ಆನಂದ್ ಶರ್ಮಾ, ಜೆ.ಪಿ. ನಡ್ಡಾ 
ದೇಶ

ಜೆಪಿ ನಡ್ಡಾ ಭೇಟಿ ಮಾಡಿದ ಆನಂದ್ ಶರ್ಮಾ: ಹಲವು ಊಹಾಪೋಹ

ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ನವದೆಹಲಿ: ಕಾಂಗ್ರೆಸ್‌ನ ಜಿ 23 ಗುಂಪಿನ ಸದಸ್ಯರಾಗಿರುವ ಆನಂದ್ ಶರ್ಮಾ ಗುರುವಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಊಹಾಪೋಹಗಳಿಗೆ ಕಾರಣವಾಗಿದೆ.

ಜೆ.ಪಿ. ನಡ್ಡಾ ಅವರನ್ನು ಭೇಟಿಯಾಗಲು ನನಗೆ ಎಲ್ಲ ಹಕ್ಕಿದೆ. ಇಬ್ಬರು ಒಂದೇ ವಿಚಾರವನ್ನು ಹಂಚಿಕೊಂಡಿರುವುದಾಗಿ ಆನಂದ್ ಶರ್ಮಾ ತಿಳಿಸಿದ್ದಾರೆ.

'ಒಂದು ವೇಳೆ ಅವರನ್ನು ಭೇಟಿಯಾಗಬೇಕಾದರೆ ಬಹಿರಂಗವಾಗಿಯೇ ಹೋಗುತ್ತೇನೆ. ಅದೇನು ದೊಡ್ಡ ವಿಷಯವೇ? ನಾನು ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇನೆ. ಸೈದ್ಧಾಂತಿಕ ವಿರೋಧಿಗಳು ಎಂದರೆ ನಮ್ಮ ನಡುವೆ ಯಾವುದೇ ವೈಯಕ್ತಿಕ ಒಡಕಿದೆ ಎಂದಲ್ಲ. ನಾವು ಸೈದ್ಧಾಂತಿಕ ವಿರೋಧಿಗಳನ್ನು ಸಾಮಾಜಿಕ ಶತ್ರುಗಳನ್ನಾಗಿ ಮಾಡಿಕೊಳ್ಳುವುದಿಲ್ಲ ಎಂದರು. 

ಜೆಪಿ ನಡ್ಡಾ ಅವರನ್ನು ಭೇಟಿಯಾಗಬೇಕಾದರೆ, ಅವರನ್ನು ಭೇಟಿ ಮಾಡಲು ನನಗೆ ಎಲ್ಲ ಹಕ್ಕಿದೆ, ನನಗೆ ಅವರು ಬಿಜೆಪಿ ಅಧ್ಯಕ್ಷರಲ್ಲ, ನಾವಿಬ್ಬರೂ ಒಂದೇ ರಾಜ್ಯದಿಂದ ಬಂದಿದ್ದು, ಇದರಲ್ಲಿ ರಾಜಕೀಯ ಮಹತ್ವವನ್ನು ಸೇರಿಸಬಾರದು ಎಂದು ಅವರು ಹೇಳಿದರು.

ಶರ್ಮಾ ಅವರು ಗುರುವಾರ ನಡ್ಡಾ ಅವರನ್ನು ಭೇಟಿಯಾದ ಬಗ್ಗೆ ವರದಿಯಾಗಿದೆ. ಆದರೆ, ಈ ವರದಿಯನ್ನು ಕಾಂಗ್ರೆಸ್ ನಾಯಕರು ಅಲ್ಲಗಳೆದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?