ಉದ್ಧವ್ ಠಾಕ್ರೆ- ಶಿಂಧೆ (ಸಂಗ್ರಹ ಚಿತ್ರ) 
ದೇಶ

ಸಿಎಂ ಹುದ್ದೆಗೆ ಏಕನಾಥ್ ಶಿಂಧೆ ನೇಮಕ ಪ್ರಶ್ನಿಸಿ ಅರ್ಜಿ: ಜುಲೈ 11 ರಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 11 ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. 

ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಹುದ್ದೆಗೆ ಏಕನಾಥ್ ಶಿಂಧೆ ಅವರ ನೇಮಕವನ್ನು ಪ್ರಶ್ನಿಸಿ ಮಾಜಿ ಸಿಎಂ ಉದ್ಧವ್ ಠಾಕ್ರೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಜುಲೈ 11 ರಂದು ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. 

ರಜೆ ಪೀಠದ ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಹಾಗೂ ಜೆಕೆ ಮಹೇಶ್ವರಿ ಅವರಿದ್ದ ಪೀಠ ಜುಲೈ 11 ಕ್ಕೆ ಪ್ರಕರಣವನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ತಿಳಿಸಿದೆ.

ಹಿರಿಯ ಅಡ್ವೊಕೇಟ್ ದೇವದತ್ ಕಾಮತ್ ಶಿವಸೇನೆಯ ನಾಯಕ ಸುಭಾಷ್ ದೇಸಾಯಿ ಅವರ ಪರ ಹಾಜರಾಗಿ, ಈಗಾಗಲೇ ಬಾಕಿ ಇರುವ ಅರ್ಜಿಗಳೊಂದಿಗೆ ಹೊಸ ಅರ್ಜಿ ವಿಚಾರಣೆಯನ್ನೂ ನಡೆಸಬೇಕೆಂದು ನ್ಯಾಯಪೀಠಕ್ಕೆ ಮನವಿ ಮಾಡಿದ್ದಾರೆ. 

ದೇಸಾಯಿ ಜೂನ್ 30 ರಂದು ಶಿಂಧೆ ಬಣ ಹಾಗೂ ಬಿಜೆಪಿಗೆ ಸರ್ಕಾರ ರಚಿಸಲು ಆಹ್ವಾನಿಸಿದ ರಾಜ್ಯಪಾಲರ ನಿರ್ಧಾರವನ್ನು ಕೋರ್ಟ್ ನಲ್ಲಿ ಪ್ರಶ್ನಿಸಿದ್ದಾರೆ. ಹೊಸ ಸ್ಪೀಕರ್ ಆಯ್ಕೆ ಸೇರಿದಂತೆ ಜುಲೈ 3-4 ರಂದು ನಡೆದ ವಿಧಾನಸಭಾ ಪ್ರಕ್ರಿಯೆಗಳನ್ನೂ ಸಹ ಠಾಕ್ರೆ ಬಣ ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಾವಣಗೆರೆಯಲ್ಲಿ ಕಾಂಗ್ರೆಸ್ ಬೆನ್ನಿಗೆ ಚೂರಿ: ಸುರ್ಜೇವಾಲ ಕೈಸೇರಿದ ರಿಪೋರ್ಟ್; MLC ಅಬ್ದುಲ್ ಜಬ್ಬಾರ್ ರಾಜಿನಾಮೆ!

ಬೆಳಗಾವಿಯಲ್ಲಿ ಲೋಕಾಯುಕ್ತ ದಾಳಿ: ಕೋಟಿ ಕೋಟಿ ಆಸ್ತಿ ಪತ್ತೆ; ದಿನಗೂಲಿ ನೌಕರನೊಬ್ಬ ಕುಬೇರನಾದ ಕಥೆ ಇದು!

ಒಂದು ಸಲ ಅಧಿಕಾರ ಕೊಟ್ಟು ನೋಡಿ, ರಾಜ್ಯಕ್ಕೆ ಹಿಡಿದಿರೋ ಗ್ರಹಣ ಬಿಡಿಸ್ತೀನಿ: ಕುಮಾರಸ್ವಾಮಿ

ಮಧ್ಯಸ್ಥಿಕೆ ಯಾರೇ ವಹಿಸಲಿ ಅದರಿಂದ ಭಾರತಕ್ಕೇ ಲಾಭ! US ಜೊತೆ ಅಂಥಹ ಸಂಬಂಧ ಪಾಕ್ ಗೆ ಮಾತ್ರ ಸಾಧ್ಯ ಬೇರಾರಿಗೂ ಅಲ್ಲ- ತರೂರ್ ವ್ಯಂಗ್ಯ

ಹುಬ್ಬಳ್ಳಿ ಆಯ್ತು ಈಗ ಕೊಪ್ಪಳದಲ್ಲೂ Love Jihad: ಮುಸ್ತಫಾ ಮೊಬೈಲ್‌ನಲ್ಲಿ Hindu ಯುವತಿಯರ ಅಶ್ಲೀಲ ವಿಡಿಯೋಗಳು ಪತ್ತೆ!

SCROLL FOR NEXT