ಯೋಗಿ ಆದಿತ್ಯನಾಥ್ 
ದೇಶ

ಜನಸಂಖ್ಯಾ ಅಸಮತೋಲನ ಸಂಭವಿಸಲು ಅವಕಾಶ ನೀಡಬಾರದು: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವು ಯಶಸ್ವಿಯಾಗಿ ಮುಂದುವರಿಯಬೇಕು ಆದರೆ ಅದೇ ಸಮಯದಲ್ಲಿ ಜನಸಂಖ್ಯಾ ಅಸಮತೋಲನ ಸಂಭವಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಲಖನೌ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವು ಯಶಸ್ವಿಯಾಗಿ ಮುಂದುವರಿಯಬೇಕು ಆದರೆ ಅದೇ ಸಮಯದಲ್ಲಿ ಜನಸಂಖ್ಯಾ ಅಸಮತೋಲನ ಸಂಭವಿಸಲು ಅವಕಾಶ ನೀಡಬಾರದು ಎಂದು ಹೇಳಿದ್ದಾರೆ.

ಜನಸಂಖ್ಯೆ ನಿಯಂತ್ರಣ ದಿನಾಚರಣೆಯಲ್ಲಿ ಮಾತನಾಡಿದ ಅವರು ನಾವು ಕುಟುಂಬ ಯೋಜನೆ/ಜನಸಂಖ್ಯಾ ಸ್ಥಿರೀಕರಣದ ಬಗ್ಗೆ ಮಾತನಾಡುವಾಗ, ಜನಸಂಖ್ಯಾ ನಿಯಂತ್ರಣ ಕಾರ್ಯಕ್ರಮವು ಯಶಸ್ವಿಯಾಗಿ ಮುಂದುವರಿಯಬೇಕು. ಆದರೆ ನಾವು ನೆನಪಿನಲ್ಲಿಟ್ಟುಕೊಳ್ಳಬೇಕಾಗಿರುವುದೇನೆಂದರೆ ಅದೇ ಸಮಯದಲ್ಲಿ ಜನಸಂಖ್ಯೆಯ ಅಸಮತೋಲನದ ಪರಿಸ್ಥಿತಿ ಸಂಭವಿಸಲು ಅವಕಾಶ ನೀಡಬಾರದು ಎಂದರು.

ಜನಸಂಖ್ಯಾ ಸ್ಥಿರೀಕರಣದ ಜಾಗೃತಿಗೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಕಳೆದ ಐದು ದಶಕಗಳಿಂದ ನಡೆಸಲಾಗುತ್ತಿದೆ ಎಂದು ಹೇಳಿದರು. ಒಂದು ಪ್ರಮಾಣದಲ್ಲಿ ಜನಸಂಖ್ಯೆಯು ಸಮಾಜದ ಸಾಧನೆಯಾಗಿದೆ. ಆದರೆ ಸಮಾಜವು ಆರೋಗ್ಯವಾಗಿ ಮತ್ತು ರೋಗ ಮುಕ್ತವಾಗಿದ್ದಾಗ ಮಾತ್ರ ಇದು ಸಾಧನೆಯಾಗಿ ಉಳಿಯುತ್ತದೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶವು ದೇಶದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ರಾಜ್ಯ ಎಂದು ಹೇಳಿದ ಯೋಗಿ ಆದಿತ್ಯನಾಥ್, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪ್ರಧಾನರು, ಶಿಕ್ಷಕರು ಮತ್ತು ಇತರರು ಆರೋಗ್ಯ ಇಲಾಖೆಯೊಂದಿಗೆ ಒಟ್ಟಾಗಿ ಕೆಲಸ ಮಾಡಬಹುದು. ಈ ದಿಸೆಯಲ್ಲಿ ಸಾಮೂಹಿಕ ಪ್ರಯತ್ನದ ಅಗತ್ಯವಿದೆ ಎಂದರು.

ನಾವು ನುರಿತ ಮಾನವಶಕ್ತಿಯನ್ನು ಹೊಂದಿದ್ದರೆ, ಅದು ಸಮಾಜಕ್ಕೆ ಒಂದು ಸಾಧನೆಯಾಗಿದೆ. ಆದರೆ ರೋಗಗಳು, ಸಂಪನ್ಮೂಲಗಳ ಕೊರತೆ ಮತ್ತು ಅಸ್ವಸ್ಥತೆ ಇರುವಲ್ಲಿ, ಜನಸಂಖ್ಯಾ ಸ್ಫೋಟವು ತನ್ನದೇ ಆದ ಸವಾಲಾಗುತ್ತದೆ ಎಂದು ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT