ಜಗ್ಗೇಶ್ ಪ್ರಮಾಣ ವಚನ 
ದೇಶ

ಕನ್ನಡದಲ್ಲಿ ರಾಘವೇಂದ್ರ ಸ್ವಾಮೀಜಿ ಹೆಸರಲ್ಲಿ ನಟ ಜಗ್ಗೇಶ್ ಪ್ರಮಾಣ ವಚನ: ದೆಹಲಿಯಲ್ಲಿರುವ ರಾಯರ ಮಠಕ್ಕೆ ಭೇಟಿ

ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣವಚನ ಸ್ವೀಕರಿಸಿದ್ದಾರೆ. ​ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ದೆಹಲಿ: ರಾಜ್ಯಸಭಾ ಸದಸ್ಯರಾಗಿ ನಟ ಜಗ್ಗೇಶ್​ ಪ್ರಮಾಣವಚನ ಸ್ವೀಕರಿಸಿದ್ದಾರೆ. ​ರಾಜ್ಯಸಭೆಯಲ್ಲಿ ಇಂದು ನೂತನ ರಾಜ್ಯಸಭಾ ಸದಸ್ಯರು ಪ್ರಮಾಣವಚನ ಸ್ವೀಕರಿಸಿದ್ದಾರೆ. ನಟ ಜಗ್ಗೇಶ್​ ಕನ್ನಡ ಭಾಷೆಯಲ್ಲಿ ರಾಘವೇಂದ್ರ ಸ್ವಾಮಿಗಳ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.​​

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಲೆಹರ್​​ಸಿಂಗ್ ಹಾಗೂ ಜೈರಾಮ್​​​ ರಮೇಶ್ ಕೂಡ ಇದೇ ವೇಳೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೆಹಲಿಯಲ್ಲಿ ಪ್ರಮಾಣವಚನ ಸ್ವೀಕಾರ ಮಾಡುವ ಮೊದಲು ನಟ ಜಗ್ಗೇಶ್ ಹಾಗೂ ಅವರ ಪತ್ನಿ ಪರಿಮಳ ದೆಹಲಿಯಲ್ಲಿರುವ ರಾಯರ ಮಠಕ್ಕೆ ನಟ ಜಗ್ಗೇಶ್ ಭೇಟಿ ನೀಡಿ ಬೃಂದಾವನ ದರ್ಶನ ಮಾಡಿದ್ದಾರೆ.

ರಾಜ್ಯಸಭೆಯಲ್ಲಿ ಇಂದು ಕನ್ನಡದಲ್ಲಿಯೇ ಜಗ್ಗೇಶ್‌ ಪ್ರಮಾಣವಚನ ಸ್ವೀಕರಿಸಿದ್ದು, ಎಲ್ಲರ ಗಮನಸೆಳೆಯುತ್ತಿದೆ. ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರಿದ್ದ ಪೀಠದ ಸಮ್ಮುಖದಲ್ಲಿ ಜಗ್ಗೇಶ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT