ಶಿವನ ವೇಷ ಧರಿಸಿದ್ದ ಬಿರಿಂಚಿ ಬೋರಾ 
ದೇಶ

ಗುವಾಹಟಿ: ಬೆಲೆ ಏರಿಕೆ ವಿರುದ್ಧ ಬೀದಿ ನಾಟಕ; ಶಿವನ ವೇಷಧಾರಿಯ ಬಂಧನ

ಬೀದಿ ನಾಟಕದ ವೇಳೆ ಶಿವನ ವೇಷ ಧರಿಸಿದ್ದ ವ್ಯಕ್ತಿಯನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಅಸ್ಸಾಂನಲ್ಲಿ ಬಂಧಿಸಲಾಗಿದೆ.

ಗುವಾಹಟಿ: ಬೀದಿ ನಾಟಕದ ವೇಳೆ ಶಿವನ ವೇಷ ಧರಿಸಿದ್ದ ವ್ಯಕ್ತಿಯನ್ನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಅಸ್ಸಾಂನಲ್ಲಿ ಬಂಧಿಸಲಾಗಿದೆ.

ನರೇಂದ್ರ ಮೋದಿ ಸರ್ಕಾರದಲ್ಲಿ ಬೆಲೆ ಏರಿಕೆಯ ವಿರುದ್ಧ ಪ್ರತಿಭಟಿಸಲು ನಿನ್ನೆ ಮಹಿಳೆಯೊಬ್ರು ಪಾರ್ವತಿಯ ವೇಷ ಧರಿಸಿದ್ರು. ಇವರೊಂದಿಗೆ ಬಿರಿಂಚಿ ಬೋರಾ ಎಂಬುವವರು ಭಗವಾನ್ ಶಿವನ ವೇಷವನ್ನು ಧರಿಸಿ ಬೀದಿ ನಾಟಕ ಪ್ರದರ್ಶಿಸಿದ್ರು. ಈ ವೀಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿತ್ತು.

ಈ ಕೃತ್ಯವನ್ನು ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಂತಹ ಹಿಂದೂ ಗುಂಪುಗಳು ಟೀಕಿಸಿದವು. ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಸಿದ ಅವರು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ್ದಾರೆ ಮತ್ತು ರಾಜಕೀಯ ಉದ್ದೇಶಗಳಿಗಾಗಿ ಧರ್ಮವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿ ದೂರು ದಾಖಲಿಸಿದರು. ದೂರಿನ ನಂತರ ಬಿರಿಂಚಿ ಬೋರಾನನ್ನು ಬಂಧಿಸಿ ನಾಗಾನ್ ಸದರ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಯಿತು.

ಬೀದಿ ನಾಟಕದಲ್ಲಿ ಬಿರಿಂಚಿ ಬೋರಾ ಮತ್ತು ಅವರ ಸಹ-ನಟಿ ಪರಿಶಿಮಿತಾ ಶಿವ ಮತ್ತು ಪಾರ್ವತಿಯ ವೇಷವನ್ನು ಧರಿಸಿ ರಸ್ತೆಯೊಂದರಲ್ಲಿ ಬೀದಿ ನಾಟಕ ಪ್ರದರ್ಶನಕ್ಕೆ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದರು. ಈ ವೇಳೆ ಗೊತ್ತುಪಡಿಸಿದ ಸ್ಥಳದಲ್ಲಿ ವಾಹನದಲ್ಲಿ ಇಂಧನ ಖಾಲಿಯಾಗಿ ವಾಹನ ನಿಂತುಹೋಗುತ್ತದೆ. ಈ ವೇಳೆ ಶಿವ – ಪಾರ್ವತಿ ನಡುವೆ ವಾದ ನಡೆದು ಏರುತ್ತಿರುವ ಇಂಧನ ಬೆಲೆಗಳು ಮತ್ತು ಇತರ ವಿಷಯಗಳ ಬಗ್ಗೆ ಮೋದಿ ಸರ್ಕಾರದ ಮೇಲೆ ದಾಳಿ ಮಾಡಲು ಪ್ರಾರಂಭಿಸುತ್ತಾರೆ.

ಬೆಲೆ ಏರಿಕೆಯಿಂದ ಮುಕ್ತಿ ಪಡೆಯಲು ನರೇಂದ್ರ ಮೋದಿ ಸರ್ಕಾರದ ವಿರುದ್ಧ ಸಾರ್ವಜನಿಕರು ಪ್ರತಿಭಟನೆಗೆ ಮುಂದಾಗಬೇಕು ಎಂದು ಮನವಿ ಮಾಡುತ್ತಾರೆ. ಈ ವಿಡಿಯೋ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು.

ಶಿವವೇಷಧಾರಿಯನ್ನ ಬಂಧಿಸಿ ನಂತರ ಬಾಂಡ್ ಮೇಲೆ ಬಿಡುಗಡೆ ಮಾಡಲಾಯಿತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT