ಮೊಹಮ್ಮದ್ ಜುಬೈರ್ 
ದೇಶ

ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್ ಜುಬೇರ್ ಗೆ ಸುಪ್ರೀಂ ಕೋರ್ಟ್ 5 ದಿನಗಳ ಮಧ್ಯಂತರ ಜಾಮೀನು

ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಎಫ್ಐಆರ್ ಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

ನವದೆಹಲಿ: ಉತ್ತರ ಪ್ರದೇಶದ ಸೀತಾಪುರದಲ್ಲಿ ದಾಖಲಾಗಿದ್ದ ಕೇಸಿಗೆ ಸಂಬಂಧಿಸಿದಂತೆ ಆಲ್ಟ್ ನ್ಯೂಸ್‌ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್‌ಗೆ ಸುಪ್ರೀಂ ಕೋರ್ಟ್ ಶುಕ್ರವಾರ ಮಧ್ಯಂತರ ಜಾಮೀನು ನೀಡಿದೆ.

ಅಲಹಾಬಾದ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಜುಬೇರ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಉತ್ತರ ಪ್ರದೇಶ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಟ್ವೀಟ್‌ನಲ್ಲಿ ಹಿಂದೂ ದಾರ್ಶನಿಕರನ್ನು 'ದ್ವೇಷ ಪ್ರಚೋದಕರು' ಎಂದು ಟೀಕಿಸಿದ್ದ ಹಿನ್ನೆಲೆಯಲ್ಲಿ ದಾಖಲಾಗಿದ್ದ ಎಫ್ಐಆರ್ ನ್ನು ವಜಾಗೊಳಿಸಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿತ್ತು.

ಕೇಸಿಗೆ ಸಂಬಂಧಪಟ್ಟಂತೆ ಯಾವುದೇ ಹೊಸ ಟ್ವೀಟ್ ನ್ನು ಪೋಸ್ಟ್ ಮಾಡಬಾರದು ಹಾಗೂ ಸೀತಾಪುರ ಮ್ಯಾಜಿಸ್ಟ್ರೇಟ್ ಕೋರ್ಟ್ ವ್ಯಾಪ್ತಿಯಿಂದ ಹೊರಗೆ ಹೋಗಬಾರದು ಎಂದು ಷರತ್ತು ವಿಧಿಸಿ 5 ದಿನಗಳಿಗೆ ಜುಬೇರ್ ಗೆ ಮಧ್ಯಂತರ ಜಾಮೀನು ನೀಡಲಾಗಿದೆ. ಜುಬೇರ್ ಬೆಂಗಳೂರು ಸೇರಿದಂತೆ ಯಾವ ಕಡೆಯಲ್ಲಿಯೂ ಕೂಡ ಸಾಕ್ಷಿಗಳನ್ನು ತಿರುಚಬಾರದು ಎಂದು ಕೂಡ ಸುಪ್ರೀಂ ಕೋರ್ಟ್ ಷರತ್ತು ಹಾಕಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT