ಮೊಯಿತ್ರಾ, ಮಣಿಮೇಕಲೈ 
ದೇಶ

ನವದೆಹಲಿ: ಮೊಯಿತ್ರಾ, ಮಣಿಮೇಕಲೈ ವಿರುದ್ಧ ಪೊಲೀಸರಿಗೆ ಬಿಜೆಪಿ ಮುಖಂಡರ ದೂರು

ಟಿಎಂಸಿ ಸಂಸದೆ ಮೆಹುವಾ ಮೊಯಿತ್ರಾ ಮತ್ತು ಕೆನಡಾ ಮೂಲದ ಚಿತ್ರ ನಿರ್ದೇಶಕ ಲೀನಾ ಮಣಿಮೇಕಲೈ ವಿರುದ್ಧ ಬಿಜೆಪಿ ಮುಖಂಡರು ಗುರುವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.ಅವರು ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ನವದೆಹಲಿ: ಟಿಎಂಸಿ ಸಂಸದೆ ಮೆಹುವಾ ಮೊಯಿತ್ರಾ ಮತ್ತು ಕೆನಡಾ ಮೂಲದ ಚಿತ್ರ ನಿರ್ದೇಶಕ ಲೀನಾ ಮಣಿಮೇಕಲೈ ವಿರುದ್ಧ ಬಿಜೆಪಿ ಮುಖಂಡರು ಗುರುವಾರ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ. ಅವರು ಹಿಂದೂಗಳ ಭಾವನೆಗಳಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.

ದೆಹಲಿ ಬಿಜೆಪಿ ಮುಖಂಡರಿಂದ ದೂರು ಸ್ವೀಕರಿಸಿರುವ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸರು, ಮುಂದಿನ ಕ್ರಮಕ್ಕಾಗಿ ಸೈಬರ್ ಘಟಕಕ್ಕೆ
ವರ್ಗಾಯಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೊಯಿತ್ರಾ ಅವರನ್ನು ಪಕ್ಷದಿಂದ ವಜಾಗೊಳಿಸಬೇಕೆಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರನ್ನು ಬಿಜೆಪಿ ಮುಖಂಡರು ಒತ್ತಾಯಿಸಿದ್ದಾರೆ.

 ಕಾಳಿ ದೇವತೆ ವಿರುದ್ಧ ಅವಹೇಳನಾಕಾರಿಯಾಗಿ ಮಾತನಾಡುವ ಮೂಲಕ ಮೊಹುತ್ರಾ ಹಿಂದೂಗಳ ಭಾವನೆಯನ್ನು ಅಪಮಾನಿಸಿದ್ದಾರೆ ಎಂದು ದೆಹಲಿ ಬಿಜೆಪಿ ಉಪಾಧ್ಯಕ್ಷ ರಾಜನ್ ತಿವಾರಿ ಆರೋಪಿಸಿದ್ದಾರೆ. ಕಾಳಿ ದೇವಿ ಕುರಿತು ಮೊಯಿತ್ರಾ ಮಂಗಳವಾರ ನೀಡಿದ್ದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ.

ಕಾಳಿ ದೇವಿ ಸಾಕ್ಷ್ಯಚಿತ್ರಕ್ಕಾಗಿ ಮಣಿಮೇಕಲೈ ವಿವಾದದ ಕೇಂದ್ರ ಬಿಂದುವಾಗಿದ್ದಾರೆ.  ಧೂಮಪಾನ ಮಾಡುವ ರೀತಿಯಲ್ಲಿ ಕಾಳಿಯನ್ನು ತೋರಿಸುವ ಫೋಸ್ಟರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ಅವರ ವಿರುದ್ಧ ಹಲವಾರು ಎಫ್ ಐಆರ್ ದಾಖಲಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT