ಅಮರನಾಥ ಗುಹೆ ಬಳಿ ಮೇಘಸ್ಫೋಟ 
ದೇಶ

ಮೇಘಸ್ಪೋಟವಾದ ಹತ್ತೇ ನಿಮಿಷದಲ್ಲಿ ಪ್ರವಾಹದ ನೀರು ನುಗ್ಗಿತು: ಅಮರನಾಥ ಯಾತ್ರಿಕರ ಕರಾಳ ಅನುಭವ

ಮೇಘಸ್ಫೋಟಕ್ಕೆ ಸಿಲುಕಿದ ಅಮರನಾಥ ಪವಿತ್ರ ಗುಹೆಯಿಂದ ಸೋನಾಮಾರ್ಗ್‌ನ ಬಾಲ್ಟಾಲ್ ಬೇಸ್ ಕ್ಯಾಂಪ್ ತಲುಪಿದ ರಕ್ಷಿಸಲ್ಪಟ್ಟ ಯಾತ್ರಾರ್ಥಿಗಳು ತಮ್ಮ ಘೋರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಶ್ರೀನಗರ: ಮೇಘಸ್ಫೋಟಕ್ಕೆ ಸಿಲುಕಿದ ಅಮರನಾಥ ಪವಿತ್ರ ಗುಹೆಯಿಂದ ಸೋನಾ ಮಾರ್ಗ್‌ನ ಬಾಲ್ಟಾಲ್ ಬೇಸ್ ಕ್ಯಾಂಪ್ ತಲುಪಿದ ರಕ್ಷಿಸಲ್ಪಟ್ಟ ಯಾತ್ರಾರ್ಥಿಗಳು ತಮ್ಮ ಘೋರ ಅನುಭವಗಳನ್ನು ಹಂಚಿಕೊಂಡಿದ್ದಾರೆ.

ಉತ್ತರ ಪ್ರದೇಶದ ಹರ್ದೋಯ್‌ನ ಯಾತ್ರಾರ್ಥಿ ದೀಪಕ್ ಚೌಹಾಣ್ ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ್ದು, "ಅಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ ಸಂಭವಿಸಿದೆ, ಆದರೆ ಸೇನೆಯು ಸಾಕಷ್ಟು ಬೆಂಬಲ ನೀಡಿತು. ಪ್ರವಾಹದ ಕಾರಣದಿಂದಾಗಿ ಅನೇಕ ಪೆಂಡಾಲ್‌ಗಳು ಕೊಚ್ಚಿಹೋಗಿವೆ ಎಂದು ಹೇಳಿದ್ದಾರೆ.

ಇನ್ನು ಮಹಾರಾಷ್ಟ್ರದ ಯಾತ್ರಿ ಸುಮಿತ್, "ಮೇಘಸ್ಫೋಟ ಸಂಭವಿಸಿದ ಹತ್ತೇ ನಿಮಿಷದಲ್ಲಿ ಪ್ರವಾಹ ನೀರು ನುಗ್ಗಿತು. ನೀರಿನೊಂದಿಗೆ ದೊಡ್ಡ ದೊಡ್ಡ ಗಾತ್ರದ ಬಂಡೆಗಲ್ಲುಗಳು ಕೂಡ ನೀರಿನೊಂದಿಗೆ ಕ್ಯಾಂಪ್ ನತ್ತ ನುಗ್ಗಿತು. ನಾವು ಮೇಘಸ್ಫೋಟದ ಸ್ಥಳದಿಂದ ಎರಡು ಕಿಲೋಮೀಟರ್ ದೂರದಲ್ಲಿದ್ದೆವು ಎಂದು ಹೇಳಿದ್ದಾರೆ.

ಮತ್ತೊಬ್ಬ ಯಾತ್ರಿಕರು ಮಾತನಾಡಿ, "ಮೇಘಸ್ಫೋಟ ಸಂಭವಿಸಿದಾಗ ನಮಗೆ ನಂಬಲಾಗಲಿಲ್ಲ. ಸ್ವಲ್ಪ ಸಮಯದ ನಂತರ ನಾವು ಸುತ್ತಮುತ್ತಲ ಪ್ರದೇಶದಲ್ಲಿ ಅಪಾರ ಪ್ರಮಾಣದ ನೀರನ್ನು ನೋಡಿದ್ದೇವೆ. ನಾವು ಏಳೆಂಟು ಜನರ ಗುಂಪು, ಭೋಲೆನಾಥನ ಕೃಪೆಯಿಂದ ಪಾರಾಗಿದ್ದೇವೆ. ಆದರೆ, ನಾವು ಜನರು ಮತ್ತು ಟೆಂಟ್ ಗಳು ನೀರಿನಿಂದ ಕೊಚ್ಚಿಕೊಂಡು ಹೋಗುವುದನ್ನು ನಾವು ನೋಡಿದ್ದರಿಂದ ಎಲ್ಲರಿಗೂ ಘೋರ ಅನುಭವವಾಯಿತು ಎಂದು ಹೇಳಿದ್ದಾರೆ.

"ಮೇಘಸ್ಫೋಟದ 10 ನಿಮಿಷಗಳಲ್ಲಿ, ಎಂಟು ಸಾವುನೋವುಗಳು ವರದಿಯಾಗಿದೆ. ನೀರು ಅದರೊಂದಿಗೆ ಹೆಚ್ಚಿನ ಸಂಖ್ಯೆಯ ಕಲ್ಲುಗಳನ್ನು ಹೊತ್ತೊಯ್ದಿದೆ. ಸುಮಾರು 15,000 ಯಾತ್ರಿಕರು ತೀರ್ಥಯಾತ್ರೆಗೆ ಬಂದಿದ್ದರು. ಭಾರೀ ಮಳೆಯ ನಡುವೆಯೂ ಯಾತ್ರಾರ್ಥಿಗಳು ಬರುತ್ತಲೇ ಇದ್ದರು. ಭಾರತೀಯ ಸೇನೆ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಪಡೆಗಳು ಇಂದು ಮುಂಜಾನೆ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

ಶುಕ್ರವಾರ, ಅಮರನಾಥದ ಪವಿತ್ರ ದೇಗುಲದ ಸಮೀಪವಿರುವ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ 13 ಜನರು ಸಾವನ್ನಪ್ಪಿದ್ದಾರೆ ಮತ್ತು 48 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರದ ಗಂದರ್ಬಲ್ ಮುಖ್ಯ ವೈದ್ಯಾಧಿಕಾರಿ ಡಾ. ಎ ಶಾ ಹೇಳಿದ್ದಾರೆ.

ಈಗಿನಂತೆ, ಗಾಯಗೊಂಡ ಎಲ್ಲಾ ರೋಗಿಗಳನ್ನು ಎಲ್ಲಾ ಮೂರು ಮೂಲ ಆಸ್ಪತ್ರೆಗಳಲ್ಲಿ ನೋಡಿಕೊಳ್ಳಲಾಗುತ್ತಿದೆ. ಮೇಲಿನ ಪವಿತ್ರ ಗುಹೆ, ಕೆಳಗಿನ ಪವಿತ್ರ ಗುಹೆ, ಪಂಜತಾರ್ನಿ ಮತ್ತು ಪವಿತ್ರ ಗುಹೆಗೆ ಹೋಗುವ ಮಾರ್ಗದಲ್ಲಿ ಇತರ ಹತ್ತಿರದ ಸೌಲಭ್ಯಗಳನ್ನು ಈ ನಿಲ್ದಾಣಗಳಲ್ಲಿ ನಿಯೋಜಿಸಲಾದ ಆರೋಗ್ಯ ಕಾರ್ಯಕರ್ತರು ಮೇಲ್ವಿಚಾರಣೆ ಮಾಡುತ್ತಿದ್ದಾರೆ.

ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಅಧಿಕಾರಿಗಳ ಪ್ರಕಾರ, ಕೆಳಗಿನ ಪವಿತ್ರ ಗುಹೆಯಲ್ಲಿ (ಅಮರನಾಥ) ಸಂಜೆ 5:30 ರ ಸುಮಾರಿಗೆ ಮೇಘಸ್ಫೋಟ ಸಂಭವಿಸಿದೆ ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT