ಆನಂದ್ ಶರ್ಮಾ, ಜೆ.ಪಿ. ನಡ್ಡಾ 
ದೇಶ

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ

ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ನವದೆಹಲಿ: ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ನನಗೆ ಎಲ್ಲ ಹಕ್ಕಿದೆ. ಇಬ್ಬರು ಒಂದೇ ವಿಚಾರವನ್ನು ಹಂಚಿಕೊಂಡಿರುವುದಾಗಿ ಆನಂದ್ ಶರ್ಮಾ ತಿಳಿಸಿದ್ದಾರೆ.

'ಒಂದು ವೇಳೆ ಅವರನ್ನು ಭೇಟಿಯಾಗಬೇಕಾದರೆ ಬಹಿರಂಗವಾಗಿಯೇ ಹೋಗುತ್ತೇನೆ. ಅದೇನು ದೊಡ್ಡ ವಿಷಯವೇ? ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಸೈದ್ಧಾಂತಿಕ ವಿರೋಧಿಗಳು ಎಂದರೆ ನಮ್ಮ ನಡುವೆ ಯಾವುದೇ ವೈಯಕ್ತಿಕ ಒಡಕಿದೆ ಎಂದಲ್ಲ. ನಾವು ಸೈದ್ಧಾಂತಿಕ ವಿರೋಧಿಗಳನ್ನು ಸಾಮಾಜಿಕ ಶತ್ರುಗಳನ್ನಾಗಿ ಮಾಡಿಕೊಳ್ಳುವುದಿಲ್ಲ ಎಂದರು. 

ಜೆಪಿ ನಡ್ಡಾ ಅವರನ್ನು ಭೇಟಿಯಾಗಬೇಕಾದರೆ, ಅವರನ್ನು ಭೇಟಿ ಮಾಡಲು ನನಗೆ ಎಲ್ಲ ಹಕ್ಕಿದೆ, ನನಗೆ ಅವರು ಬಿಜೆಪಿ ಅಧ್ಯಕ್ಷರಲ್ಲ, ನಾವಿಬ್ಬರೂ ಒಂದೇ ರಾಜ್ಯದಿಂದ ಬಂದಿದ್ದು, ಇದರಲ್ಲಿ ರಾಜಕೀಯ ಮಹತ್ವವನ್ನು ಸೇರಿಸಬಾರದು ಎಂದು ಅವರು ಹೇಳಿದರು.

ಶರ್ಮಾ ಅವರು ಗುರುವಾರ ನಡ್ಡಾ ಅವರನ್ನು ಭೇಟಿಯಾದ ಬಗ್ಗೆ ವರದಿಯಾಗಿದೆ. ಆದರೆ, ಈ ವರದಿಯನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT