ಸಾಂದರ್ಭಿಕ ಚಿತ್ರ 
ದೇಶ

ಪಶ್ಚಿಮ ಬಂಗಾಳ: ಮೂವರು ಟಿಎಂಸಿ ಕಾರ್ಯಕರ್ತರ ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಾಡಲ್ಲಿ ಮತ್ತೊಮ್ಮೆ ರಕ್ತ ಹರಿದಿದೆ. ಗುರುವಾರ ಬೆಳಗ್ಗೆ ಕೋಲ್ಕತ್ತಾದಿಂದ ಸುಮಾರು 50 ಕಿಮೀ ದೂರದಲ್ಲಿರುವ ಕ್ಯಾನಿಂಗ್‌ನ ಜನನಿಬಿಡ ಪ್ರದೇಶದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಮತ್ತು ಇಬ್ಬರು ಕಾರ್ಯಕರ್ತರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.

ಪಶ್ಚಿಮ ಬಂಗಾಳದ ಆಡಳಿತ ಪಕ್ಷದ ಗೋಪಾಲ್‌ಪುರ ಗ್ರಾಮ ಪಂಚಾಯತ್ ಸದಸ್ಯ ಸ್ವಪನ್ ಮಾಝಿ ಅವರು ಬೆಳಗ್ಗೆ 9 ಗಂಟೆ ಸುಮಾರಿಗೆ ಸಭೆಗೆ ತೆರಳುತ್ತಿದ್ದಾಗ ಹಂತಕರು ಅವರ ಮೇಲೆ ಗುಂಡಿನ ದಾಳಿ ನಡೆಸಿ ಚಾಕುವಿನಿಂದ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪರಾರಿಯಾಗುತ್ತಿದ್ದಾಗ ಹಂತಕರು ಟಿಎಂಸಿ ನಾಯಕನ ಜೊತೆ ಇದ್ದ ಇಬ್ಬರು ಕಾರ್ಯಕರ್ತರ ಮೇಲೂ ಗುಂಡು ಹಾರಿಸಿದ್ದಾರೆ. ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಗ್ಗೆ ಜನನಿಬಿಡ ರಸ್ತೆಯಲ್ಲಿ ಮೋಟಾರ್ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಮೊದಲು ಮಾಝಿಗೆ ಗುಂಡು ಹಾರಿಸಿದರು. ಆತನಿಗೆ ಗುಂಡು ಹಾರಿಸಿರುವುದನ್ನು ನೋಡಿದ ಇತರ ಇಬ್ಬರು ಓಡಿಹೋಗಲು ಪ್ರಾರಂಭಿಸಿದರು. ಆದರೆ ದಾಳಿಕೋರರು ಹಿಂಬದಿಯಿಂದ ಅವರ ಮೇಲೂ ಗುಂಡು ಹಾರಿಸಿದರು. ಮೂವರ ಮೇಲೆ ಗುಂಡು ಹಾರಿಸಿದ ನಂತರ ಚಾಕುವಿನಿಂದ ಹಲ್ಲೆ ಮಾಡಲಾಗಿದೆ" ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ. 

ಈ ಭೀಕರ ಗುಂಡಿನ ದಾಳಿ ಹಿಂದಿನ ಉದ್ದೇಶ ಇನ್ನೂ ಸ್ಪಷ್ಟವಾಗಿ ತಿಳಿದು ಬಂದಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?