ಉತ್ತರ ಪ್ರದೇಶದ ಸ್ಥಳೀಯ ಪೊಲೀಸರಿಗೆ ಚತ್ತೀಸ್ ಗಢ ಪೊಲೀಸರು ರೋಹಿತ್ ರಂಜನ್ ಬಂಧನಕ್ಕೆ ಸಂಬಂಧಿಸಿದಂತೆ ನೊಟೀಸ್ ನೀಡುತ್ತಿರುವುದು 
ದೇಶ

ರಾಹುಲ್ ಗಾಂಧಿ ಹೇಳಿಕೆಯ ತಿರುಚಿದ ವಿಡಿಯೋ: ಹಲವು ರಾಜ್ಯಗಳಲ್ಲಿ ಎಫ್ಐಆರ್; 'ಸುಪ್ರೀಂ' ಮೆಟ್ಟಿಲೇರಿದ ಜೀ ನ್ಯೂಸ್ ಪತ್ರಕರ್ತ ರೋಹಿತ್ ರಂಜನ್

ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಡಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್ಐಆರ್ ಗಳು ದಾಖಲಾಗಿದ್ದು,  ರೋಹಿತ್ ರಂಜನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ನವದೆಹಲಿ: ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಡಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ಎಫ್ಐಆರ್ ಗಳು ದಾಖಲಾಗಿದ್ದು, ರೋಹಿತ್ ರಂಜನ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
 
ರೋಹಿತ್ ರಂಜನ್ ತಮ್ಮ ವಿರುದ್ಧ ಹಲವು ಕಡೆಗಳಲ್ಲಿ ಎಫ್ಐಆರ್ ದಾಖಲಾಗಿರುವುದರಿಂದ (coercive action) ರಕ್ಷಣೆ ನೀಡಬೇಕು ಎಂದು ಮನವಿ ಮಾಡಿ ತಕ್ಷಣವೇ ಪ್ರಕರಣದ ವಿಚಾರಣೆಯನ್ನು ಕೋರಿದ್ದರು. ರಜೆ ಪೀಠದ ನ್ಯಾ. ಇಂದಿರಾ ಬ್ಯಾನರ್ಜಿ ಅವರಿದ್ದ ಪೀಠ ಗುರುವಾರದಂದು ವಿಚಾರಣೆಗೆ ಪಟ್ಟಿ ಮಾಡಿತ್ತು.

"ಇದನ್ನು ನಮಗೆ ನೀಡಲಾಗಿಲ್ಲ. ಈ ಪ್ರಕರಣದ ವಿಚಾರಣೆಯ ಹಂಚಿಕೆಯನ್ನು ಮುಖ್ಯನ್ಯಾಯಾಧೀಶರು ಮಾಡಬೇಕಾಗುತ್ತದೆ ಎಂದು ನ್ಯಾ.ಜೆ.ಕೆ ಮಹೇಶ್ವರಿ ಅವರೂ ಇದ್ದ ಪೀಠ ಹೇಳಿತ್ತು". 

ಸುದ್ದಿ ವಾಚಕ ರೋಹಿತ್ ರಂಜನ್ ಪರವಾಗಿ ಹಾಜರಾದ ಹಿರಿಯ ಅಡ್ವೊಕೇಟ್ ಸಿದ್ಧಾರ್ಥ್ ಲೂಥ್ರಾ, ಈ ಹಿಂದೆ ಇಂದು ವಿಚಾರಣೆಗೆ ಕೈಗೆತ್ತಿಕೊಳ್ಳಲು ನಿರ್ದೇಶನ ನೀಡಲಾಗಿತ್ತು. ಆದರೆ ಅದು ಆಗಿಲ್ಲ. ಆದ್ದರಿಂದ ಶುಕ್ರವಾರದಂದು ಯಾವುದಾದರೂ ಪೀಠಕ್ಕೆ ಈ ಪ್ರಕರಣದ ವಿಚಾರಣೆಯನ್ನು ವಹಿಸಬೇಕೆಂದು ಮನವಿ ಮಾಡಿದ್ದಾರೆ.

ರೋಹಿತ್ ರಂಜನ್ ಪರ ವಕೀಲರ ಮನವಿಗೆ ಸ್ಪಂದಿಸಿದ ನ್ಯಾಯಾಲಯ, ನೋಡೋಣ, ಪ್ರಕರಣದ ಪೇಪರ್ ಗಳು ಸಿಜೆಐ ಬಳಿ ಇದೆ. ನಾಳೆ ಪ್ರಕರಣದ ವಿಚಾರಣೆ ನಿಗದಿಪಡಿಸುವುದು ಸಿಜೆಐ ಅವರ ಕ್ಲಿಯರೆನ್ಸ್ ಮೇಲೆ ಅವಲಂಬಿತವಾಗಿರುತ್ತದೆ ಎಂದು ಪೀಠ ಹೇಳಿದೆ.

ರಂಜನ್ ಕ್ಷಮೆ ಕೋರಿದ್ದು, ಸುದ್ದಿ ಕಾರ್ಯಕ್ರಮವನ್ನು ಹಿಂಪಡೆಯಲಾಗಿತ್ತು. ರೋಹಿತ್ ರಂಜನ್ ಅವರನ್ನು ಉತ್ತರ ಪ್ರದೇಶ ಪೊಲೀಸರು ನೋಯ್ಡಾದಲ್ಲಿ ಬಂಧಿಸಿದ್ದರು. ರೋಹಿತ್ ರಂಜನ್ ಜಾಮೀನು ಪಡೆದಿದು ಹೊರಬಂದಿದ್ದಾರೆ. ಕಾರ್ಯಕ್ರಮವೊಂದರಲ್ಲಿ ತಪ್ಪು ಮಾಡಿ ಅದಕ್ಕಾಗಿ ಕ್ಷಮೆಯನ್ನೂ ಕೇಳಿದ್ದಾರೆ, ಸುದ್ದಿಯನ್ನು ಹಿಂಪಡೆಯಲಾಗಿದೆ. ಆದರೆ ಈಗ ಚತ್ತೀಸ್ ಗಢದ ಪೊಲೀಸರು ಆತನನ್ನು ಬಂಧಿಸಲು ಯತ್ನಿಸುತ್ತಿದ್ದಾರೆ. ಆದ್ದರಿಂದ ಇದು ತುರ್ತಾಗಿ ವಿಚಾರಣೆ ನಡೆಯಬೇಕಿರುವ ಪ್ರಕರಣವಾಗಿದೆ. ಇಲ್ಲವಾದಲ್ಲಿ ಆತನನ್ನು ಪದೇ ಪದೇ ಬಂಧನಕ್ಕೊಳಪಡಿಸುವ ಸಾಧ್ಯತೆ ಇದೆ ಎಂದು ವಕೀಲರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT