ರೇಜರ್ ಪೇ ಮತ್ತು ಆಲ್ಟ್ ನ್ಯೂಸ್ ಮುಖ್ಯಸ್ಥ ಜುಬೇರ್ 
ದೇಶ

ದೇಶೀಯ ಪಾವತಿ ಸ್ವೀಕರಿಸಲಷ್ಟೇ ಆಲ್ಟ್‌ ನ್ಯೂಸ್‌ಗೆ ಅನುಮತಿ ನೀಡಲಾಗಿತ್ತು: ರೇಜರ್‌ಪೇ ಸ್ಪಷ್ಟನೆ

ವಿವಾದಿತ ಟ್ವೀಟ್ ಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಫ್ಯಾಕ್ಟ್‌ ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಮುಖ್ಯಸ್ಥ ಮಹಮದ್ ಜುಬೈರ್ ಅವರಿಗೆ ದೇಶೀಯ ಪಾವತಿ ಸ್ವೀಕಾರಕ್ಕಷ್ಟೇ ಅನುಮತಿ ನೀಡಲಾಗಿತ್ತು ಎಂದು  ರೇಜರ್‌ಪೇ ಸ್ಪಷ್ಟನೆ ನೀಡಿದೆ.

ನವದೆಹಲಿ: ವಿವಾದಿತ ಟ್ವೀಟ್ ಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿರುವ ಫ್ಯಾಕ್ಟ್‌ ಚೆಕ್‌ ವೆಬ್‌ಸೈಟ್‌ ‘ಆಲ್ಟ್‌ ನ್ಯೂಸ್‌’ ಮುಖ್ಯಸ್ಥ ಮಹಮದ್ ಜುಬೈರ್ ಅವರಿಗೆ ದೇಶೀಯ ಪಾವತಿ ಸ್ವೀಕಾರಕ್ಕಷ್ಟೇ ಅನುಮತಿ ನೀಡಲಾಗಿತ್ತು ಎಂದು  ರೇಜರ್‌ಪೇ ಸ್ಪಷ್ಟನೆ ನೀಡಿದೆ.

ಆಲ್ಟ್‌ ನ್ಯೂಸ್‌ ಸ್ವೀಕರಿಸಿದ ದೇಣಿಗೆಗೆ ಸಂಬಂಧಿಸಿದಂತೆ ಹಣಕಾಸು ತಂತ್ರಜ್ಞಾನ ಸೇವಾ ಸಂಸ್ಥೆ, ರೇಜರ್‌ಪೇ ಮುಖ್ಯ ಕಾರ್ಯನಿರ್ವಾಹಕ (ಸಿಇಒ) ಅಧಿಕಾರಿ ಹರ್ಷಿಲ್ ಮಾಥುರ್ ಶುಕ್ರವಾರ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದಾರೆ.

ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೈರ್ ವಿದೇಶದಿಂದ ದೇಣಿಗೆ ಪಡೆದಿದ್ದಾರೆ ಎಂದು ದೆಹಲಿ ಪೊಲೀಸರು ಆರೋಪ ಹೊರಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಮಾಥುರ್, ‘ಕೇವಲ ದೇಶೀಯ ಪಾವತಿಗಳನ್ನು ಸ್ವೀಕರಿಸಲಷ್ಟೇ ‘ಆಲ್ಟ್‌ ನ್ಯೂಸ್‌’ಗೆ ಅನುಮತಿಸಲಾಗಿತ್ತು. ವಿದೇಶಿ ದೇಣಿಗೆ (ನಿಯಂತ್ರಣ) ಕಾಯಿದೆ–2010ರ ಅನುಮೋದನೆ ಇಲ್ಲದೇ ವಿದೇಶಿ ವಹಿವಾಟುಗಳಿಗೆ ಅವಕಾಶ ನೀಡಲಾಗುವುದಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

ಅಂತೆಯೇ ‘ಆಲ್ಟ್‌ ನ್ಯೂಸ್‌’ನ ಖಾತೆಯನ್ನು ತಾತ್ಕಾಲಿಕವಾಗಿ ನಿಷ್ಕ್ರಿಯಗೊಳಿಸಲಾಗಿದ್ದು, ನಿರ್ದಿಷ್ಟ ತನಿಖೆಗಾಗಿ ನಿರ್ದಿಷ್ಟ ದತ್ತಾಂಶವನ್ನು ಮಾತ್ರ ತನಿಖಾ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲಾಗಿದೆ ಎಂದು ಮಾಥುರ್‌ ತಿಳಿಸಿದ್ದಾರೆ.

ತನಗೆ ದೇಣಿಗೆ ನೀಡಿದವರ ಬಗೆಗಿನ ಮಾಹಿತಿಯನ್ನು ‘ರೇಜರ್‌ಪೇ’ ಪೊಲೀಸರೊಂದಿಗೆ ಹಂಚಿಕೊಂಡಿದೆ ಎಂದು ಫ್ಯಾಕ್ಟ್‌ಚೆಕ್‌ ವೆಬ್‌ಸೈಟ್ ‘ಆಲ್ಟ್ ನ್ಯೂಸ್’ ಆರೋಪಿಸಿತ್ತು. ಇದಕ್ಕೂ ಪ್ರತಿಕ್ರಿಯೆ ನೀಡಿರುವ ಮಾಥುರ್, ‘ದಾನಿಗಳ ಪ್ಯಾನ್, ವಿಳಾಸ, ಪಿನ್ ಕೋಡ್ ಇತ್ಯಾದಿಗಳನ್ನು ಹಂಚಿಕೊಂಡಿಲ್ಲ. ಇದು ತನಿಖೆಯ ವ್ಯಾಪ್ತಿಯಿಂದ ಹೊರಗಿನ ಅಂಶಗಳು ಎಂದು ನಾವು ನಂಬಿದ್ದೇವೆ’ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT