಮುರಿದ ನಂತರ, ಶಿಕ್ಷಕನು ವಿದ್ಯಾರ್ಥಿಗೆ ಕೈಯಿಂದ ಹೊಡೆಯಲು ಪ್ರಾರಂಭಿಸುತ್ತಾನೆ ಹಾಗೂ ಬಾಲಕನ ಕೂದಲನ್ನು ಸಹ ಎಳೆಯುತ್ತಾನೆ. ಹುಡುಗ ಏತನ್ಮಧ್ಯೆ, ಅಳುತ್ತಲೇ ಇರುತ್ತಾನೆ ಮತ್ತು  ಹೊಡೆತ ನಿಲ್ಲಿಸುವಂತೆ ಶಿಕ್ಷಕರಿಗೆ ಮನವಿ ಮಾಡುತ್ತಾನೆ. ಬಳಿಕ ಬಾಲಕ ನೆಲದ ಮೇಲೆ ಬೀಳುತ್ತಾನೆ, ಆದರೆ ಶಿಕ್ಷಕನು ತನ್ನ ಚಿತ್ರಹಿಂಸೆಯನ್ನು ಮುಂದುವರೆಸುತ್ತಾನೆ. ಈ ವೇಳೆ ಇತರ ವಿದ್ಯಾರ್ಥಿಗಳು ಮಧ್ಯಪ್ರವೇಶಿಸಲು ತುಂಬಾ ಹೆದರುತ್ತಾರೆ. ಜಯಾ ಕೋಚಿಂಗ್ ಕ್ಲಾಸ್ ಟ್ಯೂಷನ್ ಸೆಂಟರ್ ನಲ್ಲಿ ಈ ಘಟನೆ ನಡೆದಿದೆ.

ಅಮಾನುಷವಾಗಿ ಥಳಿಸಿದ್ದರಿಂದ ವಿದ್ಯಾರ್ಥಿ ಪ್ರಜ್ಞೆ ತಪ್ಪಿದ್ದು ಸ್ಥಳೀಯರು ಆಸ್ಪತ್ರೆಗೆ ಸೇರಿಸಿದ್ದಾರೆ. ಮಗುವಿನ ಘೋರ ಸ್ಥಿತಿಯ ಬಗ್ಗೆ ತಿಳಿದಾಗ ಸ್ಥಳೀಯರು ಶಿಕ್ಷಕನನ್ನು ಛೋಟು ಎಂದು ಗುರುತಿಸಿದ್ದು, ಅವನನ್ನು ಹಿಡಿದು ಥಳಿಸಿದರು.

ಛೋಟು ಅವರು ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದ ಕಾರಣ ಈ ರೀತಿ ಮಾಡಿದ್ದಾರೆ ಎಂದು ಕೋಚಿಂಗ್ ಸೆಂಟರ್ ಮಾಲೀಕ ಅಮರಕಾಂತ್ ಕುಮಾರ್ ಹೇಳಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT