ಆನಂದ್ ಶರ್ಮಾ, ಜೆ.ಪಿ. ನಡ್ಡಾ 
ದೇಶ

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ

ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ನವದೆಹಲಿ: ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ನನಗೆ ಎಲ್ಲ ಹಕ್ಕಿದೆ. ಇಬ್ಬರು ಒಂದೇ ವಿಚಾರವನ್ನು ಹಂಚಿಕೊಂಡಿರುವುದಾಗಿ ಆನಂದ್ ಶರ್ಮಾ ತಿಳಿಸಿದ್ದಾರೆ.

'ಒಂದು ವೇಳೆ ಅವರನ್ನು ಭೇಟಿಯಾಗಬೇಕಾದರೆ ಬಹಿರಂಗವಾಗಿಯೇ ಹೋಗುತ್ತೇನೆ. ಅದೇನು ದೊಡ್ಡ ವಿಷಯವೇ? ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಸೈದ್ಧಾಂತಿಕ ವಿರೋಧಿಗಳು ಎಂದರೆ ನಮ್ಮ ನಡುವೆ ಯಾವುದೇ ವೈಯಕ್ತಿಕ ಒಡಕಿದೆ ಎಂದಲ್ಲ. ನಾವು ಸೈದ್ಧಾಂತಿಕ ವಿರೋಧಿಗಳನ್ನು ಸಾಮಾಜಿಕ ಶತ್ರುಗಳನ್ನಾಗಿ ಮಾಡಿಕೊಳ್ಳುವುದಿಲ್ಲ ಎಂದರು. 

ಜೆಪಿ ನಡ್ಡಾ ಅವರನ್ನು ಭೇಟಿಯಾಗಬೇಕಾದರೆ, ಅವರನ್ನು ಭೇಟಿ ಮಾಡಲು ನನಗೆ ಎಲ್ಲ ಹಕ್ಕಿದೆ, ನನಗೆ ಅವರು ಬಿಜೆಪಿ ಅಧ್ಯಕ್ಷರಲ್ಲ, ನಾವಿಬ್ಬರೂ ಒಂದೇ ರಾಜ್ಯದಿಂದ ಬಂದಿದ್ದು, ಇದರಲ್ಲಿ ರಾಜಕೀಯ ಮಹತ್ವವನ್ನು ಸೇರಿಸಬಾರದು ಎಂದು ಅವರು ಹೇಳಿದರು.

ಶರ್ಮಾ ಅವರು ಗುರುವಾರ ನಡ್ಡಾ ಅವರನ್ನು ಭೇಟಿಯಾದ ಬಗ್ಗೆ ವರದಿಯಾಗಿದೆ. ಆದರೆ, ಈ ವರದಿಯನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT