ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿ ಮುರ್ಮು 
ದೇಶ

ರಾಷ್ಟ್ರಪತಿ ಚುನಾವಣೆ ವಿಷಯವಾಗಿ ಶಿವಸೇನೆಯ 13 ಸಂಸದರ ಸಭೆ: ಮುರ್ಮುಗೆ ಹೆಚ್ಚು ಸದಸ್ಯರ ಬೆಂಬಲ 

ರಾಷ್ಟ್ರಪತಿ ಚುನಾವಣೆ ವಿಷಯವಾಗಿ ಶಿವಸೇನೆಯ 18 ಸಂಸದರ ಪೈಕಿ 13 ಮಂದಿ ಜು.11 ರಂದು ಮಹಾರಾಷ್ಟ್ರದಲ್ಲಿ ಸಭೆ ನಡೆಸಿದ್ದಾರೆ. 

ಮುಂಬೈ: ರಾಷ್ಟ್ರಪತಿ ಚುನಾವಣೆ ವಿಷಯವಾಗಿ ಶಿವಸೇನೆಯ 18 ಸಂಸದರ ಪೈಕಿ 13 ಮಂದಿ ಜು.11 ರಂದು ಮಹಾರಾಷ್ಟ್ರದಲ್ಲಿ ಸಭೆ ನಡೆಸಿದ್ದಾರೆ. 

ಸಭೆಯಲ್ಲಿ ಭಾಗವಹಿಸಿದ್ದವರ ಪೈಕಿ ಹೆಚ್ಚಿನ ಸದಸ್ಯರು ಎನ್ ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಬೇಕೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಪಕ್ಷದ ನಾಯಕ ಗಜಾನನ್ ಕಿರಿತ್ಕರ್ ಹೇಳಿದ್ದಾರೆ. ಆದರೆ ಪಕ್ಷದ ಸಂಸದರೂ ಆಗಿರುವ ಮುಖ್ಯ ವಕ್ತಾರ ಸಂಜಯ್ ರೌತ್, ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಲಿಲ್ಲ.
 
ಮಹಾರಾಷ್ಟ್ರವಲ್ಲದೇ ಶಿವಸೇನೆ ಸಂಸದರು ಕೇಂದ್ರಾಡಳಿತ ಪ್ರದೇಶಗಳಾದ ದಾದ್ರಾ ನಗರ್ ಹವೇಲಿ, ದಾಮನ್ ಹಾಗೂ ಡಿಯುಗಳಲ್ಲೂ ಇದ್ದಾರೆ. 13 ಸಂಸದರಷ್ಟೇ ಭಾಗಿಯಾದರೂ ಸಭೆಗೆ ಹಾಜರಾಗದೇ ಇದ್ದ ಉಳಿದ ಸಂಸದರ ಪೈಕಿ ಸಂಜಯ್ ಜಾದವ್, ಸಂಜಯ್ ಮಂಡಲಿಕ್, ಹೇಮಂತ್ ಪಾಟೀಲ್ ಸಭೆಗೆ ಬರಲು ಸಾಧ್ಯವಾಗದೇ ಇದ್ದರೂ ಅವರ ಬೆಂಬಲವನ್ನು ನಾಯಕತ್ವಕ್ಕೆ ವ್ಯಕ್ತಪಡಿಸಿದ್ದಾರೆ ಎಂದು ಕಿರಿತ್ಕರ್ ಹೇಳಿದ್ದಾರೆ.

ಶಿವಸೆನೆಯ ಇಬ್ಬರು ಲೋಕಸಭಾ ಸದಸ್ಯರು ಭಾವನ ಗವಾಲಿ ಹಾಗೂ ಸಿಎಂ ಏಕನಾಥ್ ಶಿಂಧೆ ಅವರ ಪುತ್ರ ಶ್ರೀಕಾಂತ್ ಶಿಂಧೆ ಸಭೆಯಲ್ಲಿ ಭಾಗಿಯಾಗಲಿಲ್ಲ. ಜು.18 ರಂದು ರಾಷ್ಟ್ರಪತಿ ಚುನಾವಣೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

SCROLL FOR NEXT