ಸೇನೆ, ಎನ್ ಡಿಆರ್ ಎಫ್ ನಿಂದ ಯಾತ್ರಿಕರ ರಕ್ಷಣಾ ಕಾರ್ಯ 
ದೇಶ

ಅಮರನಾಥ ಮೇಘಸ್ಫೋಟ: ಮೃತ ಯಾತ್ರಿಕರ ಸಂಖ್ಯೆ 16ಕ್ಕೆ ಏರಿಕೆ, 15 ಸಾವಿರ ಯಾತ್ರಿಕರ ಸ್ಥಳಾಂತರ

ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ/ಶ್ರೀನಗರ: ಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿದ ಗಡಿ ಭದ್ರತಾ ಪಡೆಯ ವಕ್ತಾರ, ಬಲ್ತಲ್ ಗೆ 16 ಮೃತದೇಹಗಳನ್ನು ರವಾನಿಸಲಾಗಿದೆ, ತನ್ನ ಮಾರ್ಗವನ್ನು ಐಟಿಬಿಪಿ ವಿಸ್ತರಿಸಿದ್ದು ಪಂಜತರ್ನಿಯವರೆಗೆ ಪವಿತ್ರ ಗುಹೆಯ ಕೆಳಭಾಗದಿಂದ ಕಳುಹಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಜೂನ್ 30ರಂದು ಆರಂಭವಾಗಿದ್ದ ಪವಿತ್ರ ಅಮರನಾಥ ಯಾತ್ರೆ ನಂತರ ದುರಂತ ನಂತರ ಸ್ಥಗಿತಗೊಂಡಿತ್ತು. ಇನ್ನು ಪರಿಹಾರ ರಕ್ಷಣಾ ಕಾರ್ಯ ಮುಗಿದ ನಂತರ ಯಾತ್ರೆ ಪುನರಾರಂಭದ ಕುರಿತು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎನ್ ಡಿಆರ್ ಎಫ್ ಡಿಜಿ ಅತುಲ್ ಕಾರ್ವಾಲ್, 16 ಮಂದಿ ಯಾತ್ರಿಕರು ಮೃತಪಟ್ಟಿದ್ದಾರೆ. ಇನ್ನೂ 40 ಮಂದಿ ಕಾಣೆಯಾಗಿದ್ದಾರೆ. ನಿನ್ನೆಯ ನಂತರ ಭೂಕುಸಿತ ಉಂಟಾಗಿಲ್ಲ, ಮಳೆ ಸುರಿದಿಲ್ಲ, ರಕ್ಷಣಾ ಕಾರ್ಯ ನಿರಾತಂಕವಾಗಿ ಸಾಗುತ್ತಿದೆ. 4 ಎನ್ ಡಿಆರ್ ಎಫ್ ತಂಡ 100ಕ್ಕೂ ಹೆಚ್ಚು ಮಂದಿ ರಕ್ಷಣಾ ಕಾರ್ಯಕರ್ತರು ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಭಾರತೀಯ ಸೇನೆ, ಎಸ್ ಡಿಆರ್ ಎಫ್, ಸಿಆರ್ ಪಿಎಫ್ ಮತ್ತು ಇತರರು ರಕ್ಷಣಾ ಕಾರ್ಯ ಮುಂದುವರಿಸಿದ್ದಾರೆ ಎಂದರು.

ನಿನ್ನೆ ರಾತ್ರಿಯಿಂದ ಇಂದು ಬೆಳಗ್ಗೆಯವರೆಗೆ 29 ಮಂದಿಯನ್ನು ರಕ್ಷಿಸಲಾಗಿದ್ದು 9 ಮಂದಿ ತೀವ್ರ ಗಾಯಗೊಂಡಿದ್ದಾರೆ ಎಂದು ಭಾರತೀಯ ವಾಯುಪಡೆ ಅಧಿಕಾರಿಗಳು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT