ಬಾಬುಲ್ ಸುಪ್ರಿಯೋ 
ದೇಶ

ಟಿಎಂಸಿ ರಾಷ್ಟ್ರೀಯ ವಕ್ತಾರರಾಗಿ ಬಬುಲ್ ಸುಪ್ರಿಯೊ ನೇಮಕ

ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಬಬುಲ್ ಸುಪ್ರಿಯೊ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ. ತನಗೆ ಹೊಸ ಜವಾಬ್ದಾರಿ ನೀಡಿದ್ದಕ್ಕಾಗಿ ಪಕ್ಷದ ವರಿಷ್ಠರಿಗೆ ಮಾಜಿ ಕೇಂದ್ರ ಸಚಿವ ಬಬುಲ್ ಸುಪ್ರಿಯೊ ಅವರು...

ಕೊಲ್ಕತಾ: ತೃಣಮೂಲ ಕಾಂಗ್ರೆಸ್(ಟಿಎಂಸಿ) ಶಾಸಕ ಬಬುಲ್ ಸುಪ್ರಿಯೊ ಅವರನ್ನು ಪಕ್ಷದ ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಲಾಗಿದೆ. ತನಗೆ ಹೊಸ ಜವಾಬ್ದಾರಿ ನೀಡಿದ್ದಕ್ಕಾಗಿ ಪಕ್ಷದ ವರಿಷ್ಠರಿಗೆ ಮಾಜಿ ಕೇಂದ್ರ ಸಚಿವ ಬಬುಲ್ ಸುಪ್ರಿಯೊ ಅವರು ಟ್ವಿಟರ್‌ನಲ್ಲಿ ಧನ್ಯವಾದ ತಿಳಿಸಿದ್ದಾರೆ.

ಟಿಎಂಸಿಯ ರಾಷ್ಟ್ರೀಯ ವಕ್ತಾರರ ಸುಪ್ರಸಿದ್ಧ ತಂಡದಲ್ಲಿ ನನ್ನನ್ನು ನೇಮಿಸಿದ್ದಕ್ಕಾಗಿ/ಸೇರಿಸಿದ್ದಕ್ಕಾಗಿ ಗೌರವಾನ್ವಿತ ದೀದಿ ಅವರಿಗೆ ನನ್ನ ಪ್ರಾಮಾಣಿಕ ಕೃತಜ್ಞತೆಗಳು. ನನಗೆ ವಹಿಸಿದ ಜವಾಬ್ದಾರಿಯನ್ನು ನಿಭಾಯಿಸಲು ನನ್ನ ಕೈಲಾದಷ್ಟು ಪ್ರಯತ್ನಿಸುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಬಬುಲ್ ಸುಪ್ರಿಯೊ ಅವರನ್ನು ರಾಷ್ಟ್ರೀಯ ವಕ್ತಾರರನ್ನಾಗಿ ನೇಮಿಸಿರುವುದು ಬಂಗಾಳದ ಹೊರಗೆ ತನ್ನ ನೆಲೆಯನ್ನು ವಿಸ್ತರಿಸಲು ಪಕ್ಷವು ರೂಪಿಸಿದ ಕಾರ್ಯತಂತ್ರದ ಒಂದು ಭಾಗವಾಗಿದೆ ಎಂದು ಟಿಎಂಸಿ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.

ಬಬುಲ್ ಸುಪ್ರಿಯೊ ಗಾಯಕ ಮತ್ತು ರಾಜಕಾರಣಿಯಾಗಿ ದೇಶಾದ್ಯಂತ ಚಿರಪರಿಚಿತ ಮುಖವಾಗಿದ್ದಾರೆ. ಆದ್ದರಿಂದ ಅವರು ನಮ್ಮ ಅಭಿಪ್ರಾಯಗಳು ಮತ್ತು ನೀತಿಗಳನ್ನು ರಾಷ್ಟ್ರೀಯ ವೇದಿಕೆಯಲ್ಲಿ ಇರಿಸಲು ನಮಗೆ ಸಹಾಯ ಮಾಡಬಹುದು ಎಂದು ಟಿಎಂಸಿ ನಾಯಕರು ತಿಳಿಸಿದ್ದಾರೆ.

ಬಬುಲ್ ಸುಪ್ರಿಯೊ ಅವರನ್ನು ಕಳೆದ ವರ್ಷ ಕೇಂದ್ರ ಸಚಿವಾಲಯದಿಂದ ಕೈಬಿಟ್ಟ ನಂತರ ಅವರು ಟಿಎಂಸಿಗೆ ಸೇರ್ಪಡೆಯಾದರು. ಎರಡು ಬಾರಿ ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿದ್ದ ಅಸನ್ಸೋಲ್ ಲೋಕಸಭಾ ಸ್ಥಾನವನ್ನು ತ್ಯಜಿಸಿದರು.

ಈ ವರ್ಷದ ಏಪ್ರಿಲ್‌ನಲ್ಲಿ ನಡೆದ ಬ್ಯಾಲಿಗುಂಜ್ ವಿಧಾನಸಭಾ ಉಪಚುನಾವಣೆಯಲ್ಲಿ ಟಿಎಂಸಿಯಿಂದ ಆರಾಮಾದಾಯಕ ಅಂತರದಿಂದ ಬಬುಲ್ ಸುಪ್ರಿಯೊ ಗೆಲುವು ದಾಖಲಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?