ಲೈಂಗಿಕ ಕಿರುಕುಳ ಪ್ರಕರಣ 
ದೇಶ

ಇಂಟರ್ನ್‌ಶಿಪ್ ಗಾಗಿ ಬಂದಿದ್ದ ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಜಾರ್ಖಂಡ್ ಐಎಎಸ್ ಅಧಿಕಾರಿ ಬಂಧನ! 

ಇಂಟರ್ನ್ಶಿಪ್ ಗಾಗಿ ಬಂದಿದ್ದ ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಜಾರ್ಖಂಡ್ ನಲ್ಲಿ ಐಎಎಸ್ ಅಧಿಕಾರಿ ರಿಯಾಜ್ ಅಹ್ಮದ್ ನ್ನು ಬಂಧಿಸಲಾಗಿದೆ. 

ರಾಂಚಿ: ಇಂಟರ್ನ್ಶಿಪ್ ಗಾಗಿ ಬಂದಿದ್ದ ಐಐಟಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದಡಿ ಜಾರ್ಖಂಡ್ ನಲ್ಲಿ ಐಎಎಸ್ ಅಧಿಕಾರಿ ರಿಯಾಜ್ ಅಹ್ಮದ್ ನ್ನು ಬಂಧಿಸಲಾಗಿದೆ. 

ರಿಯಾಜ್ ಅಹ್ಮದ್ ಖುಂತಿಯ ಉಪವಿಭಾಗೀಯ ಮ್ಯಾಜಿಸ್ಟ್ರೇಟ್ ಆಗಿದ್ದು, ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯ ಸಂದರ್ಭದಲ್ಲಿ ವಿದ್ಯಾರ್ಥಿನಿಯನ್ನು ಚುಂಬಿಸಲು ಯತ್ನಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆ. 

ಈ ಬಗ್ಗೆ ಖುಂತಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತೆ ನೀಡಿರುವ ದೂರಿನ ಆಧಾರದಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಜು.2 ರಂದು ಬೆಳ್ಳಂ ಬೆಳಿಗ್ಗೆ ತಮ್ಮ ನಿವಾಸದಲ್ಲಿ ಆಯೋಜಿಸಲಾಗಿದ್ದ ಪಾರ್ಟಿಯಲ್ಲಿ ಆಕೆಗೆ ಮದ್ಯ ಕುಡಿಸಿ ಲೈಂಗಿಕ ಕಿರುಕುಳ ನೀಡಿದ್ದಾರೆಂಬ ಆರೋಪ ಐಎಎಸ್ ಅಧಿಕಾರಿ ವಿರುದ್ಧ ಕೇಳಿಬಂದಿದೆ.
 
ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಖುಂತಿ ಎಸ್ ಡಿಎಂ ನ ಅಮಾನತು ಆದೇಶ ಪ್ರಕಟಿಸಲು ಸಿಎಂ ಕಚೇರಿಯಿಂದ ನಿರ್ದೇಶನ ನೀಡಲಾಗುವುದು ಎಂದು ಸಿಎಂ ಹೇಮಂತ್ ಸೊರೇನ್ ಹೇಳಿದ್ದಾರೆ. ಐಎಎಸ್ ಅಧಿಕಾರಿ ನಿವಾಸದಲ್ಲಿ ರಾತ್ರಿ ಪ್ರಾರಂಭವಾದ ಪಾರ್ಟಿ ಬೆಳಿಗ್ಗೆ ವರೆಗೂ ನಡೆದಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
 
ಐಐಟಿ ಮಂಡಿಯ ಗ್ರಾಮೀಣಾಭಿವೃದ್ಧಿ ವಿದ್ಯಾರ್ಥಿನಿ ಇಂಟರ್ನ್ಶಿಪ್ ಮುಕ್ತಾಯಗೊಳಿಸಲು ಖುಂತಿಗೆ ಆಗಮಿಸಿದ್ದರು ಎನ್ನಲಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Lionel Messi: ಮೆಸ್ಸಿ ನೋಡೋಕೆ ಆಗಲಿಲ್ಲ ಎಂದು ರೊಚ್ಚಿಗೆದ್ದ ಫ್ಯಾನ್ಸ್, ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ದಾಂಧಲೆ-Video

17.5 ಕೋಟಿ ರೂ. ವಂಚನೆ ಪ್ರಕರಣ: ಸಿದ್ದರಾಮಯ್ಯರ ವಿಶೇಷ ಕರ್ತವ್ಯಾಧಿಕಾರಿ ಪುತ್ರನ ಹೆಸರು: NRI ದೂರು!

'ಕಡತಗಳು ಟೇಬಲ್‌ನಿಂದ ಟೇಬಲ್‌ಗೆ ವರ್ಗವಾಗುತ್ತಿರುವಾಗಲೇ ಸುವರ್ಣ ಸಮಯ ಕಳೆದು ಹೋಗುತ್ತಿದೆ': HDKಗೆ ರವಿಕುಮಾರ್ ಟಾಂಗ್

ಬೆಂಗಳೂರು: ರಿಕ್ಕಿ ಕೇಜ್ ಮನೆಯಲ್ಲಿ ಡೆಲಿವರಿ ಬಾಯ್ ಕಳ್ಳತನ; ವಿಡಿಯೋ ಹಂಚಿಕೊಂಡ 'ಗ್ರ್ಯಾಮಿ' ಪುರಸ್ಕೃತ!

ರಾಂಚಿ: ಲ್ಯಾಂಡಿಗೆ ವೇಳೆ ಇಂಡಿಗೋ ವಿಮಾನದ ಬಾಲ ರನ್‌ವೇಗೆ ಡಿಕ್ಕಿ; ತಪ್ಪಿದ ದೊಡ್ಡ ಅನಾಹುತ!

SCROLL FOR NEXT