ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಶಾಸಕ ಲೋಬೋ 
ದೇಶ

ನಾವು ಕಾಂಗ್ರೆಸ್ ಜೊತೆಗೇ ಇದ್ದೇವೆ: ಬಿಜೆಪಿ ಸೇರ್ಪಡೆ ಸಾಧ್ಯತೆ ನಿರಾಕರಿಸಿದ ಗೋವಾ ಶಾಸಕ ಮೈಕೆಲ್ ಲೋಬೋ

ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕ ಮೈಕೆಲ್ ಲೋಬೋ ಪ್ರತಿಕ್ರಿಯೆ ನೀಡಿದ್ದು ನಾವು ಕಾಂಗ್ರೆಸ್ ಜೊತೆಗೇ ಇದ್ದೇವೆ ಎಂದು ಹೇಳಿದ್ದು, ಬಿಜೆಪಿ ಸೇರುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.

ಪಣಜಿ: ಗೋವಾದಲ್ಲಿ ಆಪರೇಷನ್ ಕಮಲದ ಸಾಧ್ಯತೆಗಳ ವರದಿ ಪ್ರಕಟವಾದ ಬೆನ್ನಲ್ಲೇ ಬಿಜೆಪಿ ಜೊತೆ ಸಂಪರ್ಕದಲ್ಲಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕಾಂಗ್ರೆಸ್ ಶಾಸಕ ಮೈಕೆಲ್ ಲೋಬೋ ಪ್ರತಿಕ್ರಿಯೆ ನೀಡಿದ್ದು ನಾವು ಕಾಂಗ್ರೆಸ್ ಜೊತೆಗೇ ಇದ್ದೇವೆ ಎಂದು ಹೇಳಿದ್ದು, ಬಿಜೆಪಿ ಸೇರುವ ಸಾಧ್ಯತೆಯನ್ನು ತಳ್ಳಿಹಾಕಿದ್ದಾರೆ.
 
ವಿಪಕ್ಷ ನಾಯಕನ ಸ್ಥಾನದಿಂದ ಮೈಕಲ್ ಲೋಬೋ ಅವರನ್ನು ವಜಾಗೊಳಿಸಿದ್ದ ಕಾಂಗ್ರೆಸ್ ಪಕ್ಷ, ಲೋಬೋ ಹಾಗೂ ಮಾಜಿ ಸಿಎಂ ದಿಗಂಬರ್ ಕಾಮತ್ ಅವರು ಬಿಜೆಪಿಯ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದು, ಕಾಂಗ್ರೆಸ್ ನಲ್ಲಿ ಬಿರುಕು ಮೂಡಿಸಲು ಪಿತೂರಿ ರೂಪಿಸಿದ್ದಾರೆ ಎಂದು ಆರೋಪಿಸಿತ್ತು.
 
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಲೋಬೋ, ತಮ್ಮನ್ನು ವಜಾಗೊಳಿಸಿರುವುದಕ್ಕೆ ಕಾರಣ ತಿಳಿದಿಲ್ಲ. ದಕ್ಷಿಣ ಗೋವಾದಲ್ಲಿ ಎಲ್ಲಾ ಶಾಸಕರೂ ಒಟ್ಟಿಗೇ ಇದ್ದೆವು. ತಾವು ವಿಪಕ್ಷ ನಾಯಕನಾಗಿ ಮುಂದುವರೆಲು ಅನಾಸಕ್ತಿ ಹೊಂದಿರುವುದನ್ನು ಪಕ್ಷಕ್ಕೆ ತಿಳಿಸಿದ್ದೆ ಎಂದು ಹೇಳಿದ್ದಾರೆ. 

ಸಮಸ್ಯೆ ಏನೆಂಬುದು ನನಗೆ ತಿಳಿಯುತ್ತಿಲ್ಲ. ಎಲ್ಲಾ ಕಾಂಗ್ರೆಸ್ ಶಾಸಕರೂ ಒಟ್ಟಿಗೇ ಇದ್ದರು. ನಾವು ದಕ್ಷಿಣ ಗೋವಾಗೆ ಹೋಗಿದ್ದೆವು. ಮತ್ತೊಮ್ಮೆ ಅವರು ಮತ್ತೊಂದು ಸುದ್ದಿಗೋಷ್ಠಿ ನಡೆಸಲು ಉದ್ದೇಶಿಸಿದ್ದರು. ನಾನು ವಿಪಕ್ಷನಾಯಕನಾಗಿ ಮುಂದುವರೆಯುವುದಿಲ್ಲ ಎಂಬುದನ್ನು ಪಕ್ಷದ ನಾಯಕರಿಗೆ ತಿಳಿಸಿ ಮನವಿ ಮಾಡಿದ್ದೆ. 

ನಾವು ಕಾಂಗ್ರೆಸ್ ಟಿಕೆಟ್ ಪಡೆದು ಗೆದ್ದಿದ್ದೇವೆ, ನಾವು ಕಾಂಗ್ರೆಸ್ ಪಕ್ಷದಲ್ಲೇ ಇದ್ದೇವೆ. ನಾವು ಕಾಂಗ್ರೆಸ್ ಜೊತೆಗೇ ಇರುತ್ತೇವೆ. ಆದ್ದರಿಂದ ಇಷ್ಟು ಪತ್ರಿಕಾಗೋಷ್ಠಿ ನಡೆಸುವ ಪ್ರಶ್ನೆಯೇ ಬರುವುದಿಲ್ಲ. ವಿಪಕ್ಷ ನಾಯಕನಾಗಿ ಮುಂದುವರೆಯುವುದಕ್ಕೆ ನನಗೆ ಆಸಕ್ತಿ ಇಲ್ಲ ಎಂದು ಪಕ್ಷದ ನಾಯಕರಿಗೆ ತಿಳಿಸಿದ್ದೆ. ನನ್ನ ವಿರುದ್ಧ ಸಾಕಷ್ಟು ವಿಷಯಗಳನ್ನು ಪ್ರಸ್ತಾಪಿಸಲಾಗುತ್ತಿದೆ ಎಂದು ಲೊಬೋ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

Udaipur: ನಿಜಕ್ಕೂ ಅಚ್ಚರಿ, 55ನೇ ವಯಸ್ಸಿನಲ್ಲಿ 17ನೇ ಮಗುವಿಗೆ ತಾಯಿಯಾದ ಮಹಿಳೆ!

SCROLL FOR NEXT