ನಿತಿನ್ ಗಡ್ಕರಿ 
ದೇಶ

ಮುಂದಿನ 5 ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಬಳಕೆ ಸ್ಥಗಿತ: ಕೇಂದ್ರ ಸಚಿವ ನಿತಿನ್ ಗಡ್ಕರಿ

ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತದಲ್ಲಿ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ನವದೆಹಲಿ: ಪರ್ಯಾಯ ಇಂಧನಗಳತ್ತ ಮುಖ ಮಾಡಿರುವ ಭಾರತದಲ್ಲಿ ಮುಂದಿನ 5 ವರ್ಷಗಳಲ್ಲಿ ಪೆಟ್ರೋಲ್ ಬಳಕೆ ನಿಷೇಧವಾಗಲಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಡಾ.ಪಂಜಾಬ್ರಾವ್ ದೇಶಮುಖ್ ಕೃಷಿ ವಿದ್ಯಾಪೀಠದಿಂದ ಗಡ್ಕರಿ ಅವರಿಗೆ ಡಾಕ್ಟರ್ ಆಫ್ ಸೈನ್ಸ್ (ಡಿಎಸ್‌ಸಿ) ಗೌರವ ಪದವಿ ಪ್ರದಾನ ಮಾಡಲಾಯಿತು. ವಿಶ್ವವಿದ್ಯಾನಿಲಯದ 36 ನೇ ಘಟಿಕೋತ್ಸವ ಸಮಾರಂಭದಲ್ಲಿ ಗವರ್ನರ್ ಮತ್ತು ಸಾರ್ವಜನಿಕ ವಿಶ್ವವಿದ್ಯಾಲಯಗಳ ಕುಲಪತಿ ಭಗತ್ ಸಿಂಗ್ ಕೊಶ್ಯಾರಿ ಅವರು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವರಿಗೆ ಪದವಿ ಪ್ರದಾನ ಮಾಡಿದರು. ಕಾರ್ಯಕ್ರಮದಲ್ಲಿ ಮಾಜಿ ಉಪಕುಲಪತಿ ಡಾ.ಮೋತಿಲಾಲ್ ಮದನ್, ಕುಲಸಚಿವ ಡಾ.ವಿಲಾಸ್ ಭಾಲೆ, ಕುಲಸಚಿವರು, ಅಧ್ಯಾಪಕರು, ಪ್ರಾಧ್ಯಾಪಕರು, ಶಿಕ್ಷಕರು ಹಾಗೂ ಪದವೀಧರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ ಪರ್ಯಾಯ ಇಂಧನ ಬಳಕೆಯ ಮಹತ್ವದ ಕುರಿತು ಮಾತನಾಡಿದರು.

'ಮಹಾರಾಷ್ಟ್ರದ ವಿದರ್ಭ ಜಿಲ್ಲೆಯಲ್ಲಿ ತಯಾರಾಗುತ್ತಿರುವ ಜೈವಿಕ ಎಥೆನಾಲ್ ಅನ್ನು ವಾಹನಗಳಲ್ಲಿ ಬಳಸಲಾಗುತ್ತಿದೆ. ಹಸಿರು ಹೈಡ್ರೋಜನ್ (ಹಸಿರು ಜಲಜನಕ) ತಯಾರಿಸಬಹುದು ಮತ್ತು ಇದನ್ನೂ ಕೆಜಿಗೆ 70 ರೂ.ಗೆ ಮಾರಾಟ ಮಾಡಬಹುದು. ಮುಂದಿನ ಐದು ವರ್ಷಗಳಲ್ಲಿ ದೇಶದಲ್ಲಿ ಪೆಟ್ರೋಲ್ ಖಾಲಿಯಾಗಲಿದ್ದು, ಇದರಿಂದಾಗಿ ದೇಶದಲ್ಲಿ ಪಳೆಯುಳಿಕೆ ಇಂಧನವನ್ನು ನಿಷೇಧಿಸಲಾಗುವುದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.

ರೈತರು ಕೇವಲ ಆಹಾರ ಪೂರೈಕೆದಾರರಾಗದೆ ಇಂಧನ ಪೂರೈಕೆದಾರರಾಗುವ ಅಗತ್ಯವನ್ನು ಗಡ್ಕರಿ ಎತ್ತಿ ತೋರಿಸಿದರು. ಕೇವಲ ಗೋಧಿ, ಭತ್ತ, ಜೋಳ ಹಾಕುವುದರಿಂದ ಯಾವ ರೈತನೂ ತನ್ನ ಭವಿಷ್ಯವನ್ನು ಬದಲಾಯಿಸಲು ಸಾಧ್ಯವಿಲ್ಲ ಎಂದು ಹೇಳಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT